ಯಾರು ಅಧಿಕಾರಕ್ಕೆ? ಬೇರೆಯೇ ಭವಿಷ್ಯ ಹೇಳುತ್ತಿವೆ ಗ್ರೌಂಡ್‌ನಲ್ಲಿ ಕೆಲಸ ಮಾಡಿರುವ ನಾಗರಿಕ ಸಂಘಟನೆಗಳು

Date:

2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಹಲವಾರು ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಎಲ್ಲ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎ ಪರವಾಗಿದ್ದು, ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿವೆ. ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗ್ರೌಂಡ್‌ನಲ್ಲಿ ಕೆಲಸ ಮಾಡಿರುವ ಕೆಲವು ನಾಗರಿಕ ಸಂಘಟನೆಗಳು ಮತ್ತು ಮುಖಂಡರು ಕೂಡ ತಮ್ಮ ಅಭಿಪ್ರಾಯಗಳನ್ನು ತಿಳಿಸಿದೆ. ಬೇರೆಯದ್ದೇ ಭವಿಷ್ಯ ಹೇಳುತ್ತಿದ್ದಾರೆ.

ನಾಗರಿಕ ಸಂಘಟನೆಗಳ ಪ್ರಕಾರ, ಈ ಬಾರಿಯ ಚುನಾವಣೆಯಲ್ಲಿ ಬೆಲೆ ಏರಿಕೆ, ನಿರುದ್ಯೋಗವು ಈ ಬಾರಿಯ ಚುನಾವಣೆಯಲ್ಲಿ ಮುಖ್ಯ ವಿಚಾರವಾಗಿತ್ತು. ಇಂಡಿಯಾ ಒಕ್ಕೂಟವು ಸುಮಾರು 267 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅಭಿಪ್ರಾಯಿಸಿದೆ.

ಕರ್ನಾಟಕ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15ರಲ್ಲಿ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು 13ರಲ್ಲಿ ಗೆಲುವು ಸಾಧಿಸಲಿದೆ ಎಂದು ಅಭಿಪ್ರಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿ ಹೆಚ್ಚು ಅಂದರೆ 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟವು 30ರಲ್ಲಿ ಗೆಲುವು ಸಾಧಿಸಲಿದೆ ಎಂದು ಅಭಿಪ್ರಾಯಿಸಿದೆ.

ಇನ್ನು ಪಂಜಾಬ್‌ನಲ್ಲಿ 11, ಹರಿಯಾಣದಲ್ಲಿ 7, ರಾಜಸ್ಥಾನದಲ್ಲಿ 8 ರಿಂದ 12, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 30, ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟವು 30, ಬಿಹಾರದಲ್ಲಿ 14, ಉತ್ತರಾಖಂಡದಲ್ಲಿ 3, ಛತ್ತೀಸ್‌ಗಢದಲ್ಲಿ 7 ಸ್ಥಾನ, ತಮಿಳುನಾಡಿನಲ್ಲಿ 39, ಕೇರಳದಲ್ಲಿ 20, ಹಿಮಾಚಲ ಪ್ರದೇಶದಲ್ಲಿ 2, ತೆಲಂಗಾಣದಲ್ಲಿ 10, ದೆಹಲಿಯಲ್ಲಿ 4, ಅಸ್ಸಾಂ + ಈಶಾನ್ಯದಲ್ಲಿ 10 ಸ್ಥಾನ, ಗುಜರಾತ್‌ನಲ್ಲಿ 3, ಜಮ್ಮು ಕಾಶ್ಮೀರದಲ್ಲಿ 4, ಜಾರ್ಖಂಡಿನಲ್ಲಿ 10 ಸೇರಿದಂತೆ ಒಟ್ಟು 267 ಸ್ಥಾನಗಳು ಗೆಲ್ಲಲಿದೆ ಎಂದು ಅಂದಾಜಿಸಿದ್ದಾರೆ.

ಉತ್ತರ ಪ್ರದೇಶದ ಸಾಮಾಜಿಕ ಕಾರ್ಯಕರ್ತರಾಗಿರುವ ಮನೀಶ್ ಶರ್ಮಾ, ಜಾಗೋ ತೆಲಂಗಾಣದ ಮುಖಂಡರಾದ ಅಕುನುರಿ ಮುರಳಿ, ತಮಿಳುನಾಡು ಹಾಗೂ ಕೇರಳದ ರಾಜಕೀಯ ಬಗ್ಗೆ ಅನುಭವ ಹೊಂದಿರುವ ಶ್ರೀಧರ್ ರಾಧಾಕೃಷ್ಣನ್, ಮಧ್ಯಪ್ರದೇಶದ ಡಾ. ಸುನಿಲಮ್, ಛತ್ತೀಸ್‌ಘಡದ ಸಂಜಯ್ ಪರಾಟೆ, ಮಹಾರಾಷ್ಟ್ರದ ನಿಶ್ಚಯ್, ಉತ್ತರಾಖಂಡದ ಅಜಯ್ ಜೋಶಿ ಮತ್ತಿತರರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಿಸಿದ್ದಾರೆ.

ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳು, ಅಗ್ನಿವೀರ್ ಹಾಗೂ ರೈತರ ಸಮಸ್ಯೆಗಳು, ಸಂವಿಧಾನ ಬದಲಾವಣೆಯ ವಿಚಾರ. ಮೀಸಲಾತಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ವಿಷಯಗಳಾಗಿತ್ತು ಎಂದು ಗ್ರೌಂಡ್‌ನಲ್ಲಿ ಕೆಲಸ ಮಾಡಿರುವ ನಾಗರಿಕ ಸಂಘಟನೆಗಳ ಮುಖಂಡರು ಅಭಿಪ್ರಾಯಿಸಿದ್ದಾರೆ. ಯಾವುದಕ್ಕೂ ಜೂನ್ 4ರವರೆಗೆ ಕಾದು ನೋಡಬೇಕಿದೆ.

ವಿಡಿಯೋ ನೋಡಿ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...