ವಿವಾದಾತ್ಮಕ ಹೇಳಿಕೆ | ಎಫ್ಐಆರ್ ದಾಖಲಾದ ಬಳಿಕ ನಟ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದು ಹೀಗೆ..

Date:

  • ‘ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ’ ಎಂದ ನಟ
  • ‘ನಿಮ್ಮ ನಂತರ ಹುಟ್ಟಿದವರು ನಿಮ್ಮನ್ನು ಪ್ರಶ್ನಿಸಬಾರದೇ?’ ಎಂದು ಕೇಳಿದ ನೆಟ್ಟಿಗ

ತನ್ನ ವಿವಾದಾತ್ಮಕ ಹೇಳಿಕೆಯ ಬಳಿಕ ಕ್ಷಮೆ ಕೇಳಿದ್ದ ಉಪೇಂದ್ರ, ಆ ಬಳಿಕ ದಾಖಲಾದ ಎಫ್‌ಐಆರ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ದ್ವೇಷ’ ಎಂದು ಕೇಳಿದ್ದಾರೆ.

‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಹೇಳಿಕೆ ನೀಡಿದ್ದ ನಟ ಉಪೇಂದ್ರ ವಿರುದ್ಧ ಜಾತಿನಿಂದನೆ ಆರೋಪದ ಮೇಲೆ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಆ ಬಳಿಕ ಟ್ವೀಟ್ ಮಾಡಿರುವ ಅವರು, ‘ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ…ಇದನ್ನು ಅನುಭವಿಸಿ ಬೆಳೆದ ನಾನು, ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ?’ ಎಂದು ಕೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ ಕಡ್ಡಾಯವಲ್ಲ: ಸರ್ಕಾರದ ಆದೇಶ ವಜಾಗೊಳಿಸಿದ ಸುಪ್ರೀಂ

ಉಪೇಂದ್ರ ಅವರ ಈ ಹೇಳಿಕೆಯ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಪರ-ವಿರೋಧ ಅಭಿಪ್ರಾಯಗಳು ಜೋರಾಗಿದೆ.

‘ಮೊದಲ ವಾಕ್ಯವೇ ನಿಮ್ಮ ಅಹಂಕಾರ ತೋರಿಸುತ್ತಾ ಇದೆ. ನಿಮ್ಮ ನಂತರ ಹುಟ್ಟಿದವರು ನಿಮ್ಮನ್ನು ಪ್ರಶ್ನಿಸುವ ಹಾಗೆ ಇಲ್ಲ ಎಂದಾಯ್ತು. ಹಾಗೆ ನಿಮ್ಮ ಸಿನೆಮಾ ಕೂಡ ನಿಮ್ಮ ನಂತರ ಹುಟ್ಟಿದವರು ನೋಡುವುದು ಬೇಡ ಎಂದು ಬರೆಯಿರಿ’ ಎಂದು ಉಪೇಂದ್ರ ಫೇಸ್‌ಬುಕ್‌ನಲ್ಲೂ ಹಾಕಿರುವ ಈ ಪೋಸ್ಟ್‌ಗೆ ಚರಣ್ ಐವರ್ನಾಡು ಎಂಬವರು ಪ್ರತಿಕ್ರಿಯಿಸಿದ್ದಾರೆ.

