ಶೋಭಾ ಕರಂದ್ಲಾಜೆಗೆ ಯಾಕೆ ಇ.ಡಿ ನೋಟಿಸ್ ಕೊಟ್ಟಿಲ್ಲ: ರಮೇಶ್‌ ಬಾಬು ಪ್ರಶ್ನೆ

Date:

ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಯಾಕೆ ಇಡಿ ನೋಟಿಸ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಯಾಕೆ ನೋಟಿಸ್ ಕೊಡಲಾಗಿದೆ. ಕೇಜ್ರಿವಾಲ್ ಮೇಲೆ ಯಾವ ಆರೋಪವಿಲ್ಲ. ಕೆಲವು ವಿಟ್ನೆಸ್ ಬಳಸಿಕೊಂಡು ಅರೆಸ್ಟ್ ಮಾಡಲಾಗಿದೆ” ಎಂದು ಕಿಡಿಕಾರಿದರು.

“350 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿರುವ ಶೋಭಾ ಕರಂದ್ಲಾಜೆ ಮೇಲೆ 48 ಕೋಟಿ ಹಣ ವರ್ಗಾವಣೆ ಆರೋಪ ಇದೆ. ಇದು 2010ರಲ್ಲಿ ನಡೆದಿರುವ ಹಗರಣ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ಇದೆ. ಶೋಭಾ ಮೇಲೆ 24 ಗಂಭೀರ ಆರೋಪಗಳು ಇವೆ. ಇಷ್ಟಿದ್ದರೂ ಅವರನ್ನು ಕೇಂದ್ರದಲ್ಲಿ ಮಂತ್ರಿ‌ ಮಾಡಿದ್ದಾರೆ. ಹೇಗೆ ಅವರನ್ನು ಮಂತ್ರಿ ಮಾಡಲಾಗಿದೆ?” ಎಂದು ರಮೇಶ್ ಬಾಬು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳಂಕಿತರನ್ನ ಸಂಪುಟದಲ್ಲಿ ಮುಂದುವರೆಸಬಾರದು. ಪ್ರತಿಪಕ್ಷಗಳಲ್ಲಿದ್ದರೆ ತಕ್ಷಣ ಬಂಧಿಸ್ತೀರಾ? ಬಿಜೆಪಿ ನಾಯಕರಿಗೆ ಮಾತ್ರ ಯಾವುದೂ ಇಲ್ಲ. ಶೋಭಾ ಕರಂದ್ಲಾಜೆ ಮೇಲೆ 10 ವರ್ಷ ಕೇಸ್ ಇದೆ. ಅವರಿಂದ 70 ಲಕ್ಷ ಹಣ ಸೀಝ್ ಮಾಡಿದ್ದಾರೆ. ಇಷ್ಟಾದ್ರೂ ಯಾಕೆ ಬಂಧಿಸಿಲ್ಲ. ನಮಗೆ ಇಡಿ ಮೇಲೆ ಅನುಮಾನವಿದೆ” ಎಂದರು.

“ಈ ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕು. ಕೂಡಲೇ ಸಂಪುಟದಿಂದ ಅವರನ್ನ ಕೈಬಿಡಬೇಕು. ಸುಪ್ರೀಂ ಜಡ್ಜ್ ಮೆಂಟ್‌ನಲ್ಲಿ ಹಲವು ದಾಖಲೆ ಇವೆ. ಗುರುತರ ಆರೋಪ ಮುಚ್ಚಿಡುವಂತಿಲ್ಲ. ಆದರೆ ಇವರು ಆರೋಪ‌ ಮುಚ್ಚಿಟ್ಟಿದ್ದಾರೆ. ಈಗ ಮತ್ತೆ ಶೋಭಾ ಅವರನ್ನು ಬೆಂಗಳೂರು ಉತ್ತರಕ್ಕೆ ನಿಲ್ಲಿಸಲಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಪ್ರೊ.ರಾಜೀವ್ ಗೌಡ ಮಾತನಾಡಿ, “ಉಡುಪಿ ಚಿಕ್ಕಮಗಳೂರು ಸಂಸದೆಯಾಗಿದ್ದರು. ಈಗ ಬೆಂಗಳೂರು ಉತ್ತರಕ್ಕೆ ಬಂದಿದ್ದಾರೆ. ಇಡಿ ಪ್ರಕರಣದಲ್ಲಿ 24ನೇ ಆರೋಪಿ ಅವರಾಗಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಇವರ ಮೇಲೆ ಕ್ರಮ‌ ಜರುಗಿಸಬೇಕು. ದೇಶದ ಕಾನೂನು ಎಲ್ಲಿಗೆ ಹೋಗಿದೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪ್ರಧಾನಿ ನಾ ಕಾವೂಂಗಾ ಕಾನೇದೂಂಗಾ ಅಂತಾರೆ. ಅಕ್ರಮ ಹಣ ವರ್ಗಾವಣೆ ಆರೋಪ ಇದ್ರೂ ಯಾಕೆ ಕ್ರಮವಿಲ್ಲ? ಡಿಕೆಶಿಗೆ ಪದೇ ಪದೇ ನೋಟಿಸ್ ಕೊಟ್ಟಿದ್ದರು. ತಿಹಾರ್ ಜೈಲಿಗೂ ಕಳಿಸಲಾಗಿತ್ತು. ಜಾರ್ಖಂಡ್ ಸಿಎಂ, ದೆಹಲಿ ಸಿಎಂ ಅನ್ನು ಜೈಲಿಗೆ ಹಾಕಿದ್ದಾರೆ. ಬಿಜೆಪಿ ನಾಯಕರಿಗೆ ಒಂದು ಕಾನೂನು. ಇತರರಿಗೆ ಇನ್ನೊಂದು ಕಾನೂನಾ?” ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...