ಸುವೆಂದು ವಿರುದ್ಧದ ಸಿಬಿಐ ಪ್ರಕರಣ ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಸ್ವಚ್ಛವಾಯಿತೇ: ಕಾಂಗ್ರೆಸ್ ವ್ಯಂಗ್ಯ

Date:

ಬಿಜೆಪಿಯ ಸುವೆಂದು ಅಧಿಕಾರಿ ವಿರುದ್ಧದ ಸಿಬಿಐ ಪ್ರಕರಣವು ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಸ್ವಚ್ಛ ಮಾಡಲಾಗಿದೆಯೇ ಎಂದು ಕಾಂಗ್ರೆಸ್ ಬುಧವಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಪ್ರಶ್ನಿಸಿದೆ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, “ನಿರ್ಗಮಿಸುತ್ತಿರುವ ಪ್ರಧಾನಿ ಪಡಿತರ ಅಂಗಡಿಯಲ್ಲಿ ತನ್ನ ಪೋಸ್ಟರ್‌ಗಳನ್ನ ಅಂಟಿಸಲೆಂದೇ 7,000 ಕೋಟಿ ಪಡಿತರ ಹಣವನ್ನು ತಡೆಹಿಡಿದಿದ್ದಾರೆಯೇ. ಸುವೇಂದು ಅಧಿಕಾರಿ ಸಿಬಿಐ ಕೇಸ್ ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಕೊಚ್ಚಿಕೊಂಡು ಹೋಗಿದೆಯೇ? ಭಾರತದ ಮಕ್ಕಳಿಗಾಗಿ ಲಸಿಕೆಗಳಿಗಿಂತ ಪ್ರಧಾನಮಂತ್ರಿಯವರು ತನ್ನ ಪ್ರಚಾರಕ್ಕೆ ಆದ್ಯತೆ ನೀಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಡಿತರ ಅಂಗಡಿಯಲ್ಲಿ ಪ್ರಧಾನಿ ಮುಖವನ್ನು ಪ್ರದರ್ಶಿಸಿಲ್ಲ ಎಂಬ ನಾವು ನಂಬಲಾಗದಷ್ಟು ಕ್ಷುಲ್ಲಕ ಕಾರಣಕ್ಕೆ ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಹಣವನ್ನು ತಡೆಹಿಡಿಯುತ್ತಿದೆ. ಪ್ರಧಾನಿ ಚಿತ್ರವನ್ನು ಫ್ಲೆಕ್ಸ್‌ಗಳಲ್ಲಿ, ಫಲಕಗಳಲ್ಲಿ ಹಾಕಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇಳಲು ಕೇಂದ್ರವು 7,000 ಕೋಟಿ ಭತ್ತ ಸಂಗ್ರಹಣೆ ಹಣವನ್ನು ತಡೆಹಿಡಿದಿದೆ” ಎಂದು ದೂರಿದ್ದಾರೆ.

ಇದನ್ನು ಓದಿದ್ದೀರಾ?  ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

“ಇದು ರಾಜ್ಯದ ಭತ್ತದ ಸಂಗ್ರಹಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಅಕ್ಕಿಯ ಲಭ್ಯತೆಗೆ ಗಂಭೀರವಾಗಿ ಅಡ್ಡಿಯಾಗಬಹುದು. ನಿರ್ಗಮಿಸುವ ಪ್ರಧಾನಿಯವರು ಪಶ್ಚಿಮ ಬಂಗಾಳದ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಏಕೆ ನಿರ್ಲಕ್ಷಿಸಿದ್ದಾರೆ? ಜನರ ದಿನನಿತ್ಯದ ಆಹಾರಕ್ಕಿಂತ ಅವರ ಪ್ರಚಾರ ಮುಖ್ಯವೇ” ಎಂದು ಪ್ರಶ್ನಿಸಿದ್ದಾರೆ.

“ಏಪ್ರಿಲ್ 2017ರಲ್ಲಿ, ನಾರದ ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಟಿಎಂಸಿ ಸಂಸದ ಸುವೇಂದು ಅಧಿಕಾರಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಏಪ್ರಿಲ್ 2019ರಲ್ಲಿ, ಸಿಬಿಐ ಸುವೇಂದು ಅಧಿಕಾರಿ ವಿಚಾರಣೆಗೆ ಲೋಕಸಭೆಯ ಸ್ಪೀಕರ್‌ ಅನುಮತಿ ಕೋರಿತು. ಡಿಸೆಂಬರ್ 2020 ರಲ್ಲಿ, ಅಧಿಕಾರಿ ಬಿಜೆಪಿಗೆ ಸೇರಿದ್ದು ಸಿಬಿಐ ಎಂದಿಗೂ ಲೋಕಸಭೆಯ ಸ್ಪೀಕರ್ ಅನುಮತಿ ಪಡೆದಿಲ್ಲ” ಎಂದು ಜೈರಾಮ್ ರಮೇಶ್ ಹೇಳಿದರು.

ಇದನ್ನು ಓದಿದ್ದೀರಾ? 272 ಸ್ಥಾನಗಳನ್ನು ಗೆಲ್ಲುವ ‘ಇಂಡಿಯಾ’ ಒಕ್ಕೂಟ: ಜೈರಾಮ್ ರಮೇಶ್

“ಅದೇ ರೀತಿ, ಟಿಎಂಸಿ ನಾಯಕ ತಪಸ್ ರಾಯ್ ಅವರು ಈ ವರ್ಷದ ಜನವರಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿಗೆ ಒಳಗಾಗಿದ್ದರು. ಮಾರ್ಚ್ ವೇಳೆಗೆ ಅವರು ಬಿಜೆಪಿಗೆ ಸೇರಿದ್ದರು. ಬಿಜೆಪಿಗೆ ಸೇರುವ ಮುನ್ನ ಸುವೆಂದು ಅಧಿಕಾರಿ ಅವರು ತಪಸ್ ರಾಯ್ ಅವರು ಪುರಸಭೆಯ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. ಆದರೆ ತಪಸ್ ರಾಯ್ ಬಿಜೆಪಿಗೆ ಸೇರಿದ ನಂತರ ಓ ಆರೋಪ ಮಾಡುತ್ತಿಲ್ಲ” ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...