ಲೋಕಸಭೆಗೆ ಮಾತ್ರ ಮೈತ್ರಿ ಮಾಡಿದ್ದರೆ ಇಂಡಿಯಾ ಒಕ್ಕೂಟವನ್ನು ರದ್ದುಗೊಳಿಸಿ: ಒಮರ್ ಅಬ್ದುಲ್ಲಾ

Date:

ದೆಹಲಿ ವಿಧಾನಸಭಾ ಚುನಾವಣೆ ಮುನ್ನ ಇಂಡಿಯಾ ಒಕ್ಕೂಟದ ಅನಿಶ್ಚಿತ ಭವಿಷ್ಯದ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, “ಬರೀ ಲೋಕಸಭೆ ಚುನಾವಣೆಯ ಉದ್ದೇಶದಿಂದ ಈ ಮೈತ್ರಿಯನ್ನು ಮಾಡಿದ್ದರೆ ಇಂಡಿಯಾ ಒಕ್ಕೂಟವನ್ನು ರದ್ದುಗೊಳಿಸಿ” ಎಂದು ಹೇಳಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ಪರಸ್ಪರ ಎದುರಾಳಿಯಾಗಿ ಸ್ಪರ್ಧಿಸುತ್ತಿದೆ. ಇಂಡಿಯಾ ಒಕ್ಕೂಟದ ಕೆಲವು ಮಿತ್ರಪಕ್ಷಗಳು ಎಎಪಿಗೆ ಬೆಂಬಲ ಸೂಚಿಸಿದೆ. ಈ ನಡುವೆ “ಮೈತ್ರಿಕೂಟ ಇನ್ನೂ ಕೂಡಾ ಉಳಿಯಬೇಕೇ” ಎಂದು ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆಗೆ ಸಿಎಂ ಒಮರ್ ಅಬ್ದುಲ್ಲಾ ಗೈರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಮೈತ್ರಿಕೂಟವು ಸಂಸತ್ತಿನ ಚುನಾವಣೆಗೆ ಮಾತ್ರವಾಗಿದ್ದರೆ, ಅದನ್ನು ರದ್ದುಗೊಳಿಸಿ, ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತೇವೆ. ಆದರೆ ಈ ಮೈತ್ರಿ ವಿಧಾನಸಭೆ ಚುನಾವಣೆಗೂ ಅನ್ವಯವಾಗುವುದಾದರೆ ನಾವು ಒಟ್ಟಿಗೆ ಕುಳಿತು ಸಾಮೂಹಿಕವಾಗಿ ಕೆಲಸ ಮಾಡಬೇಕಾಗುತ್ತದೆ” ಎಂದು ಅಭಿಪ್ರಾಯಿಸಿದ್ದಾರೆ.

ಕಳೆದ ವರ್ಷದ ಲೋಕಸಭೆ ಚುನಾವಣೆಗಾಗಿ ಮಾತ್ರ ಮೈತ್ರಿಕೂಟ ರಚಿಸಲಾಗಿದೆ ಎಂಬರ್ಥದಲ್ಲಿ ಆರ್‌ಜೆಡಿ ನಾಯಕ ಸೇರಿದಂತೆ ಇತರ ಬಣ ಸದಸ್ಯರ ಹೇಳಿಕೆಯಿಂದಾಗಿ ಇಂಡಿಯಾ ಒಕ್ಕೂಟ ಬರ್ಕಾಸ್ತು ಮಾಡುವ ಬಗ್ಗೆ ಊಹಾಪೋಹಗಳು ಹರಡುತ್ತಿದೆ.

ಈ ನಡುವೆ ಒಮರ್ ಮಾಧ್ಯಮಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ನನಗೆ ನೆನಪಿರುವಂತೆ, ಇಂಡಿಯಾ ಒಕ್ಕೂಟಕ್ಕೆ ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲಾಗಿಲ್ಲ. ಇಂಡಿಯಾ ಒಕ್ಕೂಟದ ಯಾವುದೇ ಸಭೆಯನ್ನು ಕರೆಯದಿರುವುದೇ ಸಮಸ್ಯೆಯಾಗಿದೆ” ಎಂದು ಅಭಿಪ್ರಾಯಿಸಿದ್ದಾರೆ. ಹಾಗೆಯೇ ನಾಯಕತ್ವ ಮತ್ತು ಒಗ್ಗಟ್ಟಿನ ಕೊರತೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ನಂತರ ಮೈತ್ರಿಕೂಟದ ಸಭೆಯನ್ನು ಕರೆಯಬಹುದು ಎಂದು ಹೇಳಿರುವ ಒಮರ್, ಸಭೆಗೆ ವಿಳಂಬ ಮಾಡುತ್ತಿರುವುದನ್ನು ಟೀಕಿಸಿದರು. ಇದು ನಮ್ಮ ಮೈತ್ರಿಕೂಟದ ಒಗ್ಗಟ್ಟನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...