ಬಿಜೆಪಿಗಾಗಿ ಉಪ ರಾಷ್ಟ್ರಪತಿ ಪಟ್ಟ ಕಳೆದುಕೊಳ್ತಾರಾ ಧನಕರ್?

Date:

ಇಂಡಿಯಾ ಮೈತ್ರಿಕೂಟದ ರಾಜ್ಯಸಭಾ ಸದಸ್ಯರು ಉಪ ರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಧನಕರ್ ಅವರು ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ವಿಪಕ್ಷಗಳ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಸೋಮವಾರ ನಡೆದ ಕಲಾಪದಲ್ಲಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರು ಅಮೆರಿಕನ್ ಉದ್ಯಮಿ ಜಾರ್ಜ್‌ ಸೊರೊಸ್‌ ಅವರ ತನಿಖಾ ಸಂಸ್ಥೆ ‘ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಶನ್ ರಿಪೋರ್ಟಿಂಗ್ ಪ್ರಾಜೆಕ್ಟ್’ (OCCRP) ನಡುವೆ ರಾಜಕೀಯ ವ್ಯವಹಾರವಿದೆ ಎಂದು ಬಿಜೆಪಿ ಆರೋಪಿಸಿತ್ತು.

ಈ ಆರೋಪವು ಪತಿಪಕ್ಷಗಳು ಮತ್ತು ಬಿಜೆಪಿ ನಡುವೆ ಗದ್ದಲು ಸೃಷ್ಟಿಸಿತ್ತು. ಗದ್ದಲವನ್ನು ತಡೆಯದೆ, ಅಗತ್ಯ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡದೆ, ಧನಕರ್ ಪದೇ ಪದೇ ಸದನವನ್ನು ಮುಂದೂಡುತ್ತಿದ್ದರು. ಧನಕರ್ ಅವರು ಆಡಳಿತ ಪಕ್ಷದ ಪರವಾಗಿ ನಿಲುವು ತೆಗೆದುಕೊಂಡು, ಸದನವನ್ನು ಮುಂದೂಡುತ್ತಿದ್ದಾರೆ ಎಂದು ಇಂಡಿಯಾ ಬ್ಲಾಕ್ ಆರೋಪಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಮಣಿಪುರ ಹಿಂಸಾಚಾರ, ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ ಹಾಗೂ ಗೌತಮ್ ಅದಾನಿ ವಿರುದ್ಧದ ಲಂಚ ಆರೋಪಗಳು ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆಯೂ ವಿಪಕ್ಷ ನಾಯಕರು ಒತ್ತಾಯಿಸಿದ್ದರು. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆಗಾಗಿ ಪಟ್ಟಿ ಮಾಡಲಾಗಿತ್ತು.

ಆದರೂ, ರಾಜ್ಯಸಭಾ ಅಧ್ಯಕ್ಷ ಧನಕರ್ ಅವರು ವಿಪಕ್ಷಗಳು ಎತ್ತಿದ ಯಾವುದೇ ವಿಷಯದ ಚರ್ಚೆಗೆ ಅವಕಾಶ ನೀಡಿಲ್ಲ. ಬದಲಾಗಿ, ಜೆ.ಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿ ಮಾಡಿದ ಆರೋಪಗಳ ಬಗ್ಗೆ ಮಾತನಾಡಲು ಆಡಳಿತ ಪಕ್ಷ ಬಿಜೆಪಿ ಸದಸ್ಯರಿಗೆ ಅವಕಾಶ ಮಾಡಿಕೊಟ್ಟಿದ್ದರು. ಇದು, ವಿಪಕ್ಷಗಳನ್ನು ಕೆರಳಿಸಿದೆ. ಪರಿಣಾಮವಾಗಿ, ಮಂಗಳವಾರ ಧನಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.

