ಎನ್‌ಡಿಎಯಲ್ಲೇ ಇರುತ್ತೇನೆ, ಯಾವುದೇ ಬದಲಾವಣೆಗಳ ಬಗ್ಗೆ ಯೋಚಿಸುವುದಿಲ್ಲ: ನಿತೀಶ್ ಕುಮಾರ್

Date:

ಸತತ ಐದನೇ ಬಾರಿಗೆ ಅಧಿಕಾರವನ್ನು ಮತ್ತೆ ಪಡೆಯುವ ತಯಾರಿಯನ್ನು ನಡೆಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ಎನ್‌ಡಿಎಯಲ್ಲೇ ಇರುತ್ತೇನೆ, ಯಾವುದೇ ಬದಲಾವಣೆಗಳ ಬಗ್ಗೆ ಯೋಚಿಸುವುದಿಲ್ಲ” ಎಂದು ಹೇಳಿದ್ದಾರೆ.

ದೇಶಾದ್ಯಂತ ಸಾವಿರಾರು ಯುವ ಕ್ರೀಡಾಪಟುಗಳು ಭಾಗವಹಿಸುತ್ತಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಜೆಡಿ(ಯು) ನಾಯಕ ಕುಮಾರ್, ತಾನು ಎನ್‌ಡಿಎ ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದರು.

ಇದನ್ನು ಓದಿದ್ದೀರಾ? ಎರಡು ಬಾರಿ ತಪ್ಪು ಮಾಡಿದೆ, ಇನ್ನೆಂದೂ ಎನ್‌ಡಿಎ ತೊರೆಯಲ್ಲ: ನಿತೀಶ್‌ ಕುಮಾರ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ಬಾರಿ ಪಕ್ಷಾಂತರಗೊಳ್ಳುವ ಮೂಲಕವೇ ಸುದ್ದಿಯಾಗಿರುವ ನಿತೀಶ್ ಕುಮಾರ್ ಅವರು ಈಗ ಮತ್ತೆ ಪಕ್ಷಾಂತರಗೊಳ್ಳಬಹುದು ಎಂಬ ಸುದ್ದಿಗಳು ಆಗಾಗೇ ಆಗುತ್ತಲೇ ಇದೆ. ಈ ನಡುವೆ ತಾನು ಎನ್‌ಡಿಎಯಲ್ಲೇ ಇರುತ್ತೇನೆ ನಿತೀಶ್ ಕುಮಾರ್ ಹೇಳಿದ್ದಾರೆ.

“ನಾನು ಯಾವಾಗಲೂ ಇಲ್ಲೇ ಇರುತ್ತೇನೆ. ನನ್ನ ಪಕ್ಷ ಎರಡು ಬಾರಿ ನಾನು ಎನ್‌ಡಿಎ ಕೂಟದೊಂದಿಗಿನ ಮೈತ್ರಿಯನ್ನು ಮುರಿಯುವಂತೆ ಮಾಡಿದೆ. ಆದರೆ ಇದು ಮತ್ತೆ ಸಂಭವಿಸುವುದಿಲ್ಲ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

“ನನ್ನನ್ನು (ಮುಖ್ಯಮಂತ್ರಿ) ಮಾಡಿದವರು ಯಾರು? ಅಟಲ್ ಬಿಹಾರಿ ವಾಜಪೇಯಿ ಅವರು” ಎಂದು ಹೇಳಿದ್ದಾರೆ. ನಿತೀಶ್ ಕುಮಾರ್ ಅವರ ಪಕ್ಷವು 1990ರ ದಶಕದ ಮಧ್ಯಭಾಗದಿಂದ ಬಿಜೆಪಿ ಮಿತ್ರಪಕ್ಷವಾಗಿತ್ತು. 2013ರಲ್ಲಿ ನರೇಂದ್ರ ಮೋದಿ ಅವರೊಂದಿಗಿನ ಅತೃಪ್ತಿಯ ನಂತರ ಬಿಜೆಪಿಯೊಂದಿಗಿನ ಮೈತ್ರಿ ಕೈಬಿಟ್ಟರು.

ಇದನ್ನು ಓದಿದ್ದೀರಾ? ಮೋದಿ 3.0 ಸರ್ಕಾರದಲ್ಲಿ ನಿತೀಶ್ ಪಕ್ಷಕ್ಕೆ 2 ಮಂತ್ರಿಗಿರಿ

ಒಂದು ವರ್ಷದ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಹೀನಾಯವಾಗಿ ಸೋತಿದ್ದಾರೆ. ಮೋದಿ ಪ್ರಧಾನಿಯಾದರೂ ನಿತೀಶ್ ಕುಮಾರ್ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಇದಕ್ಕೆ ಕಾರಣ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರೊಂದಿಗಿನ ಮೈತ್ರಿ. ಅದಾದ ಬಳಿಕ 2017ರಲ್ಲಿ ಮತ್ತೆ ಎನ್‌ಡಿಎಗೆ ಮರಳಿದರು.

2022ರವರೆಗೆ ಈ ಮೈತ್ರಿ ಮುಂದುವರೆದಿದ್ದು, ಬಳಿಕ ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಜೊತೆ ಕುಮಾರ್ ಕೈಜೋಡಿಸಿದರು. ಬಿಜೆಪಿಯನ್ನು ಸೋಲಿಸುವುದಾಗಿ ಪ್ರತಿಜ್ಞೆ ಮಾಡಿದರು.

ಬಳಿಕ ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಗೆ ಮುನ್ನ, 70ರ ಹರೆಯದ ನಿತೀಶ್ ಕುಮಾರ್ ಅವರು ಎನ್‌ಡಿಎಗೆ ಮರಳಿದರು. ಬಿಜೆಪಿ ವಿರುದ್ಧವಾಗಿ ಒಟ್ಟುಗೂಡಿದ ಇಂಡಿಯಾ ಒಕ್ಕೂಟವನ್ನು ತ್ಯಜಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...