ಸಿಎಂ ಸಿದ್ದರಾಮಯ್ಯ ಅವಧಿ ಅರ್ಧಕ್ಕೆ ಎಂದು ಯಾರೂ ಹೇಳಿಲ್ಲ: ಸತೀಶ್ ಜಾರಕಿಹೊಳಿ

Date:

  • ಎಸ್ಟಿ ಸಮುದಾಯದ ವ್ಯಕ್ತಿಯೊಬ್ಬರು ಸಿಎಂ ಆಗಬೇಕು: ಶಾಸಕ ರಾಜಣ್ಣ
    • ಟ್ರೈಬಲ್ ಯೂನಿವರ್ಸಿಟಿ ತೆರೆಯುವ ಚಿಂತನೆ ಇದೆ: ಸಚಿವ ನಾಗೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿ ಅರ್ಧಕ್ಕೆ ಅಂತ ಯಾರೂ ಹೇಳಿಲ್ಲ. ಸಿಎಂ ಆಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರೆಯುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಇಂದು ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅಧಿಕಾರಾವಧಿ ಎರಡೂವರೆ ವರ್ಷ ಎಂದು ಎಲ್ಲೂ ಹೇಳಿಲ್ಲ. ಸಿಎಂ ಬದಲಾವಣೆ ಮಾಡುವುದು ಬಿಡುವುದು ಅದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮುದಾಯದ ಸ್ವಾಮೀಜಿಗಳಿಗೆ ಸಚಿವ ಜಾರಕಿಹೊಳಿ ಕಿವಿಮಾತು ಹೇಳಿ ಸಮುದಾಯ ಬದ್ದತೆ ಮೆರೆಯುವಂತೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಎಸ್ಟಿ ಮೀಸಲಾತಿ ನೀಡಿದೆ ಎಂದು ನೀವು ಮರುಳಾಗಬೇಡಿ. ಎಸ್ಟಿ ಸಮುದಾಯಕ್ಕೆ ಬಿಜೆಪಿ ಪ್ರೀತಿಯಿಂದ ಮೀಸಲಾತಿ ಕೊಟ್ಟಿಲ್ಲ. ಚುನಾವಣೆಯಲ್ಲಿ ಸಮುದಾಯ ಕೈಕೊಡುತ್ತೆ ಎನ್ನುವ ಭಯದಲ್ಲಿ ಕೊಟ್ಟಿದ್ದಾರೆ. ಸ್ವಾಮೀಜಿಯ 274 ದಿನ ಧರಣಿಗೆ ಹೆದರಿ ಬಿಜೆಪಿ ಮೀಸಲಾತಿ ನೀಡಿದೆ” ಎಂದರು.

“ಹಾಗಂತ ಸ್ವಾಮೀಜಿ ಬಿಜೆಪಿ ಅವರು ಬಂದಾಗ ಅವರಂತೆ, ನಾವು ಬಂದಾಗ ನಮ್ಮಂತೆ ಇರಬಾರದು. ಬಿಜೆಪಿಯ ನಾಲ್ಕೈದು ಜನರ ಮೇಲೆ ಮಾತ್ರ ವಿಶ್ವಾಸವಿಡಿ. ಎಲ್ಲರನ್ನೂ ನಂಬಬೇಡಿ. ವಾಲ್ಮೀಕಿ ಸಮುದಾಯ ಕಾಂಗ್ರೆಸ್‌ಗೆ ಕೇವಲ 46% ಮತ ಹಾಕಿದೆ. 54% ನಮಗೆ ವಿರೋಧವಾಗಿ ಮತ ಚಲಾಯಿಸಿದ್ದಾರೆ. ನೋಡೋಣ ಮುಂದಿನ ದಿನಗಳಲ್ಲಿ ಸುಮುದಾಯದವರು ಬದಲಾಗುತ್ತಾರೆ” ಎಂದು ಅವರು ಹೇಳಿದರು.

ಸಮುದಾಯ ಭವನ ಕೇಳುವ ಬದಲು ಶಿಕ್ಷಣ, ಶಾಲೆಗಳನ್ನು ಕೇಳಿ

“ಎಸ್ಸಿ-ಎಸ್ಟಿ ಸಮುದಾಯಕ್ಕೆ ಸಮುದಾಯ ಭವನಕ್ಕಿಂತ ಶಾಲೆಗಳು ಮುಖ್ಯ. ಯಾರೂ ಇದುವರೆಗೆ ನಮ್ಮೂರಿಗೆ ಶಾಲೆ ಬೇಕು ಎಂದು ಕೇಳಿಲ್ಲ. ನಾನು 21 ವರ್ಷದಿಂದ ನೋಡುತ್ತಿದ್ದೇನೆ. ಬರೀ ಸಮುದಾಯ ಭವನಕ್ಕೆ ಎಂದು ನನ್ನ ಬಳಿ ಬರುತ್ತಾರೆ. ಎಸ್ಸಿ-ಎಸ್ಟಿ ಸಮುದಾಯವರು ಸಮುದಾಯ ಭವನಕ್ಕೆ ಹೋರಾಟ ಮಾಡುವುದನ್ನು ಕೈಬಿಡಬೇಕು. ಶಿಕ್ಷಣ ಯಾರೂ ಕದಿಯಲಾರದ ಆಸ್ತಿ. ಹೀಗಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿ, ಸಮುದಾಯ ಭವನದ ಬೇಡಿಕೆ ನಿಂತು ಶಾಲೆ ಬೇಕು ಎನ್ನುವ ಬೇಡಿಕೆ ಬರಬೇಕು” ಎಂದು ಅವರು ಕಿವಿಮಾತು ಹೇಳಿದರು.ಕೆ ಎನ್_ ರಾಜಣ್ಣ

