ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

Date:

  • ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್
  • ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ

ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೆಲವು ದಿನಗಳ ಹಿಂದೆ ನಡೆದ ಕೋಮು ಹಿಂಸಾಚಾರದ ಬಗ್ಗೆ ಕಿಡಿಕಾರಿದ್ದಾರೆ.

ರಾಮ ನವಮಿ ಸಂದರ್ಭ ಎರಡು ರಾಜ್ಯಗಳಲ್ಲಿ ನಡೆದ ಕೋಮು ಹಿಂಸಾಚಾರದ ಬಗ್ಗೆ ಕ್ರಮ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಮೌನ ತಾಳಿದ್ದಾರೆ ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಮುಂಬರುವ 2024ರ ಸಾರ್ವತ್ರಿಕ ಚುನಾವಣೆಯು ಈ ಹಿಂಸಾಚಾರಕ್ಕೆ ಕಾರಣವಾಗದಿರಲಿ” ಎಂದು ಮಾಧ್ಯಮವೊಂದಕ್ಕೆ ನೀಡಿದ್ದ ಹೇಳಿಕೆಯೊಂದರಲ್ಲಿ ಸಿಬಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದ್ರಿಕ್ತ ಜನರು ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಬೆಂಕಿ ಹಚ್ಚುವುದನ್ನು ನಿಲ್ಲಿಸಬೇಕು. ಕೋಮು ದ್ವೇಷದ ವಿಷ ಬೀಜವನ್ನು ಬಿತ್ತುವ ಕೆಲಸ ಮಾಡಬಾರದು. ಇದರಲ್ಲಿ ಸಾಮಾನ್ಯ ವ್ಯಕ್ತಿ ಬಲಿಪಶುವಾಗುತ್ತಾನೆ. ಇದು ರಾಜಕಾರಣಿಗಳಿಗೆ ಅವರ ಕಾರ್ಯತಂತ್ರ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ” ಎಂದು ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ.

“ಈ ಹಿಂಸಾಚಾರ ವಿಷಯದ ಬಗ್ಗೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮಾತನಾಡಬೇಕು. ಇದನ್ನು ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ ಈ ಹಿಂಸಾಚಾರದ ಬಗ್ಗೆ ಇಬ್ಬರೂ ಮಾತನಾಡದಿರುವುದು ದುರದೃಷ್ಟವಾಗಿದೆ. ಈ ವಿಚಾರ ಒಂದು ಪಕ್ಷಕ್ಕೆ ಸಂಬಂಧಿಸಿಲ್ಲ. ಈ ಹಿಂಸಾತ್ಮಕ ಪರಿಸರದಿಂದ ದೂರ ಉಳಿದು ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕಿದೆ” ಎಂದು ಸಿಬಲ್ ತಿಳಿಸಿದರು.

ಗೃಹ ಸಚಿವ ಅಮಿತ್ ಶಾ ಅವರು ಎರಡು ರಾಜ್ಯಗಳ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರಿಗೆ ಸೂಚಿಸಿದ್ದಾರೆ. ಆದರೆ ಇಂತಹ ಕಾಳಜಿ ಮಾತ್ರ ಸಾಲುವುದಿಲ್ಲ ಎಂದು ಕಪಿಲ್‌ ಸಿಬಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ‌ವಿಪಕ್ಷಗಳ ಒಗ್ಗೂಡಿಸಲು ʻಸಾಮಾಜಿಕ ನ್ಯಾಯ ಸಮ್ಮೇಳನʼ; ಸ್ಟಾಲಿನ್ ನೇತೃತ್ವ

ಬಿಹಾರದ ಬಿಹಾರ್ ಶರೀಫ್ ಮತ್ತು ಸಸಾರಾಮ್ ನಗರಗಳಲ್ಲಿ ರಾಮ ನವಮಿ ಉತ್ಸವದ ಆಚರಣೆ ವೇಳೆ ನಡೆದ ಕೋಮು ಹಿಂಸಾಚಾರ ಸಂಬಂಧ ಪೊಲೀಸರು ಇದುವರೆಗೆ 45 ಜನರನ್ನು ಬಂಧಿಸಿದ್ದಾರೆ. ಅಪಾರ ಹಾನಿ ಉಂಟಾಗಿತ್ತು. ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಅನೇಕರು ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...