ರಾಹುಲ್‌ಗೆ ನನ್ನ ಬಂಗಲೆ ಬಿಟ್ಟುಕೊಡುವೆ: ಮಲ್ಲಿಕಾರ್ಜುನ ಖರ್ಗೆ

Date:

  • ಬಂಗಲೆ ತೆರವುಗೊಳಿಸಲು ಮಾರ್ಚ್ 27ರಂದು ರಾಹುಲ್ ಗಾಂಧಿಗೆ ನೋಟಿಸ್
  • ಏಪ್ರಿಲ್ 22ರೊಳಗೆ ತುಘಲಕ್ ಬೀದಿಯ ಅಧಿಕೃತ ಬಂಗಲೆ ತೆರವಿಗೆ ಸೂಚನೆ

ಸಂಸದರ ಅಧಿಕೃತ ನಿವಾಸವನ್ನು ತೆರವುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ತು ನೀಡಿರುವ ನೋಟಿಸ್‌ಗೆ ಮಂಗಳವಾರ (ಮಾರ್ಚ್ 28) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, “ರಾಹುಲ್ ಗಾಂಧಿ ಅವರಿಗೆ ನನ್ನ ಅಧಿಕೃತ ನಿವಾಸಗಳಲ್ಲಿ ಒಂದನ್ನು ಬಿಟ್ಟುಕೊಡುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸಂಸತ್ತು ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ನಂತರ ದೆಹಲಿಯಲ್ಲಿ ಸಂಸತ್ತು ಸದಸ್ಯರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ತೆರವುಗೊಳಿಸುವಂತೆ ರಾಹುಲ್ ಗಾಂಧಿ ಅವರಿಗೆ ಸೋಮವಾರ (ಮಾರ್ಚ್ 27) ಸಂಸತ್ತು ನೋಟಿಸ್ ನೀಡಿದೆ.

“ರಾಹುಲ್ ಗಾಂಧಿ ಅವರನ್ನು ದುರ್ಬಲಗೊಳಿಸಲು ಅವರು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ. ರಾಹುಲ್ ಅವರು ಸಂಸದರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ತೊರೆದರೆ ತಮ್ಮ ತಾಯಿಯೊಂದಿಗೆ ವಾಸಿಸಬಹುದು. ಇಲ್ಲವೇ ಅವರು ನನ್ನ ಬಳಿ ಬಂದರೆ ಅವರಿಗಾಗಿ ನನ್ನ ಅಧಿಕೃತ ನಿವಾಸಗಳಲ್ಲಿ ಒಂದನ್ನು ತೆರವುಗೊಳಿಸುತ್ತೇನೆ” ಎಂದು ದೆಹಲಿಯಲ್ಲಿ ಖರ್ಗೆ ಸುದ್ದಿಗಾರರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಹುಲ್ ಗಾಂಧಿ ಅವರನ್ನು ಬೆದರಿಸುವ ಮತ್ತು ಅವಮಾನಿಸುವ ಸರ್ಕಾರದ ಧೋರಣೆಯನ್ನು ನಾನು ಖಂಡಿಸುತ್ತೇನೆ. ಇದು ಸೂಕ್ತ ಮಾರ್ಗವಲ್ಲ. ಕೆಲವೊಮ್ಮೆ ನಾವು ಮೂರು-ನಾಲ್ಕು ತಿಂಗಳು ಬಂಗಲೆ ಇಲ್ಲದೆ ಇದ್ದೇವೆ. ನನಗೆ ಆರು ತಿಂಗಳ ನಂತರ ಬಂಗಲೆ ದೊರೆತಿತ್ತು. ಆಡಳಿತದ ಜನರು ಇತರರನ್ನು ಅವಮಾನಿಸಲು ಹೀಗೆ ಮಾಡುತ್ತಾರೆ” ಎಂದು ಖರ್ಗೆ ಕುಟುಕಿದರು.

ದೆಹಲಿಯ ತುಘಲಕ್ ಬೀದಿಯಲ್ಲಿರುವ ಅಧಿಕೃತ ಬಂಗಲೆಯನ್ನು ಗರಿಷ್ಠ ಒಂದು ತಿಂಗಳು ಅಥವಾ ಏಪ್ರಿಲ್ 22ರೊಳಗೆ ತೆರವುಗೊಳಿಸುವಂತೆ ಲೋಕಸಭೆ ಕಾರ್ಯಾಲಯ ರಾಹುಲ್ ಗಾಂಧಿ ಅವರಿಗೆ ಸೋಮವಾರ ನೋಟಿಸ್ ನೀಡಿದೆ.
“12ನೇ ಸಂಖ್ಯೆಯ ಬಂಗಲೆಯ ವಾಸ್ತವ್ಯವನ್ನು ಏಪ್ರಿಲ್ 23ರಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ವಾಸ್ತವ್ಯದ ಅವಧಿ ವಿಸ್ತರಿಸುವಂತೆ ರಾಹುಲ್ ಗಾಂಧಿ ಅವರು ವಸತಿ ಸಮಿತಿಗೆ ಮನವಿ ಸಲ್ಲಿಸಬಹುದು. ಇದನ್ನು ಸಮಿತಿ ಪರಿಗಣಿಸಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದರು.

ರಾಹುಲ್‌ ಅವರ ಅನರ್ಹತೆಯ ನಂತರ ಸಂಸತ್ತು ನೀಡಿರುವ ಅಧಿಕೃತ ಬಂಗಲೆ ತೆರವುಗೊಳಿಸುವಂತೆ ಲೋಕಸಭೆ ಕಾರ್ಯಾಲಯ ರಾಹುಲ್‌ ಅವರಿಗೆ ನೋಟಿಸ್‌ ನೀಡಿತ್ತು.

ರಾಹುಲ್‌ ಗಾಂಧಿ ಅವರಿಗೆ ‘ಮೋದಿ ಉಪನಾಮ’ ಕುರಿತ ಟೀಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯ ಮಾರ್ಚ್‌ 23ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದರ ಬೆನ್ನಲ್ಲೆ ಮಾರ್ಚ್ 24ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿ ಲೋಕಸಭೆ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು. ರಾಹುಲ್ ಅವರು ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿದ್ದರು.

2019ರ ಏಪ್ರಿಲ್‌ನಲ್ಲಿ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ಸಮಾವೇಶದ ವೇಳೆ ನೀರವ್ ಮೋದಿ, ಲಲಿತ್ ಮೋದಿ, ಮೆಹುಲ್ ಚೋಸ್ಕಿ ಮೊದಲಾದ ಭ್ರಷ್ಟರನ್ನು ಉಲ್ಲೇಖಿಸಿ, “ಎಲ್ಲ ಕಳ್ಳರಿಗೂ ಮೋದಿ ಎಂಬ ಸಾಮಾನ್ಯ ಹೆಸರು ಏಕಿರುತ್ತದೆ?” ಎಂದು ರಾಹುಲ್ ವ್ಯಂಗ್ಯವಾಡಿದ್ದರು. ಇದನ್ನು ಖಂಡಿಸಿ ಸೂರತ್‌ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ರಾಹುಲ್ ಅವರ ವಿರುದ್ಧ ಅಪರಾಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...