ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

Date:

  • ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವ
  • ಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರು

ರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು ಮಾತಿಲ್ಲ, ಈ ಮಾತು ಭಜರಂಗದಳಕ್ಕೂ ಅನ್ವಯಿಸುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

ವಿಧಾನಸೌಧದಲ್ಲಿ ತಮ್ಮ ಕೊಠಡಿ ಪೂಜೆ ನೆರವೇರಿಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಜರಂಗದಳದವರಿಗೆ ತಮ್ಮ ಸಂಘಟನೆ ನಿಷೇಧದ ಬಗ್ಗೆ ಅಷ್ಟೇಕೆ ಆತಂಕ ಎಂದರು.

ನಾನು ನಮ್ಮ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ವಿಚಾರವನ್ನು ಅವರು ಸರಿಯಾಗಿ ನೋಡಿ, ಓದಿ ತಿಳಿದುಕೊಳ್ಳಬೇಕು. ನಾವೆಲ್ಲೂ ಆ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಹೇಳಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾರು ಸಮಾಜದ ಶಾಂತಿಯನ್ನ ಕದಡುತ್ತಾರೆ, ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಹೀಗಿರುವಾಗ ಅವರು ಆ ಕಾರ್ಯ ಮಾಡುವುದಿಲ್ಲ ಎಂದಾದ ಮೇಲೆ ಅವರಿಗೆ ನಿಷೇಧದ ಬಗ್ಗೆ ಚಿಂತೆ ಯಾಕೆ ಎಂದ ಅವರು, ಈ ವಿಚಾರ ಅವರಿಗೆ ಅರ್ಥವಾದರೆ ಸಾಕು ಎಂದರು.

ಈ ಮಾತುಕತೆಗೂ ಮುನ್ನ ತಮ್ಮ ಕಚೇರಿ ಪೂಜೆ ವಿಚಾರದಲ್ಲಿನ ಪ್ರಶ್ನೆಗಳಿಗೆ ಉತ್ತರಿಸಿದ ಪರಮೇಶ್ವರ್, ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ, ಅನೇಕ ಜನ ಇದಕ್ಕೆ ಟೀಕೆ-ಟಿಪ್ಪಣೆ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಂಡಿದ್ದೇವೆ. ಅದರಂತೆ ದೇವರನ್ನ ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ, ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತಹ ವಿಚಾರ ಎಂದರು.

ಈ ಸುದ್ದಿ ಓದಿದ್ದೀರಾ?:‌ ಖಾತೆ ಮರು ಹಂಚಿಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ತಮ್ಮ ಇಲಾಖೆ ಮತ್ತು ಜವಾಬ್ದಾರಿ ಕುರಿತು ಅಭಿಪ್ರಾಯ ಹಂಚಿಕೊಂಡ ಗೃಹ ಸಚಿವರು, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ,‌ ಪೊಲೀಸ್ ಇಲಾಖೆಯಲ್ಲಿ ಸಲ್ಯೂಟ್ ಸಿಗುತ್ತದೆ, ಒದೆನೂ ಸಿಗುತ್ತದೆ, ಮುಂದುವರಿದು ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದರು.

ಸರ್ಕಾರದ ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಮುಖ ಖಾತೆ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಅದು ಜನತೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ ಎಂದು ಆಶಿಸುತ್ತೇನೆ. ಹಾಗೆಯೇ ರಾಜ್ಯದ ಕಾನೂನು ವ್ಯವಸ್ಥೆಯನ್ನ ಮತ್ತಷ್ಟು ಬಲಗೊಳಿಸುವ ಕಾರ್ಯವನ್ನೂ ಮಾಡುತ್ತೇನೆ. ಎಂದು ಹೇಳಿದರು.

ಇನ್ನು ಗ್ಯಾರಂಟಿ ಯೋಜನೆ ಬಗ್ಗೆ ವಿವರ ನೀಡಿದ ಅವರು, ಕ್ಯಾಬಿನೆಟ್ ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಬ್ರೀಫ್ ಮಾಡ್ತಿವಿ,‌ ಇನ್ನೆರಡು ದಿನ ಕಾದು ನೋಡಿ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...