ಬಿಜೆಪಿಯವರನ್ನು ಯಾಕೆ ನಾಡದ್ರೋಹಿಗಳೆಂದು ಕರೆಯಬಾರದು: ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

Date:

ನೆಲ,ಜಲ,ಭಾಷೆ ಮತ್ತು ಅಸ್ಮಿತೆಯ ವಿಷಯ ಬಂದಾಗ ನಾವೆಲ್ಲಾ ಒಗ್ಗಟ್ಟಾಗಿರಬೇಕು. ಆದರೆ ನಾಡಿನ ಹಿತಾಸಕ್ತಿಯ ವಿಷಯದಲ್ಲಿ ಕೇಂದ್ರ ಆಟವಾಡುತ್ತಿರುವಾಗ ಬಿಜೆಪಿಯ ಒಬ್ಬನೇ ಒಬ್ಬ ನಾಯಕ ಕಡ್ಡಿ ತುಂಡಾದಂತೆ ವಿರೋಧ ಮಾಡಿದ್ದಾರೆಯೇ? ತಮ್ಮ ದೆಹಲಿ ಪ್ರಭುಗಳನ್ನು ಮೆಚ್ಚಿಸಲು ನಾಡಿನ ಹಿತಾಸಕ್ತಿಯನ್ನು ಬಲಿ ಕೊಡುತ್ತಿರುವ ಬಿಜೆಪಿಯವರನ್ನು ಯಾಕೆ ನಾಡದ್ರೋಹಿಗಳೆಂದು ಕರೆಯಬಾರದು” ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

“ಡಿ ಲಿಮಿಟೇಷನ್ (ಕ್ಷೇತ್ರ ಮರುವಿಂಗಡನೆ) ಮಾಡಲು ಹೊರಟಿರುವ ಕೇಂದ್ರದ ದಮನಕಾರಿ ನೀತಿ ವಿರೋಧಿಸಿ‌ ದಕ್ಷಿಣದ ರಾಜ್ಯಗಳೆಲ್ಲಾ ಒಟ್ಟಾಗಿ ಹೋರಾಡುತ್ತಿವೆ‌. ಡಿ ಲಿಮಿಟೇಷನ್ ಆದರೆ ಸಂಸತ್ತಿನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯವೇ ಕುಸಿಯಲಿದೆ. ಇದು ಆಘಾತಕಾರಿ ಬೆಳವಣಿಗೆ” ಎಂದು ಎಕ್ಸ್‌ ತಾಣದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ದಕ್ಷಿಣದ ಎಲ್ಲ ರಾಜ್ಯಗಳು ವಿರೋಧಿಸಲೇಬೇಕಿದೆ. ಆದರೆ ಡಿ‌ ಲಿಮಿಟೇಷನ್ ವಿರುದ್ಧದ ಹೋರಾಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರ ಕಣ್ಣಿಗೆ ರಾಷ್ಟ್ರದ್ರೋಹದಂತೆ ಕಂಡಿದೆ‌. ಮೋದಿ ಸರ್ಕಾರವನ್ನು ಮೆಚ್ಚಿಸಲು ಸ್ವಾಭಿಮಾನ, ಆತ್ಮಾಭಿಮಾನ ಬಿಟ್ಟು ಲಜ್ಜೆಗೆಟ್ಟವರಂತೆ ವರ್ತಿಸುತ್ತಿರುವ ಬಿಜೆಪಿ ನಾಯಕರಿಗೆ ಕೇಂದ್ರ ಎಸಗುತ್ತಿರುವ ಅನ್ಯಾಯ ಅರ್ಥವಾಗುವುದು ಯಾವಾಗ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಗಳಿಗೆ ಮಾರಕವಾಗುವ ಎನ್‌ಇಪಿ ಜಾರಿಗೆ ತಂದಾಗ, ತ್ರಿಭಾಷಾ ಸೂತ್ರ ತಂದಾಗ, ಡಿಲಿಮಿಟೇಷನ್ ಮಾಡಲು ಹೊರಟಾಗ ಬಿಜೆಪಿಯವರ ನಾಲಗೆ ಹೊರಳಾಡುವುದೇ ಇಲ್ಲ. ರಾಜ್ಯಕ್ಕೆ ಏನೇ ದ್ರೋಹವಾದರೂ ಸರಿ ಮೋದಿ ಸರ್ಕಾರದ ವಿರುದ್ಧ ಬಾಯಿ ಬಿಡಬಾರದು ಎಂಬ ಅಲಿಖಿತ ನಿಯಮವೊಂದನ್ನು ರಾಜ್ಯ ಬಿಜೆಪಿ ನಾಯಕರು ಪಾಲಿಸುತ್ತಿದ್ದಾರೆ. ಇದಕ್ಕಿಂತ ಗುಲಾಮಿತನ ಇನ್ನೇನಿದೆ?” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...