ಪ್ರಜ್ವಲ್ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ? ಡಿ ಕೆ ಶಿವಕುಮಾರ್

Date:

“ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆನ್‌ಡ್ರೈವ್ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ನೋಡಿಕೊಂಡು ಬನ್ನಿ” ಎಂದು ಪತ್ರಕರ್ತರಿಗೆ ಸಲಹೆ ನೀಡಿದರು.

“ಈಗ ಪೆನ್‌ಡ್ರೈವ್ ಪ್ರಕರಣದಲ್ಲೂ ಕುಮಾರಸ್ವಾಮಿ ಅವರು ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದಾರೆ. ನಿಲುವು ಬದಲಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮೇ 7ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಯಾರು ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ವಿಶ್ಲೇಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರೇ, “ಉಪ್ಪು ತಿಂದವರು ನೀರು ಕುಡಿಯಬೇಕು, ನಮ್ಮ ಕುಟುಂಬ ಬೇರೆ, ಅವರ ಕುಟುಂಬ ಬೇರೆ” ಎಂದು ಹೇಳಿದ್ದಾರೆ. ಹಿಂದೆ ನಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೂ ಅವರೇ. ಪ್ರಜ್ವಲ್‌ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಅವರು ಕ್ಷಮೆ ಕೇಳಿದ್ದು ಅವರೇ. ಆದರೆ ಕುಮಾರಸ್ವಾಮಿ ಈಗ ತಮ್ಮ ನಿಲುವು ಬದಲಿಸುತ್ತಿರುವುದೇಕೆ?” ಎಂದರು.

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

ರಾಜ್ಯದಲ್ಲಿ ಒಕ್ಕಲಿಗರ ನಾಯಕತ್ವಕ್ಕಾಗಿ ಇಂತಹ ಪ್ರಕರಣಗಳು ಆಚೆ ಬರುತ್ತಿವೆ ಎಂಬ ಮಾತಿನ ಬಗ್ಗೆ ಕೇಳಿದಾಗ, “ಇದೆಲ್ಲವೂ ಬಿಜೆಪಿ ಸೃಷ್ಟಿಸಿರುವ ಚರ್ಚೆಗಳು. ನನಗೆ ಯಾವುದೇ ನಾಯಕತ್ವ ಬೇಡ. ಕಾಂಗ್ರೆಸ್ ಪಕ್ಷ ನಾಲ್ಕು ವರ್ಷಗಳ ಹಿಂದೆಯೇ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದೆ. ನಾನು ಕಾಂಗ್ರೆಸ್ ಅಧ್ಯಕ್ಷ . ಬಿಜೆಪಿಗರು ಗಂಟೆಗೊಂದು ಘಳಿಗೆಗೊಂದು ಮಾತನಾಡುತ್ತಿದ್ದಾರೆ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ಸಮುದಾಯದ ಜನರ ಸ್ವಾಭಿಮಾನ, ಗೌರವ ಉಳಿಸಲು ನಾನು ಅವರ ಸೇವೆ ಮಾಡುತ್ತೇನೆ. ಅದು ನನ್ನ ಧರ್ಮ. ಉಳಿದಂತೆ ನನಗೆ ನಾಯಕತ್ವದ ಪಟ್ಟ ಬೇಡ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...