ಮೇಲ್ಮನೆಯಲ್ಲಿ ಸರಳ ಬಹುಮತದ ನಿರ್ಣಯದೊಂದಿಗೆ ರಾಜ್ಯಸಭಾ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಅವಕಾಶ ನೀಡುವ ಭಾರತೀಯ ಸಂವಿಧಾನದ 67 (ಬಿ) ವಿಧಿಯ ಅಡಿಯಲ್ಲಿ ಧನಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್, ತೃಣಮೂಲ, ಎಎಪಿ, ಎಸ್‌ಪಿ, ಡಿಎಂಕೆ, ಆರ್‌ಜೆಡಿಯ 50ಕ್ಕೂ ಅಧಿಕ ಸಂಸದರು ಸಹಿ ಹಾಕಿರುವ ಅವಿಶ್ವಾಸ ನಿರ್ಣಯ ಪತ್ರವನ್ನು ರಾಜ್ಯಸಭೆಯ ಕಾರ್ಯದರ್ಶಿಗೆ ನೀಡಲಾಗಿದೆ.

ಈ ವರದಿ ಓದಿದ್ದೀರಾ?: ಭಾರತದಲ್ಲಿ ದಲಿತರ ದೇವಾಲಯ ಪ್ರವೇಶ ʼನಿಷೇಧʼದ ಕೆಲವು ಪ್ರಶ್ನೆಗಳು

ರಾಜ್ಯಸಭೆ ಸ್ಪೀಕರ್ ಜಗದೀಪ್ ಧನಕರ್ ಅವರು ಏಕಪಕ್ಷೀಯ ಮತ್ತು ಆಡಳಿತಾರೂಢ ಬಿಜೆಪಿ ಸದಸ್ಯರ ಪರವಾಗಿ ನಿಲುವು ಹೊಂದಿದ್ದಾರೆ. ರಾಜ್ಯಸಭೆ ಅಧ್ಯಕ್ಷರಾಗಿ ಒಂದು ಪಕ್ಷದ ಪರ ಧೋರಣೆ ತೋರುವ ಮೂಲಕ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಜೆಪಿ ನಡ್ಡಾ ಅವರಿಗೆ ಯಾವುದೇ ಸಮಯದಲ್ಲಿ ಮಾತನಾಡಲು ಅವಕಾಶ ಕೊಡಲಾಗುತ್ತದೆ. ಆದರೆ, ವಿರೋಧ ಪಕ್ಷದ ಸದಸ್ಯರು ಸಂಸತ್ತಿನಲ್ಲಿ ತಮ್ಮ ಸಮಸ್ಯೆಗಳನ್ನು ಮಾತನಾಡಲು ಅಥವಾ ಮಂಡಿಸಲು ಅನುಮತಿ ನೀಡಲಾಗುತ್ತಿಲ್ಲ. ದೇಶದ ಸಮಸ್ಯೆಗಳ ಬಗ್ಗೆ ಚರ್ಚಿಸದೆ, ಆಡಳಿತ ಪಕ್ಷವು ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವಂತೆ ಮಾಡಲು ಗದ್ದಲ ಎಬ್ಬಿಸಿ, ಕಲಾಪವನ್ನು ಬಲವಂತವಾಗಿ ಮುಂದೂಡಲಾಗುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ವರದಿಗಳು ಹೇಳವಂತೆ, ಧನಕರ್ ವಿರುದ್ದದ ಅವಿಶ್ವಾಸ ಗೊತ್ತುವಳಿಗೆ ಕಳೆದ ಆಗಸ್ಟ್‌ನಲ್ಲಿಯೇ ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಸಹಿಹಾಕಿದ್ದವು. ಆದರೆ, ‘ಮತ್ತೊಂದು ಅವಕಾಶ’ ನೀಡುವ ಉದ್ದೇಶದಿಂದ ಪ್ರಸ್ತಾಪ ಮಾಡಿರಲಿಲ್ಲ. ಇದೀಗ, ಧನಕರ್ ಅವರು ತಮ್ಮ ಪಕ್ಷಪಾತಿ ಧೋರಣೆಯನ್ನು ಮುಂದುವರೆಸಿರುವ ಕಾರಣಕ್ಕಾಗಿ ಅವಿಶ್ವಾಸ ನಿರ್ಣಯ ಮಂಡಿಸಿವೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...