ಪೌರತ್ವ ಪ್ರಮಾಣಪತ್ರ ನೀಡುವುದು ಚುನಾವಣಾ ಆಯೋಗದ ಕೆಲಸವಲ್ಲ; ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಹೀಗಂದಿದ್ದೇಕೆ?

Date:

ಚುನಾವಣಾ ಆಯೋಗದ ಕೆಲಸ ಚುನಾವಣೆ ನಡೆಸುವುದು. ಆ ಕರ್ತವ್ಯವನ್ನೇ ಸರಿದೂಗಿಸಲಾಗದ ಆಯೋಗವು ಓರ್ವ ವ್ಯಕ್ತಿ ಭಾರತದ ಪ್ರಜೆಯೇ ಅಲ್ಲವೇ ಎಂದು ನಿರ್ಧರಿಸುವ ಕಾರ್ಯಕ್ಕೆ ಇಳಿದಂತಿದೆ.

ಬಿಹಾರದಲ್ಲಿ 2025ರ ನವೆಂಬರ್ ಒಳಗಾಗಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲ ಪಕ್ಷಗಳು ಈಗಾಗಲೇ ಸಿದ್ಧತೆಯನ್ನು ಆರಂಭಿಸಿವೆ. ಇಂತಹ ಹೊತ್ತಿನಲ್ಲಿ ಚುನಾವಣಾ ಆಯೋಗವು, ಚುನಾವಣೆಗೂ ಮುನ್ನ ವಿಶೇಷ ತೀವ್ರ ನಿಗಾ ಪರಾಮರ್ಶೆ(SIR) ನಡೆಸಲು ಮುಂದಾಗಿದೆ. ಚುನಾವಣಾ ಆಯೋಗದ ಈ ನಿರ್ಧಾರಕ್ಕೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇವೆಲ್ಲವುದರ ನಡುವೆ “ಪೌರತ್ವ ಪ್ರಮಾಣಪತ್ರ ನೀಡುವುದು ಚುನಾವಣಾ ಆಯೋಗದ ಕೆಲಸವಲ್ಲ” ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಹೇಳಿದ್ದಾರೆ. ಸದ್ಯ ಈ ಹೇಳಿಕೆ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಈಗಾಗಲೇ ಆರ್‌ಜೆಡಿ ಮತ್ತು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ವಿಶೇಷ ತೀವ್ರ ನಿಗಾ ಪರಾಮರ್ಶೆ ಅಥವಾ SIR ಮಾಡುವುದರಿಂದಾಗಿ ಸಾವಿರಾರು ಮತದಾರರು ಪಟ್ಟಿಯಿಂದ ಹೊರಗುಳಿಯುತ್ತಾರೆ. ಈ ಕ್ರಮ ಸರಿಯಲ್ಲ ಎಂಬುದು ಮಾಜಿ ಚುನಾವಣಾ ಆಯುಕ್ತರು, ವಿಪಕ್ಷಗಳ ವಾದ. ನೈಜವಾಗಿಯೂ ಆಯೋಗವು ಚುನಾವಣೆ ನಡೆಸುವ ಕೆಲಸವನ್ನು ಮಾಡಬೇಕೇ ಹೊರತು ಸರ್ಕಾರದ ಕೆಲಸವನ್ನು ಮಾಡಬಾರದು. ಆದರೆ ಇಂದು ನಡೆಯುತ್ತಿರುವುದೇ ಬೇರೆ.

ಇದನ್ನು ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ಪರಿಶೀಲನೆ: ಕಾಂಗ್ರೆಸ್ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ವಿಶೇಷ ತೀವ್ರ ಪರಿಷ್ಕರಣೆ?

ಅರ್ಹ ನಾಗರಿಕರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸುವ ಮತ್ತು ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವ ನಿಟ್ಟಿನಲ್ಲಿ ಜೂನ್ 24ರಂದು ವಿಶೇಷ ತೀವ್ರ ಪರಿಷ್ಕರಣೆ ಆರಂಭಿಸಲಾಗಿದೆ. ಈ ಹಿಂದೆ 2003ರಲ್ಲಿ ಬಿಹಾರದಲ್ಲಿ ಈ ರೀತಿಯ ಪರಿಷ್ಕರಣೆಯನ್ನು ಮಾಡಲಾಗಿದೆ. ಆಗಾಗ್ಗೆ ವಲಸೆ ಹೋಗುವುದು, ವಿದೇಶಿ ಅಕ್ರಮ ವಲಸಿಗರ ಹೆಸರುಗಳನ್ನು ಸೇರಿಸುವುದು, ಯುವ ನಾಗರಿಕರು ಮತ ಚಲಾಯಿಸಲು ಅರ್ಹರಾಗುವುದು, ಮತಪಟ್ಟಿಯಲ್ಲಿರುವವರು ಸಾವನ್ನಪ್ಪುವುದು – ಹೀಗೆ ಮೊದಲಾದ ಕಾರಣಗಳಿಂದಾಗಿ ಪರಿಷ್ಕರಣೆ ಮಾಡುವುದು ಅಗತ್ಯ ಎಂಬುದು ಚುನಾವಣಾ ಆಯೋಗದ ವಾದ.

