ಪಕ್ಷೇತರವಾಗಿ ಸ್ಪರ್ಧಿಸಲ್ಲ, ಮೋದಿ ಮಾತಿಗೆ ಗೌರವ ಕೊಟ್ಟು ಬಿಜೆಪಿ ಸೇರುವೆ: ಸುಮಲತಾ ಅಂಬರೀಶ್‌ ಸ್ಪಷ್ಟನೆ

Date:

ಲೋಕಸಭೆ ಚುನಾವಣೆಯ ಕುರಿತಂತೆ ತಮ್ಮ ನಿರ್ಧಾರವನ್ನು ಬುಧವಾರ ಪ್ರಕಟಿಸುವುದಾಗಿ ಘೋಷಿಸಿದ್ದ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್‌ ಅವರು ಚುನಾವಣಾ ಕಣದಿಂದ ದೂರ ಉಳಿದು, ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಮಂಡ್ಯದ ಕಾಳಿಕಾಂಬ ದೇಗುಲದ ಬಳಿ ಬುಧವಾರ ಸುಮಲತಾ ಅಂಬರೀಷ್‌ ಅವರು ಬೆಂಬಲಿಗರ ಸಭೆ ಕರೆದು ತಮ್ಮ ಈ ನಿರ್ಧಾರ ಪ್ರಕಟಿಸಿದರು.

“ನಾನು ಈ ಒಂದು ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುತ್ತಿಲ್ಲ. ಮಂಡ್ಯಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ. ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. ನರೇಂದ್ರ ಮೋದಿ ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಂಡ್ಯ ಕ್ಷೇತ್ರದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರ ಗೌರವ ನಾನು ಉಳಿಸಿಕೊಳ್ಳುವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳವಳ್ಳಿಯ ಸೊಸೆ ಮಳವಳ್ಳಿಯ ಋಣ ತೀರಿಸಿದ್ದಾಳೆ. ನನ್ನ ಹಿಂದೆ ಸಾಕಷ್ಟು ಜನ ಬೆಂಬಲವಾಗಿ ನಿಂತಿದ್ದರು. ಅವರಿಗೆ ತುಂಬು ಹೃದಯದ ಧನ್ಯವಾದ ತಿಳಿಸುತ್ತೇನೆ. ನನ್ನ ಮಕ್ಕಳಂತಿರುವ ದರ್ಶನ್‌ ಮತ್ತು ಯಶ್‌ ಅವರಿಗೂ ಧನ್ಯವಾದ ತಿಳಿಸದೇ ಇದ್ದರೆ ತಪ್ಪಾಗುತ್ತದೆ” ಎಂದು ಹೇಳಿದರು.

“ಈಗಲೂ ಸಾಕಷ್ಟು ಸವಾಲುಗಳು ನನ್ನ ಮುಂದಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯೇ ನನಗೆ ಬೆಂಬಲಿಸಿ ಭಾಷಣ ಮಾಡಿದ್ದರು. ಹಾಗಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಅವರಿಗೆ ಬೆಂಬಲ ಸೂಚಿಸಿದ್ದೆ. ಇವತ್ತು ಜೆಡಿಎಸ್‌ನೊಂದಿಗೆ ಬಿಜೆಪಿ ಮೈತ್ರಿಯಾಗಿದೆ. ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಲಿ ಎಂದು ಸಾಕಷ್ಟು ಪ್ರಯತ್ನಪಟ್ಟೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ನಿಲ್ಲಲು ಸಾಕಷ್ಟು ನಾಯಕರು ಸಲಹೆ ನೀಡಿದರು. ನಾನು ಮಂಡ್ಯ ಬಿಟ್ಟು ಹೋಗಲ್ಲ. ಗೆದ್ದರೂ, ಸೋತರೂ ಇಲ್ಲೇ ಇರುವೆ” ಎಂದರು.

ಈ ಸುದ್ದಿ ಓದಿದ್ದೀರಾ? ನಾನು ರಾಜೀನಾಮೆ ಕೊಡಲು ಸಿದ್ಧ, ಅಮಿತ್‌ ಶಾ ಕೊಡುತ್ತಾರಾ: ಸಿದ್ದರಾಮಯ್ಯ ಸವಾಲು

“ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುವ ಆಸೆ ನನಗಿಲ್ಲ. ನನ್ನ ಆಪ್ತ ವಲಯದಲ್ಲಿರುವವರು ಬೆಂಗಳೂರಿಗೆ ಬಂದು ಪಕ್ಷೇತರವಾಗಿ ಸ್ಪರ್ಧಿಸಿ ಎಂದು ಕೆಲವರು ಕೇಳಿದರು. ಇನ್ನೂ ಕೆಲವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಎಂದು ಹೇಳಿದರು. ತುಂಬಾ ಅಳೆದು ತೂಗಿ ಬಿಜೆಪಿ ಸೇರುವ ನಿರ್ಧಾರಕ್ಕೆ ಬಂದಿರುವೆ. ಎಂಪಿ ಚುನಾವಣೆ ಎಂಬುದು ಹುಡುಗಾಟ ಅಲ್ಲ. ನನಗೆ ಸ್ವಾರ್ಥವಿಲ್ಲ. ಯಾವ ಕಾರಣಕ್ಕೆ ನಾನು ಪಕ್ಷೇತರವಾಗಿ ನಿಲ್ಲಬೇಕು? ಹಠಮಾಡಿ ನಿಂತರೆ ಅದು ಸ್ವಾರ್ಥ ರಾಜಕಾರಣ ಆಗುತ್ತದೆ” ಎಂದು ತಿಳಿಸಿದರು.

“ಸುಮಲತಾ ಅವರ ಅವಶ್ಯಕತೆ ಇಂದೆಯೂ ಇಲ್ಲ, ಮುಂದೆಯೂ ಇರಲ್ಲ ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ. ಸ್ವಾಭಿಮಾನಬಿಟ್ಟು ನಾನು ನಡೆಯೋಲ್ಲ. ಅಲ್ಲಿಗೆ ನಾನ್ಯಾಕೆ ಹೆಜ್ಜೆ ಇಡಲಿ. ನನ್ನ ಭವಿಷ್ಯದ ಬಗ್ಗೆ ನನಗೆ ಚಿಂತೆಯಿಲ್ಲ. ನಾನು ಈ ಮಣ್ಣಿನ ಸೊಸೆ. ಇದೇ ಶಾಶ್ವತ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ಗೆ ತಿರುಗೇಟು ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...