ನಿಮ್ಮದು ಬೇರೆ ಪಕ್ಷ – ಶರದ್ ಪವಾರ್ ಚಿತ್ರ, ಚಿಹ್ನೆ ಬಳಸುವುದೇಕೆ?; ಅಜಿತ್‌ ಬಣಕ್ಕೆ ಸುಪ್ರೀಂ ಪ್ರಶ್ನೆ

Date:

“ನಿಮ್ಮ ಪಕ್ಷವೇ ಈಗ ಬೇರೆಯಾಗಿದೆ. ಹೀಗಿರುವಾಗ ನೀವು ಶರದ್ ಪವಾರ್‌ರ ಚಿತ್ರ ಮತ್ತು ಚಿಹ್ನೆಗಳನ್ನು ಬಳಸುವುದೇಕೆ” ಎಂದು ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಬಣಕ್ಕೆ ಗುರುವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹಾಗೆಯೇ ಎಲ್ಲ ಪೋಸ್ಟರ್‌ಗಳಿಂದ ಶರದ್ ಪವಾರ್ ಚಿತ್ರವನ್ನು ತೆಗೆಯುವಂತೆ ಸೂಚಿಸಿದೆ. ಮಾತ್ರವಲ್ಲದೆ, ಬೇರೆ ಚಿಹ್ನೆಯನ್ನು ಆಯ್ಕೆ ಮಾಡಿಕೊಳ್ಳಲು ತಿಳಿಸಿದೆ.

ಅಜಿತ್‌ ಪವಾರ್ ನೇತೃತ್ವದ ಎನ್‌ಸಿಪಿಯು ಹಿರಿಯ ಎನ್‌ಸಿಪಿ ನಾಯಕರುಗಳ ಚಿತ್ರ ಮತ್ತು ಚಿಹ್ನೆಯನ್ನು ಪೋಸ್ಟರ್‌ನಲ್ಲಿ ಬಳಸುವುದರ ವಿರುದ್ಧವಾಗಿ ಎನ್‌ಸಿಪಿ ನಾಯಕ ಶರದ್ ಪವಾರ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಶರದ್ ಈ ಅರ್ಜಿ ವಿಚಾರಣೆ ನಡೆಸಿದ ಪೀಠವು ಅಜಿತ್‌ ಪವಾರ್‌ರಿಗೆ ಪೋಸ್ಟರ್‌ಗಳ ತೆರವಿಗೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು (ಅಜಿತ್ ಪವಾರ್ ಬಣ) ಈಗ ಬೇರೆಯೇ ರಾಜಕೀಯ ಪಕ್ಷ. ಹಾಗಿರುವಾಗ ನೀವು ಶರದ್ ಪವಾರ್‌ ಚಿತ್ರಗಳನ್ನು, ಅವರ ಪಕ್ಷದ ಹಿರಿಯ ನಾಯಕರುಗಳ ಚಿತ್ರವನ್ನು ಬಳಸುವುದು ಏಕೆ?. ನೀವು ನಿಮ್ಮದೆ ಆದ ಗುರುತನ್ನು ರಚಿಸಿ, ನೀವು ಇತರೆ ಪಕ್ಷದ ಗುರುತನ್ನು ಬಳಸಿಕೊಳ್ಳುವಂತಿಲ್ಲ” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ತಿಳಿಸಿದರು.

“ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸುವುದು ನಿಮ್ಮ ಕೆಲಸ. ಚುನಾವಣೆ ಬರುವಾಗ ನಿಮಗೆ ಶರದ್ ಪವಾರ್ ಹೆಸರು ಬೇಕು, ಚುನಾವಣೆ ಇಲ್ಲದಾಗ ನಿಮಗೆ ಅವರು ಬೇಡ. ಈಗ ನೀವು ಬೇರೆಯೇ ಪಕ್ಷ ಕಟ್ಟಿ ಅದಕ್ಕೊಂದು ಅಸ್ಮಿತೆ ಇರುವಾಗ ಅದನ್ನು ಪಾಲಿಸಿ” ಎಂದು ತರಾಟೆಗೆ ತೆಗೆದುಕೊಂಡರು. ಮಾರ್ಚ್ 16ರ ಒಳಗಾಗಿ ಉತ್ತರಿಸಲು ಅಜಿತ್ ಪವಾರ್ ಬಣಕ್ಕೆ ಕೋರ್ಟ್ ಹೇಳಿದೆ.

ಶರದ್ ಪವಾರ್ ಬಣದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಸಿಂಗ್ವಿ ವಾದಿಸಿದ್ದು, “ನೀವು ಚುನಾವಣಾ ಕಣಕ್ಕೆ ಇಳಿಯುವುದಾದರೆ ನಮ್ಮ ಚಿಹ್ನೆ, ಚಿತ್ರಗಳನ್ನು ಬಳಸಬೇಡಿ. ಗಡಿಯಾರ ಚಿಹ್ನೆಯು ಶರದ್ ಪವಾರ್‌ ಅವರಿಗೆ ಸೇರಿದ್ದು” ಎಂದಿದ್ದಾರೆ.

“ಈ ಚಿಹ್ನೆಯ ಬದಲಾಗಿ ಬೇರೆ ಚಿಹ್ನೆ ಆಯ್ಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಿ” ಎಂದು ತಿಳಿಸಿದ ಕೋರ್ಟ್, “ಚುನಾವಣಾ ಆಯೋಗದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ನಾವು ಚುನಾವಣೆ ಸಂದರ್ಭದಲ್ಲಿ ಈ ಅರ್ಜಿ ವಿಚಾರಣೆ ನಡೆಸದಿದ್ದರೆ, ಮತ್ತೆ ನೀವೇನು ಮಾಡುತ್ತೀರಿ” ಎಂದು ಕೋರ್ಟ್ ಪ್ರಶ್ನಿಸಿದೆ.

ಫೆಬ್ರವರಿ 6ರಂದು ಚುನಾವಣಾ ಆಯೋಗವು ಅಜಿತ್ ಪವಾರ್ ಬಣವನ್ನು ನಿಜವಾದ ಎನ್‌ಸಿಪಿ ಎಂದು ಘೋಷಿಸಿದ್ದು, ಪಕ್ಷದ ಹೆಸರು ಮತ್ತು ಚಿಹ್ನೆ ಬಳಸಲು ಅವಕಾಶ ನೀಡಿದೆ. ಇದಾದ ಒಂದು ದಿನದ ಬಳಿಕ ಶರದ್ ಪವಾರ್ ಬಣವು “ರಾಷ್ಟ್ರೀಯ ಕಾಂಗ್ರೆಸ್ ಪಕ್ಷ – ಶರದ್‌ಚಂದ್ರ ಪವಾರ್” ಎಂದು ತಮ್ಮ ಪಕ್ಷಕ್ಕೆ ಹೆಸರಿರಿಸಿದೆ.

ಹಾಗೆಯೇ ಫೆಬ್ರವರಿ 13ರಂದು ಶರದ್ ಪವಾರ್ ಚುನಾವಣಾ ಆಯೋಗವು ಅಜಿತ್ ಪವಾರ್ ಬಣವನ್ನು ಎನ್‌ಸಿಪಿ ಎಂದು ಘೋಷಿಸಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹಾಗೆಯೇ ಫೆಬ್ರವರಿ 24ರಂದು ಶರದ್ ಪವಾರ್ “ವ್ಯಕ್ತಿ ಕಹಳೆ ಊದುತ್ತಿರುವ ” ಚಿತ್ರವನ್ನು ತಮ್ಮ ಪಕ್ಷದ ಹೊಸ ಗುರುತು ಎಂದು ಘೋಷಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...