ಜಾರ್ಖಂಡ್‌ | ವಿಧವಾ ಪುನರ್ವಿವಾಹ ಯೋಜನೆ ಪ್ರಾರಂಭ; 2 ಲಕ್ಷ ರೂ. ಪ್ರೋತ್ಸಾಹ ಧನ!

Date:

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ವಿಧವಾ ಪುನರ್ವಿವಾಹ ಪ್ರೋತ್ಸಾಧನ ಯೋಜನೆಗೆ ಬುಧವಾರ ಚಾಲನೆ ನೀಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಪತಿಯ ಮರಣದ ನಂತರ ಮತ್ತೆ ವಿವಾಹವಾಗಲು ನಿರ್ಧರಿಸುವ ಮಹಿಳೆಯರಿಗೆ ಸರ್ಕಾರದಿಂದ 2 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಅಧಿಕಾರಿಗಳ ಪ್ರಕಾರ, ಈ ಯೋಜನೆಯ ಫಲಾನುಭವಿಗಳು ಮರು ವಿವಾಹವಾಗುವ ವಯಸ್ಸಿವರಾಗಿರಬೇಕು. ಹಾಗೆಯೇ ಸರ್ಕಾರಿ ಉದ್ಯೋಗಿ, ಪಿಂಚಣಿದಾರರು ಮತ್ತು ಆದಾಯ ತೆರಿಗೆ ಪಾವತಿದಾರರು ಆಗಿರಬಾರದು. ಈ ಯೋಜನೆಯ ಲಾಭವನ್ನು ಪಡೆಯಲು ಫಲಾನುಭವಿಗಳು ಮರು ವಿವಾಹವಾದ ಒಂದು ವರ್ಷದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಪತಿಯ ಮರಣ ಪ್ರಮಾಣಪತ್ರವನ್ನೂ ಸಲ್ಲಿಸಬೇಕು.

ಮಕ್ಕಳ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣಾ ಇಲಾಖೆ ಅಧಿಕಾರಿ ಮನೋಜ್ ಕುಮಾರ್, “ಪತಿಯ ಮರಣದ ಬಳಿಕ ಸಮಾಜದಲ್ಲಿ ಒಬ್ಬಂಟಿಯಾಗಿ ಜೀವಿಸುವ ಮಹಿಳೆಯು ಅಸಹಾಯಕರಾಗಿರುತ್ತಾರೆ ಮತ್ತು ಆ ಮಹಿಳೆಯರಿಗೆ ಹೊಸ ಜೀವನ ನಡೆಸುವ ಬಯಕೆ ಇರುತ್ತದೆ. ಈ ರೀತಿ ಮರು ವಿವಾಹವಾಗಲು ನಿರ್ಧಾರ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಹಣಕಾಸು ಸಹಾಯ ಮಾಡಲಿದೆ,” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳಾ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಈ ವಿಧವಾ ಪುನರ್ವಿವಾಹ ಪ್ರೋತ್ಸಾಹ ಯೋಜನೆಯನ್ನು ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ಆರಂಭಿಸಿದ್ದಾರೆ. ಈ ಯೋಜನೆಯಡಿಯಲ್ಲಿ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಯೋಜನೆಯು ವಿಧವೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಮಹಿಳೆ ಪುನರ್ವಿವಾಹವಾಗುವ ವಿಚಾರದಲ್ಲಿ ಸಮಾಜದಲ್ಲಿರುವ ಅಭಿಪ್ರಾಯವನ್ನು ಬದಲಾಯಿಸುತ್ತದೆ,” ಎಂದು ಹೇಳಿದರು.

ಬುಧವಾರ ರಾಂಚಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಟ್ಟು ಏಳು ಫಲಾನುಭವಿಗಳಿಗೆ ತಲಾ ಎರಡು ಲಕ್ಷ ರೂಪಾಯಿಯಂತೆ 14 ಲಕ್ಷ ರೂಪಾಯಿಯನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂಪೈ ಸೊರೆನ್ ಅಂಗನವಾಡಿ ಕಾರ್ಯಕರ್ತರಿಗೆ 9,500 ರೂಪಾಯಿ ಮತ್ತು ಸಹಾಯಕರಿಗೆ 4750 ರೂಪಾಯಿ ಮಾಸಿಕ ಭತ್ಯೆಯನ್ನು ಘೋಷಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ವಿಧವಾ ಪುನರ್ವಿವಾಹ ಯೋಜನೆಯಿದ್ದು, ಈ ಯೋಜನೆಯಡಿಯಲ್ಲಿ 25, 000 ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಪೈಕಿ 10,000 ರೂಪಾಯಿ ವಿವಾಹ ಸಂದರ್ಭ ನೀಡಿದರೆ, 15,000 ರೂಪಾಯಿ ಪತಿ ಪತ್ನಿಯ ಹೆಸರಲ್ಲಿ ಐದು ವರ್ಷಗಳ ಕಾಲಕ್ಕೆ ಎಫ್‌ಡಿ ಮಾಡಲಾಗುತ್ತದೆ.

ತಮಿಳುನಾಡಿನಲ್ಲಿ ವಿಧವಾ ಪುನರ್ವಿವಾಹ ಯೋಜನೆಯಡಿಯಲ್ಲಿ ಮರು ವಿವಾಹವಾದ ಮಹಿಳೆಯರಿಗೆ 25,000 ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಪೈಕಿ 15,000 ರೂಪಾಯಿ ನೇರವಾಗಿ ವರ್ಗಾಯಿಸಿದರೆ, ಉಳಿದ 10,000 ರೂಪಾಯಿಯ ಮೊತ್ತವನ್ನು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್‌ಎಸ್‌ಸಿ) ಹೂಡಿಕೆ ಖಾತೆ ಮಾಡಿಸಿಕೊಡಲಾಗುತ್ತದೆ. ಜೊತೆಗೆ ನಾಲ್ಕು ಗ್ರಾಂ ಚಿನ್ನವನ್ನು ನೀಡಲಾಗುತ್ತದೆ.

ಕೇರಳದಲ್ಲಿ 18ರಿಂದ 50 ವರ್ಷದೊಳಗಿನ ವಿಧವೆ ಅಥವಾ ವಿಚ್ಛೇದನ ಪಡೆದ ಮಹಿಳೆ ಮರು ವಿವಾಹವಾದರೆ 25000 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ. ಆದರೆ ಜಾರ್ಖಂಡ್‌ನಲ್ಲಿ ಎರಡು ಲಕ್ಷ ರೂಪಾಯಿಯನ್ನು ಪ್ರೋತ್ಸಾಹ ಧನವಾಗಿ ನೀಡಲಾಗುತ್ತಿದ್ದು, ದೇಶದಲ್ಲೇ ಅಧಿಕ ಮೊತ್ತ ಪ್ರೋತ್ಸಾಹ ಧನವಾಗಿ ನೀಡುವ ದೇಶ ಎಂದು ಹೇಳಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...