ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ

Date:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಸಂಜೆ 5 ಗಂಟೆಯೊಳಗೆ ಘೋಷಣೆಯಾಗಲಿದೆ.

ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, “ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಪುಟ್ಟರಾಜು ಅಭ್ಯರ್ಥಿಯನ್ನಾಗಿಸುವ ಬಗ್ಗೆ ಚರ್ಚೆ ನಡೆಸಿದ್ದೆವು. ಆದರೆ ಅವರು ನಾವು ಯಾವುದೇ ಕಾರಣಕ್ಕೂ ಒಪ್ಪಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಜೆಡಿಎಸ್ ಪಕ್ಷದ ಪುನಶ್ಚೇತನಕ್ಕಾಗಿ ನಾನು ತಲೆಕೊಡುತ್ತೇನೆ” ಎಂದು ತಿಳಿಸಿದ್ದಾರೆ.

“ಸಂಜೆ 4 ಅಥವಾ 5 ಗಂಟೆಯೊಳಗೆ ಅಧಿಕೃತವಾಗಿ ತಿಳಿಸುತ್ತೇವೆ. ಮಂಡ್ಯದ ಮುಖಂಡರ ಇಂದು ಸಂಜೆ ಸಭೆ ಇದೆ. ಆ ಬಳಿಕ ಅಧಿಕೃತವಾಗಿ ಘೋಷಣೆ ಮಾಡುತ್ತೇವೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ, ಕಾರ್ಯಕರ್ತರ ಆಗ್ರಹಕ್ಕೆ ಮನ್ನಣೆ ನೀಡುವ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರವನ್ನು ಬಿಜೆಪಿ ಹೈಕಮಾಂಡ್ ನಮಗೆ ಬಿಟ್ಟುಕೊಟ್ಟಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೂರು ಮಂದಿ ಆಕಾಂಕ್ಷಿಗಳಿದ್ದಾರೆ. ಇವತ್ತು ಸಂಜೆಯೊಳಗೆ ಪ್ರಕಟಿಸುತ್ತೇವೆ. ಹಾಸನದಿಂದ ದೇವೇಗೌಡರ ತೀರ್ಮಾನದಂತೆ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಪ್ರಮುಖವಾಗಿ ಮೈತ್ರಿ ಅಭ್ಯರ್ಥಿಗಳ ಆರು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸಭೆಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರೂ ಸೇರಿದಂತೆ ಹಲವರು ಭಾಗಿಯಾಗಿದ್ದರು” ಎಂದು ತಿಳಿಸಿದ್ದಾರೆ.

ನಾಡಿನ ಬಿಜೆಪಿ ಸಂಸದರಿಗೆ ಧ್ವನಿ ಇಲ್ಲ ಎಂಬ ಆರೋಪ ಇದೆ. ಹೀಗಾಗಿ, ನಾಡಿನ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ನಾವು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಮಂಡ್ಯ, ಹಾಸನ ಹಾಗೂ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ದೇಶದೆಲ್ಲೆಡೆ ಮೋದಿ ಇದೆ. ಹೀಗಾಗಿ, ಮೂರು ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ” ಎಂದು ತಿಳಿಸಿದರು.

“ಕೋರ್ ಕಮಿಟಿಯಲ್ಲಿ ತಮಿಳುನಾಡಿನ ಡಿಎಂಕೆ ಸರ್ಕಾರವು ಮೇಕೆದಾಟು ಯೋಜನೆ ಜಾರಿ ಮಾಡಲು ಬಿಡಲ್ಲ ಎಂದು ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ನೀರಾವರಿ ಯೋಜನೆಗಳಲ್ಲಿ ರಾಜ್ಯದ ರೈತರಿಗೆ ನಿರಂತರ ಅನ್ಯಾಯವಾಗ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದೆ. ಈಗ ನರೇಂದ್ರ ಮೋದಿಯವರ ಮೇಲೆ ಗೂಬೆ ಕೂರಿಸುತ್ತಿದೆ. ಕೇವಲ ಶಂಕುಸ್ಥಾಪನೆ ನೆರವೇರಿಸಿದ್ದು ಮಾತ್ರ ಕಾಂಗ್ರೆಸ್‌ನ ಕೀರ್ತಿ” ಎಂದು ಕುಮಾರಸ್ವಾಮಿ ಆರೋಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...