ಎಲ್ಲರನ್ನು ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ?: ಪ್ರಿಯಾಂಕ್ ಖರ್ಗೆ

Date:

ರಾಮ ಮಂದಿರ ನಿರ್ಮಾಣ ಮಾಡಿರುವುದು ಒಳ್ಳೆಯದು. ಆದರೆ, ಎಲ್ಲರನ್ನೂ ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಬಾಗಲಕೋಟೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಿರುದ್ಯೋಗ ರಹಿತ, ಬೆಲೆ ಏರಿಕೆ ನಿಯಂತ್ರಿಸುವ, ಆರ್ಥಿಕ ಸಬಲತೆಯ ಆಡಳಿತದ ಜನರ‌ ನಿರೀಕ್ಷೆ‌ ಹುಸಿಯಾಗಿದೆ” ಎಂದರು.

“ಜನರಿಗೆ ಬಿಜೆಪಿ ಉಚಿತ ಯೋಜನೆ ಘೋಷಿಸಿದರೆ ಜನ ಕಲ್ಯಾಣಕ್ಕಾಗಿ, ಕಾಂಗ್ರೆಸ್ ಕೊಟ್ಟರೆ ಆರ್ಥಿಕ ದಿವಾಳಿಯಾಗುತ್ತದೆ ಎಂಬ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ. ಅಯುಷ್ಮಾನ್,‌ ನರೇಗಾ ಯೋಜನೆಗಳಲ್ಲಿ ರಾಜ್ಯದ ಪಾಲು ಶೇ 50ರಷ್ಟಿದ್ದರೂ, ಕೇಂದ್ರದ್ದೇ ಎನ್ನುವಂತೆ ಪ್ರಚಾರ ಪಡೆಯುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

“ರಾಜ್ಯದ ಹಿತಾಸಕ್ತಿ, ಜನರಿಗೆ ಸತ್ಯ ತಿಳಿಸುವುದಕ್ಕಾಗಿ ಕೋವಿಡ್ ಸಂದರ್ಭದಲ್ಲಿ ನಡೆದ‌ ₹40 ಸಾವಿರ ಕೋಟಿ ಮೊತ್ತ‌ ಹಗರಣದ ದಾಖಲೆಗಳನ್ನು ಯತ್ನಾಳ್‌ ಅವರು ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

“ಕಾಂಗ್ರೆಸ್ ಆರೋಪ ಮಾಡಿದಾಗ ಸುಳ್ಳು ಎಂದು ಹೇಳುತಿದ್ದ ಬಿಜೆಪಿ ನಾಯಕರು ಎಲ್ಲಿದ್ದಾರೆ? ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಜನರಿಗೆ ಉತ್ತರಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...