ಅದಾನಿಯನ್ನು ಬಿಜೆಪಿ, ಅಂಧಭಕ್ತರು ಯಾಕೆ ಸಮರ್ಥಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Date:

ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯ ಭ್ರಷ್ಟಾಚಾರ ಆರೋಪ ಮಾಡಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ಮತ್ತು ಅದರ ಕಾರ್ಯಕರ್ತರು ಅದಾನಿ ಪರವಾಗಿ ನಿಂತಿದ್ದಾರೆ. ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿರುದ್ಧದ ಭ್ರಷ್ಟಾಚಾರ ಆರೋಪದಲ್ಲಿ ಬಿಜೆಪಿಯ ನಡೆಯ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಲೇವಡಿ ಮಾಡಿದ್ದಾರೆ.

‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್‌ ಖರ್ಗೆ, “ಅದಾನಿ ವಿರುದ್ಧ ಅಮೇರಿಕಾ ನ್ಯಾಯಾಲಯ ಮಾಡಿರುವ ಭ್ರಷ್ಟಾಚಾರದ ಆರೋಪದ ವಿಚಾರದಲ್ಲಿಬಿಜೆಪಿ ಮತ್ತು ಅಂಧಭಕ್ತರು ಯಾಕೆ ಸಂವೇಶದನಾಶೀಲರಂತೆ ವರ್ತಿಸುತ್ತಿದ್ದಾರೆ. ಯಾಕೆ ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

ಇದೇ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವ ಸಂತೋಷ್‌ ಲಾಡ್‌, “ಅದಾನಿಗೂ ಬಿಜೆಪಿಗೂ ಏನು ಸಂಬಂಧ. ಭ್ರಷ್ಟಾಚಾರ ಪ್ರಕರಣದಲ್ಲಿ ಅದಾನಿಯನ್ನು ಅರೆಸ್ಟ್‌ ಮಾಡಲು ಅಮೆರಿಕ ನ್ಯಾಯಾಲಯ ಹೇಳಿದೆ. ಆದರೆ, ಅದಾನಿಯನ್ನು ಬಿಜೆಪಿಗರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿಚಾರದಲ್ಲಿ ಅಮೆರಿಕದ ಉದ್ಯಮಿಗೆ ಬಿಜೆಪಿಗರು ಯಾಕೆ ಉತ್ತರಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಅದಾನಿಗೆ ಗುಂಡಾ ಗುತ್ತಿಗೆ ಕೊಡುತ್ತಿರುವುದರಿಂದಲೇ ಅದಾನಿ ಆ ಮಟ್ಟಿಗೆ ಬೆಳೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 20 ರಂದು ಅಮೆರಿಕದ ನ್ಯೂಯಾರ್ಕ್‌ ಪೂರ್ವ ಜಿಲ್ಲೆಯ ನ್ಯಾಯಾಲಯದಲ್ಲಿ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿ ಏಳು ಮಂದಿ ವಿರುದ್ಧ ಅಂಚ ಮತ್ತು ವಂಚನೆ ಪ್ರಕರಣ ದಾಖಲಾಗಿದೆ. ಸೌರ ವಿದ್ಯುತ್ ಒಪ್ಪಂದಗಳಿಗೆ ಅನುಕೂಲಕರ ಷರತ್ತುಗಳನ್ನು ವಿಧಿಸಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅದಾನಿ 2,019 ಕೋಟಿ ರೂ. ಲಂಚ ನೀಡಿದ್ದಾರೆ. ಈ ಹಣವನ್ನು ಅಮೆರಿಕದ ಹೂಡಿಕೆದಾರರಿಗೆ ಸುಳ್ಳು ಹೇಳಿ ಸಂಗ್ರಹಿಸಿದ್ದಾರೆ. ಸುಳ್ಳು ಹೇಳುವ ಮೂಲಕ ಅಮೆರಿಕ ಉದ್ಯಮಿಗಳಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂದಿನ 20 ವರ್ಷಗಳಲ್ಲಿ ಸುಮಾರು 17,000 ಕೋಟಿ ರೂ. ಲಾಭ ದೊರೆಯುವ ಸೌರ ವಿದ್ಯುತ್‌ ಉತ್ಪಾದನಾ ಘಟಕ ಸ್ಥಾಪಿಸಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅದಾನಿ ಲಂಚ ನೀಡಿದ್ದಾರೆ ಎಂದು ಅಮೆರಿಕ ಅರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...