WhatsApp Image 2023 08 13 at 8.20.26 PM

‘ನಾವು ಈಗಲೂ ನೋವು ಅನುಭವಿಸುತ್ತಿದ್ದೇವೆ ಸರ್. ಹೊಟ್ಟೆ ತುಂಬ ಉಂಡರು ಕೈ ತುಂಬಾ ಸಂಪಾದಿಸಿದರೂ ಅಸ್ಪೃಶ್ಯತೆಯ ನೋವು ನಮ್ಮನ್ನು ಬಿಡುತ್ತಿಲ್ಲ. ಯಾರು ಯಾವ ರೂಪದಲ್ಲಿ, ಯಾಕೆ ಹೀಗೆ ನಮ್ಮ ವಿರುದ್ಧ ದ್ವೇಷ? ನಮ್ಮ ವಿರುದ್ಧ ತಾರತಮ್ಯ? ನಮ್ಮ ಜಾತಿ ಮಾಡಿರುವ ತಪ್ಪಾದರೂ ಏನು, ನಾವು ದಲಿತ ಜಾತಿಗಳಲ್ಲಿ ಹುಟ್ಟಿದ್ದೇ ತಪ್ಪಾ? ಹೀಗೆ ನಮಗೆ ನಾವೇ ನಿತ್ಯ ಕೇಳಿಕೊಳ್ಳುತ್ತ ಬದುಕುತ್ತಿದ್ದೇವೆ. ನಿಮ್ಮಂಥ ಸೆಲೆಬ್ರಿಟಿಗಳು ಹೀಗೆ… ಇನ್ನೂ ಸಾಮಾನ್ಯ ಜನ ನಮ್ಮ ವಿರುದ್ಧ ಯಾವ್ಯಾವ ರೀತಿಯಲ್ಲಿ ನೋವು ಕೊಡುತ್ತಿರಬೇಡ? ಬಹುಶಃ ಆಕ್ರೋಶದ ಬಂಡೆ ಒಮ್ಮೆ ಸಿಡಿದರೆ ಇಡೀ ಭೂಮಂಡಲವೇ ನಾಶವಾದೀತು! ಅಷ್ಟು ನೋವು ನಿತ್ಯ ನಮಗೆ ಆಗುತ್ತಿದೆ. ಹಿಂದೂಗಳು ಇದನ್ನು ಅರ್ಥಮಾಡಿಕೊಳ್ಳಬೇಕು.’ ಎಂದು ರಘೋತ್ತಮ ಹೊ.ಬ. ಈ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಆಡಿರುವ ಮಾತು ಅದೆಷ್ಟೇ ತೀಕ್ಷ್ಣವಾಗಿ ಆಡಿದ ಮಾತುಗಳೇ ಆಗಿರಲಿ, ಆದರೆ ತಪ್ಪು ಅರಿತು ಕ್ಷಮೆ ಕೇಳಬೇಕಾದದ್ದು ಮನುಷ್ಯ ಗುಣ ಅದನ್ನು ನೀವು ಕೇಳಿ ಇನ್ನೂ ಎತ್ತರಕ್ಕೇರಿದ್ದೀರಿ,ತಪ್ಪನ್ನು ಮನ್ನಿಸಬೇಕಾದದ್ದು ದೈವ ಗುಣ ಅಂತಹ ದೈವ ಗುಣವನ್ನು ತೋರಿಸಿ ದೊಡ್ಡವರಾಗಲು ಅವಕಾಶ ಸಿಕ್ಕರೂ ಸಹ ಮನ್ನಿಸಲು ಮನಸ್ಸು ಮಾಡದೇ ಇರುವುದೇ ವಿಪರ್ಯಾಸ’ ಎಂದು ಇನ್ನು ಕೆಲವರು ಉಪೇಂದ್ರ ಪರವಾಗಿ ಮಾತನಾಡಿದ್ದಾರೆ.

ಇದನ್ನು ಓದಿದ್ದೀರಾ? ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಹೇಳಿಕೆಗೆ ವ್ಯಾಪಕ ಆಕ್ರೋಶ: ಕ್ಷಮೆ ಕೇಳಿದ ನಟ ಉಪೇಂದ್ರ

ಒಟ್ಟಿನಲ್ಲಿ ತಮ್ಮ ಪ್ರಜಾಕೀಯ ಸಂಸ್ಥಾಪನೆಯ ದಿನದ ಅಂಗವಾಗಿ ಶುಭಾಶಯ ತಿಳಿಸಲು ಮಾಡಿದ್ದ ಫೇಸ್‌ಬುಕ್ ಲೈವ್ ವಿಡಿಯೋ ವೇಳೆ ಆಡಿದ್ದ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂಬ ಹೇಳಿಕೆಯೇ ಈಗ ಪಕ್ಷದ ಸಂಸ್ಥಾಪಕ ಉಪೇಂದ್ರ ಅವರಿಗೆ ಮುಳುವಾಗಿದೆ. ಪಕ್ಷದ ಕಾರ್ಯವೈಖರಿಗಳ ಬಗ್ಗೆ ದೂರುವವರನ್ನು ಉಲ್ಲೇಖಿಸುವ ವೇಳೆ ಉಪೇಂದ್ರ ಈ ಮಾತು ಆಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...