ಸಂಸತ್ ಭದ್ರತಾ ಲೋಪ | ಪತ್ರಕರ್ತರ ಪ್ರಶ್ನೆಗೆ ಉದ್ಧಟತನದಿಂದ ವರ್ತಿಸಿದ ಸಂಸದ ಪ್ರತಾಪ್ ಸಿಂಹ

Date:

ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಆರೋಪಿಗಳಿಗೆ ಲೋಕಸಭೆಯ ಒಳಗಡೆ ಪ್ರವೇಶಿಸಲು ಪಾಸ್ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಸಂಸತ್ ಭದ್ರತಾ ಲೋಪದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಉದ್ಧಟತನದಿಂದ ವರ್ತಿಸಿ ಪತ್ರಿಕಾಗೋಷ್ಠಿಯಿಂದ ಎದ್ದುಹೋದ ಪ್ರಸಂಗ ನಡೆದಿದೆ.

ಮೈಸೂರಿನಲ್ಲಿ ಇಂದು (ಡಿ.29) ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ವೇಳೆ, ಕೇಂದ್ರ ಸರ್ಕಾರದಿಂದ ತಮ್ಮ ಲೋಕಸಭಾ ಕ್ಷೇತ್ರಕ್ಕೆ ಬಂದ ಯೋಜನೆ ಹಾಗೂ ಅನುದಾನಗಳ ಬಗ್ಗೆ ತಿಳಿಸುತ್ತಿದ್ದರು.

“ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಮಾಡಿಸಿದ್ದು ನಾನೇ. ಅದಕ್ಕೆ ಪ್ರಧಾನಿ ಮೋದಿಯವರು ಸಹಕಾರ ನೀಡಿದ್ದಾರೆ. ಮೋದಿಯವರಿಂದ ಮಾರ್ಚ್ 12,2023ರಲ್ಲಿ ಈ ಯೋಜನೆ ಉದ್ಘಾಟನೆಯಾಗಿದೆ. ಈ ನಡುವೆ ಸಚಿವ ಮಹದೇವಪ್ಪ, ಸಿದ್ದರಾಮಯ್ಯನವರು ಎಲ್ಲಿದ್ದರು?” ಎಂದು ಹೇಳುತ್ತಾ, ಸುದ್ದಿಗೋಷ್ಠಿಯಿಂದ ಹೊರಡಲು ಅನುವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಪತ್ರಕರ್ತರೋರ್ವರು, “ಪ್ರತಿಯೊಂದು ವಿಚಾರದಲ್ಲೂ ಮಾತನಾಡುತ್ತಿದ್ದ ಪ್ರತಾಪ್ ಸಿಂಹ ಅವರು ಸಂಸತ್‌ನ ಭದ್ರತಾ ಲೋಪದ ವಿಚಾರದಲ್ಲಿ ಯಾಕೆ 2024ರಲ್ಲಿ ಮತದಾರರು ನೋಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದೀರಿ?” ಎಂದು ಪ್ರಶ್ನಿಸಿದರು.

ಪತ್ರಕರ್ತನ ಬಳಿ, ನಿನ್ನ ಹೆಸರೇನು ಎಂದು ಕೇಳಿದ ಪ್ರತಾಪ್ ಸಿಂಹ, ‘ನನ್ನ ಈ ಹೇಳಿಕೆಯನ್ನು ತಗೋಬೇಡಿ, ಕ್ಯಾಮರಾ ಆಫ್ ಮಾಡಿ’ ಎಂದು ಸೂಚಿಸಿದ್ದಾರೆ.

“ಅರಿವು ಬರುವುದಕ್ಕೋಸ್ಕರ ಹೇಳುತ್ತೇನೆ” ಎಂದು ಹೇಳುವಾಗ ಕ್ಯಾಮರಾ ರೆಕಾರ್ಡಿಂಗ್ ಅಲ್ಲಿರುವುದನ್ನು ಗಮನಿಸಿ, ‘ಆಫ್ ಮಾಡಿ’ ಎಂದು ಮತ್ತೊಮ್ಮೆ ಪತ್ರಕರ್ತರಿಗೆ ಸೂಚಿಸಿದ್ದಾರೆ. ಆಮೇಲೂ ಉತ್ತರಿಸದೇ, ‘ನನಗೆ ಮೀಟಿಂಗ್ ಇದೆ’ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದ್ದಾರೆ.

ಅಲ್ಲದೇ, ಹೀಗೆ ಪತ್ರಿಕಾಗೋಷ್ಠಿಯಿಂದ ತೆರಳುವಾಗ, ‘ಮಾಡೋಕ್ ಕೆಲಸವಿಲ್ಲದೇ ಬರ್ತಾರೆ, ನಾನೇನ್ ಮಾಡ್ಲಿ. ಸಂಸತ್ ಪ್ರವೇಶಕ್ಕೆ ಗೊತ್ತಿರುವ ವ್ಯಕ್ತಿಯಾದ್ದರಿಂದ ಪಾಸ್ ಕೊಡಿಸಿದ್ದೆ.‌ಆತ ಹೊಗೆ ಬಾಂಬ್ ಸಿಡಿಸುತ್ತಾನೆ ಎಂದು ನನಗೆ ಗೊತ್ತಿತ್ತಾ ಎಂದು ಹೇಳಿಕೊಂಡು ಹೊರನಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...