ಕಾಂಗ್ರೆಸ್ ಇರದಿದ್ದರೆ ಸ್ವಾತಂತ್ರ್ಯವೇ ಸಿಗುತ್ತಿರಲಿಲ್ಲ: ಬಿಜೆಪಿಗೆ ಶಿವಸೇನೆ ನಾಯಕ ಸಂಜಯ್ ರಾವುತ್ ತಿರುಗೇಟು

Date:

ಈ ದೇಶಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯನ್ನು ಹಾಡಿಹೊಗಳಿದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ನಾಯಕ ಸಂಜಯ್ ರಾವುತ್, “ಕಾಂಗ್ರೆಸ್ ನಾಯಕತ್ವ ಇರದಿದ್ದರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯವೇ ಸಿಗುತ್ತಿರಲಿಲ್ಲ. ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಇಷ್ಟೊಂದು ಪ್ರಗತಿ ಸಾಧಿಸುತ್ತಿರಲಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ ಯಾತ್ರೆಯು ಕೊನೆಯಾಗುತ್ತಿರುವ ಸಂದರ್ಭದಲ್ಲೇ ಬಿಜೆಪಿಯು “ಕಾಂಗ್ರೆಸ್ ನಹಿ ಹೋತಿ ತೊ ಕ್ಯಾ ಹೋತಾ” (ಕಾಂಗ್ರೆಸ್ ಇರದಿದ್ದರೆ ಏನಾಗುತ್ತಿತ್ತು) ಎಂಬ ಶೀರ್ಷಿಕೆಯ ಪುಸ್ತಕವನ್ನು ಬಿಡುಗಡೆ ಮಾಡುತ್ತಿದೆ. ಈ ಪುಸ್ತಕದ ಬಗ್ಗೆ ಶಿವಸೇನೆ ನಾಯಕ ಸಂಜಯ್ ರಾವುತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ನಮ್ಮ ದೇಶದಲ್ಲಿ ಕಾಂಗ್ರೆಸ್ ಇರದಿದ್ದರೆ ದೇಶಕ್ಕೆ ಸ್ವಾತಂತ್ರ್ಯವೇ ಲಭಿಸುತ್ತಿರಲಿಲ್ಲ, ದೇಶಕ್ಕೆ ಒಂದು ನಾಯಕತ್ವವೇ ಇರುತ್ತಿರಲಿಲ್ಲ. ನಾವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಇಷ್ಟೊಂದು ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಇಂತಹ ಹಲವಾರು ವಿಚಾರಗಳು ಇದೆ. ಆದರೆ ಇವೆಲ್ಲವೂ ಬಿಜೆಪಿಗೆ ಅರ್ಥವಾಗುವುದಿಲ್ಲ. ಯಾಕೆಂದರೆ ಬಿಜೆಪಿ ಪಕ್ಷದವರು ದೇಶದ ಬಗ್ಗೆ ಆಲೋಚಿಸುವುದಿಲ್ಲ, ಅವರು ಬರೀ ಉದ್ಯಮಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ” ಎಂದು ಬಿಜೆಪಿ ವಿರುದ್ಧ ರಾವುತ್ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಇಲ್ಲದಿದ್ದರೆ ಪಾಕಿಸ್ತಾನ ವಿಭಜನೆಯಾಗುತ್ತಿರಲಿಲ್ಲ. ನಮ್ಮ ದೇಶವು ಏಕತೆಯಿಂದ ಇರುತ್ತಿರಲಿಲ್ಲ” ಎಂದ ರಾವುತ್, “ಬಿಜೆಪಿ ಈ ದೇಶವನ್ನು ಬಡ ದೇಶವನ್ನಾಗಿಸುತ್ತಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರದ ಶಿಂಧೆ ಸರ್ಕಾರ 15 ದಿನದಲ್ಲಿ ಪತನ: ಸಂಜಯ್‌ ರಾವುತ್

“ನಮ್ಮ ದೇಶದಲ್ಲಿ ಬಿಜೆಪಿ ಇರದಿದ್ದರೆ ನಮ್ಮ ದೇಶದಲ್ಲಿ ಇಂತಹ ತೊಂದರೆಗಳು ಇರುತ್ತಿರಲಿಲ್ಲ. ನಮ್ಮ ದೇಶದಲ್ಲಿ ಗಲಭೆಗಳು ಆಗುತ್ತಿರಲಿಲ್ಲ. ನಮ್ಮ ದೇಶದ ರೂಪಾಯಿ ಮೌಲ್ಯವು ಕುಸಿಯುತ್ತಿರಲಿಲ್ಲ. ಸಾಲವೂ ಕೂಡಾ ಕಡಿಮೆ ಇರುತ್ತಿತ್ತು. ರಫೇಲ್‌ನಿಂದ ಹಿಡಿದು ಚುನಾವಣಾ ಬಾಂಡ್‌ವೆರೆಗಿನ ಹಗರಣಗಳು ಇರುತ್ತಿರಲಿಲ್ಲ” ಎಂದು ಬಿಜೆಪಿಗೆ ಶಿವಸೇನೆ ನಾಯಕ ತಿರುಗೇಟು ನೀಡಿದ್ದಾರೆ.

ಇನ್ನು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ನಟಿ ಸ್ವರಾ ಭಾಸ್ಕರ್ ಮುಂಬೈನಲ್ಲಿ ಭಾನುವಾರ ನ್ಯಾಯ ಸಂಕಲ್ಪ ಪಾದಯಾತ್ರೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...