ನಮ್ಮ ಸಮುದಾಯವರು ಸಿಎಂ-ಡಿಸಿಎಂ ಆಗಬೇಕು

ಇದೇ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕೆ ಎನ್ ರಾಜಣ್ಣ, ರಾಜ್ಯದಲ್ಲಿ ನಾಯಕ ಸಮಾಜದವರು ಮುಂದೆ ಡಿಸಿಎಂ ಹಾಗು ಸಿಎಂ ಆಗಬೇಕು. ಆ ಅರ್ಹತೆ ಸತೀಶ್ ಜಾರಕಿಹೊಳಿಗೆ ಇದೆ. ನಾನು ಮುಂದೆ ಯಾವುದೇ ಚುನಾವಣೆಯಲ್ಲೂ ನಿಲ್ಲುವುದಿಲ್ಲ. ಆದರೆ ನಮ್ಮ ಗುರಿ ಒಂದೇ: ನಮ್ಮ ಸಮುದಾಯದ ವ್ಯಕ್ತಿ ಮುಂದಿನ ಮುಖ್ಯಮಂತ್ರಿಯಾಗುವುದು” ಎಂದರು.

ಸಮಾಜದ ಹೆಸರಲ್ಲಿ ನಕಲಿ ಜಾತಿ ಪ್ರಮಾಣಪತ್ರ

“ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯಲಾಗುತ್ತಿದೆ. ಅದು ಎಲ್ಲರಿಗೂ ಗೊತ್ತಿದ್ದರೂ ಏನೂ ಮಾಡಲಾಗದ ಸ್ಥಿತಿಯಲ್ಲಿದ್ದೇವೆ. ನಕಲಿ ಜಾತಿ ಪತ್ರ ವ್ಯವಸ್ಥೆ ತಪ್ಪಿಸದಿದ್ದರೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಮುಖ್ಯಮಂತ್ರಿ ಅವಧಿ ಹೇಳಿಕೆ: ಸಚಿವ ಮಹದೇವಪ್ಪ ಬಗ್ಗೆ ಡಿ ಕೆ ಸುರೇಶ್ ಅಸಮಾಧಾನ

ಬಿ ನಾಗೇಂದ್ರ

ಟ್ರೈಬಲ್ ಯೂನಿವರ್ಸಿಟಿ ಮಾಡಲು ಚಿಂತನೆ

ಎಸ್ಟಿ ಸಮುದಾಯಕ್ಕೆ ಅನುಕೂಲ ಆಗಲು ಟ್ರೈಬಲ್ ಯೂನಿವರ್ಸಿಟಿ ಮಾಡಲು ಚಿಂತನೆ ನಡೆದಿದೆ ಎಂದು ಸಮಾರಂಭದಲ್ಲಿ ಹಾಜರಿದ್ದ ಮತ್ತೋರ್ವ ಸಚಿವ ನಾಗೇಂದ್ರ ತಿಳಿಸಿದರು. ಟ್ರೈಬಲ್ ಯೂನಿವರ್ಸಿಟಿಗೆ ಹಣ ಇಲ್ಲವೆಂದು ಹಣಕಾಸು ಇಲಾಖೆ ಹೇಳುತ್ತಿದೆ. ಮನಸ್ಸಿದ್ದರೆ ಮಾರ್ಗ. ಸಿಎಂ ಗಮನಕ್ಕೆ ತಂದು ಟ್ರೈಬಲ್ ಯೂನಿವರ್ಸಿಟಿ ಮಾಡಿಯೇ ತೀರುತ್ತೇವೆ ಎಂದು ನಾಗೇಂದ್ರ ಹೇಳಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯ ಬೇಡಿಕೆ ಇದೆ. ಪ್ರತ್ಯೇಕ ಸಚಿವಾಲಯ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಅನುಕೂಲವಾಗುತ್ತದೆ. ವಾಲ್ಮೀಕಿ ಸಮುದಾಯದ ಕ್ಲಾಸ್ 1, 2 ಗುತ್ತಿಗೆದಾರರಿಗೆ 20% ಅಡ್ವಾನ್ಸ್ ಕೊಡಲು ಚಿಂತನೆ ನಡೆದಿದೆ ಎಂದವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...