ಆರ್‌ಎಸ್‌ಎಸ್‌ ಇಲ್ಲ ಅಂದ್ರೆ ಬಿಜೆಪಿ ಶೂನ್ಯ: ಡಿಸಿಎಂ ಡಿ.ಕೆ ಶಿವಕುಮಾರ್

Date:

ಆರ್‌ಎಸ್‌ಎಸ್‌ ಇಲ್ಲದೇ ಇದ್ದರೆ ಬಿಜೆಪಿ ಶೂನ್ಯ. ಆರ್‌ಎಸ್‌ಎಸ್‌ನಿಂದಲೇ ಬಿಜೆಪಿ ಬದುಕಿದೆ. ಆರ್‌ಎಸ್‌ಎಸ್‌ ಅಲ್ಲದೆ, ಬೇರಾವುದೇ ಅಸ್ತ್ರ ಬಿಜೆಪಿ ಬಳಿ ಇಲ್ಲ. ಬಿಜೆಪಿಯಲ್ಲಿ 20% ಜನರನ್ನು ಬಿಟ್ಟರೆ, ಉಳಿದವರೆಲ್ಲರೂ ಭ್ರಷ್ಟರು-ಕಲುಷಿತರೆ. ಬಿಜೆಪಿ ಇತರ ಎಲ್ಲ ಪಕ್ಷಗಳಿಂದ ಜನರನ್ನು ಕರೆದೊಯ್ದು, ಸೇರಿಸಿಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ಕೊಡಬೇಕು. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ಯಾವುದೇ ಪರಿಹಾರ ಹೇಳದೆ ಟೀಕೆ ಮಾಡಿದರೆ ಏನು ಪ್ರಯೋಜನ” ಎಂದಿದ್ದಾರೆ.

“ಮೆಟ್ರೋ ಮಾರ್ಗ ಹೋಗುವುದು ಟನಲ್ ಮೂಲಕವೇ ಅಲ್ಲವೇ? ಈ ಯೋಜನೆ ತಂದವರು ಯಾರು? ಎಸ್.ಎಂ.ಕೃಷ್ಣ ಕಾಲದಲ್ಲಿ ಹತ್ತು ದೇಶಗಳನ್ನು ತಿರುಗಿ ಅಧ್ಯಯನ ಮಾಡಿ, ವರದಿ ಕೊಟ್ಟಿದೆ. ಆ ವರದಿ ಮೂಲಕ ಯೋಜನೆ ಆರಂಭವಾಯಿತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಜೆಮಿಮಾ ರಾಡ್ರಿಗ್ಸ್ | ಭಾರತದ ಹೆಮ್ಮೆ; ಕಣ್ಣೀರಿನೊಳಗೆ ಕಂಗೊಳಿಸಿದ ಗೆಲುವು

“ತೇಜಸ್ವಿ ಸೂರ್ಯ ಮತ್ತು ಬಿಜೆಪಿ ನಾಯಕರು ಕಾರಲ್ಲಿ ಓಡಾಡುವುದು ಬಿಟ್ಟು ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಸಲಿ. ಇವರ ನಾಟಕಗಳನ್ನು ಕೇಳುವವರು ಯಾರು? ಆತನಿಗೆ ಮದುವೆಗೆ ಮುಂಚಿತವಾಗಿ ಹೊಸ ಕಾರು ಏಕೆ ಬೇಕಿತ್ತು? ಕಾರಲ್ಲಿ ಓಡಾಡುವುದು ಪ್ರತಿಷ್ಠೆಯೇ? ಸಾಮಾಜಿಕ ಅನಿವಾರ್ಯತೆ ಅವನಿಗೆ ಎದುರಾಯಿತೇ? ರೈಲು, ಮೆಟ್ರೋದಲ್ಲಿ ಓಡಾಡಲು ಬೇಡ ಎಂದವರಾರು” ಎಂದಿದ್ದಾರೆ.

“ನಾನು ಎಲ್ಲ ರೀತಿಯ ಅಧ್ಯಯನ ನಡೆಸಿದ್ದೇನೆ. ಲಾಲ್ ಬಾಗ್ ಹಾಳು ಮಾಡಲು ನಾನೇನು ಮೂರ್ಖನಲ್ಲ. ಇದರ ಇತಿಹಾಸವೂ ನನಗೆ ಗೊತ್ತಿದೆ. ಉದ್ಯಾನದಲ್ಲಿ ಎಷ್ಟು ಭಾಗ ಉಪಯೋಗವಾಗುತ್ತಿದೆ, ಉಪಯೋಗವಾಗುತ್ತಿಲ್ಲ ಎಂಬುದು ನನಗೆ ಗೊತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡರೂ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಾರೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...