ಚುನಾವಣಾ ಆಯೋಗವು ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್‌ಒ) ಮನೆ-ಮನೆ ಸಮೀಕ್ಷೆಯನ್ನು ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಾರೆ. ಫಾರ್ಮ್‌ಗಳನ್ನು ಭರ್ತಿ ಮಾಡಲು ಸಹಾಯ ಮಾಡುವ ಮತ್ತು ಫಾರ್ಮ್ ಸಂಗ್ರಹಿಸುವ ಕಾರ್ಯವನ್ನು ಈ ಬಿಎಲ್‌ಒಗಳು ಮಾಡುತ್ತಾರೆ. ಭಾನುವಾರದ ವೇಳೆಗೆ, 1,69,49,208 ಫಾರ್ಮ್‌ಗಳನ್ನು ಸ್ವೀಕರಿಸಲಾಗಿದೆ. ಅಂದರೆ ಒಟ್ಟು 7,89,69,844 (ಸುಮಾರು 7.90 ಕೋಟಿ) ಮತದಾರರಲ್ಲಿ ಶೇಕಡ 21.46ರಷ್ಟು ಮತದಾರರಿಂದ ಫಾರ್ಮ್‌ಗಳನ್ನು ಪಡೆಯಲಾಗಿದೆ. ಕಳೆದ 24 ಗಂಟೆಗಳಲ್ಲಿ ಅಂದರೆ ಶನಿವಾರ ಸಂಜೆ ಆರು ಗಂಟೆಯವರೆಗೆ, 65,32,663 ಎಣಿಕೆ ಫಾರ್ಮ್‌ಗಳನ್ನು ಸಂಗ್ರಹಿಸಲಾಗಿದೆ. 7.90 ಕೋಟಿಗೆ ಹೋಲಿಸಿದರೆ ಈವರೆಗೆ ನಡೆದಿರುವುದು ಅತಿ ಕಡಿಮೆ. ಅಪ್ಲಿಕೇಶನ್‌ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಆದರೆ ಎಲ್ಲರಿಗೂ ಆನ್‌ಲೈನ್‌ ಬಳಕೆಯ ಮಾಹಿತಿ ಇರಲಾರದು. ಆದ್ದರಿಂದ ಅರ್ಹರೂ ಮತಚಲಾವಣೆಯ ಹಕ್ಕನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ಆತಂಕವೂ ಇದೆ. ಈ ಎಲ್ಲ ಪ್ರಕ್ರಿಯೆಗೆ ಜುಲೈ 25ರವರೆಗೆ ಅವಕಾಶವಿದೆ.

2003ರಂದು ನಡೆದ ಕೊನೆಯ ತೀವ್ರ ಪರಿಷ್ಕರಣೆಯಲ್ಲಿ ಹೆಸರು ದಾಖಲಾಗದ ಯಾವುದೇ ವ್ಯಕ್ತಿ ಮತದಾನದ ಅರ್ಹತೆಯನ್ನು ಪಡೆಯಲು 11 ದಾಖಲೆಗಳಲ್ಲಿ ಕನಿಷ್ಠ ಒಂದನ್ನು ಸಲ್ಲಿಸಬೇಕಾಗುತ್ತದೆ. 1987 ಮತ್ತು 2004ರ ನಡುವೆ ಜನಿಸಿದವರು ತಮ್ಮ ಇಬ್ಬರು ಪೋಷಕರಲ್ಲಿ ಒಬ್ಬರ ಮತ್ತು 2004ರ ನಂತರ ಜನಿಸಿದವರು ಇಬ್ಬರೂ ಪೋಷಕರ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವೂ ಅತಿ ಸಂಕೀರ್ಣ.

ಅಶೋಕ್ ಲವಾಸಾ ಹೇಳುವುದೇನು?

ಚುನಾವಣಾ ಆಯೋಗವು ಮತದಾರರ ಅರ್ಹತೆ ಪರಿಷ್ಕರಣೆ ಮಾಡುತ್ತಿರುವ ನಡುವೆ ಮಾಜಿ ಚುನಾವಣಾ ಆಯುಕ್ತ(ಇಸಿ) ಅಶೋಕ್ ಲವಾಸಾ ಮತದಾರರಿಗೆ ಪೌರತ್ವ ಪ್ರಮಾಣಪತ್ರವನ್ನು ನೀಡುವುದು ಚುನಾವಣಾ ಆಯೋಗದ ಕೆಲಸವಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆ | ರಾಹುಲ್ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ಉತ್ತರಿಸಬೇಕು: ಪ್ರಶಾಂತ್ ಕಿಶೋರ್

ಜೂನ್ 24ರಂದು ನಿರ್ದೇಶನ ಹೊರಡಿಸಿದ ಇಸಿಐ ಸಂವಿಧಾನದ 326ನೇ ವಿಧಿಯನ್ನು ಉಲ್ಲೇಖಿಸಿ, “ಮತದಾರರ ಪಟ್ಟಿಯಲ್ಲಿ ಯಾರದೇ ಹೆಸರನ್ನು ನೋಂದಾಯಿಸುವುದಾದರೆ, ಆತ/ಆಕೆ ಭಾರತದ ಪ್ರಜೆಯಾಗಿರಬೇಕು. ಭಾರತದ ನಾಗರಿಕರು ಮಾತ್ರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ನೋಡಿಕೊಳ್ಳುವ ಸಾಂವಿಧಾನಿಕ ಬಾಧ್ಯತೆ ಚುನಾವಣಾ ಆಯೋಗಕ್ಕೆ ಇದೆ” ಎಂದು ಹೇಳಿದೆ.

ಆದರೆ ಚುನಾವಣಾ ಆಯೋಗದ ಈ ಹೇಳಿಕೆಯನ್ನು ಟೀಕಿಸಿರುವ ಮಾಜಿ ಆಯುಕ್ತ ಲವಾಸಾ, “ಪೌರತ್ವ ಕಾಯ್ದೆಯ ಪ್ರಕಾರ ಪೌರತ್ವ ಪ್ರಮಾಣಪತ್ರವನ್ನು ನೀಡುವುದು ರಾಜ್ಯ ಅಥವಾ ಸರ್ಕಾರದ ಜವಾಬ್ದಾರಿ. ಅದು ಇಸಿಐನ ಕೆಲಸವಲ್ಲ. ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ಚುನಾವಣೆಯ ಮೇಲ್ವಿಚಾರಣೆ ಮಾಡುವುದು ಮಾತ್ರ ಅದರ ಪಾತ್ರ” ಎಂದಿದ್ದಾರೆ.

ಮತದಾರರ ನೋಂದಣಿಯು ಕಳೆದ ಏಳು ದಶಕಗಳಿಂದ ನಡೆಯುತ್ತಿತ್ತು. ಈ ಪ್ರಕ್ರಿಯೆಯು ನಿಯಮಕ್ಕೆ ವಿರುದ್ಧವಾಗಿದ್ದು ಎಂದು ಯಾರೂ ಹೇಳಿಲ್ಲ. ಚುನಾವಣಾ ಆಯೋಗವೂ ಹೇಳಿಲ್ಲ. ಆದ್ದರಿಂದ ಇಂದಿನ ಪರಿಸ್ಥಿತಿಯಲ್ಲಿ ಸಂವಿಧಾನದ 326ನೇ ವಿಧಿಯನ್ನು ಉಲ್ಲೇಖಿಸುವುದು ಅಥವಾ ಅನ್ವಯಿಸುವುದು ಸಮಂಜಸವಲ್ಲ ಎಂದು ಅಶೋಕ್ ಲವಾಸಾ ಹೇಳಿದ್ದಾರೆ.

ಈ ಎಲ್ಲ ಬೆಳವಣಿಗೆ ನಡುವೆ ಚುನಾವಣಾ ಆಯೋಗ ಯಾರ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಪ್ರಶ್ನೆಗಳನ್ನೂ ವಿಪಕ್ಷಗಳು ಎತ್ತಿವೆ. ಆ ಪ್ರಶ್ನೆ ಹುಟ್ಟುವುದು ಸಹಜ. ಚುನಾವಣಾ ಆಯೋಗದ ಕೆಲಸ ಚುನಾವಣೆ ನಡೆಸುವುದು. ಆ ಕರ್ತವ್ಯವನ್ನೇ ಸರಿದೂಗಿಸಲಾಗದ ಆಯೋಗವು ಓರ್ವ ವ್ಯಕ್ತಿ ಭಾರತದ ಪ್ರಜೆಯೇ ಅಲ್ಲವೇ ಎಂದು ನಿರ್ಧರಿಸುವ ಕಾರ್ಯಕ್ಕೆ ಇಳಿದಂತಿದೆ.

ಈ ಒಂದು ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಜನರು ಮತದಾನದಿಂದ ಹೊರಗುಳಿಯಬಹುದು ಎಂಬುದು ಹಿರಿಯ ವಕೀಲರುಗಳಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ವಾದ. ಸದ್ಯ ಈ ಪ್ರಕ್ರಿಯೆ ವಿರುದ್ಧ ಸಲ್ಲಿಕೆಯಾದ ಅರ್ಜಿಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಜುಲೈ 10ರಂದು ವಿಚಾರಣೆ ನಡೆಸಲಿದೆ. ಸದ್ಯ ಚಿತ್ತ ಸುಪ್ರೀಂನ ತೀರ್ಪಿನ ಮೇಲೆ ನೆಟ್ಟಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...