ಮಹಿಳೆಯ ವಿವಸ್ತ್ರ ಪ್ರಕರಣ | ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ಮಾಹಿತಿ ಸಂಗ್ರಹ

Date:

  • ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ ಬರಲಿಲ್ಲವೇಕೆ?
  • ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ: ಟೀಕೆ

ಇಡೀ ರಾಜ್ಯ ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಮಹಿಳೆ ನಗ್ನಗೊಳಿಸಿ ಥಳಿಸಿದ ಘಟನೆ ನಡೆದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲವೇಕೆ? ಸಂತ್ರಸ್ತೆಯನ್ನು ಭೇಟಿ ಮಾಡಿಲ್ಲವೇಕೆ? ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಸಂಸದರಾದ ಅಪರಾಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರ ನಿಯೋಗವು ಇಂದು ಬೆಳಗಾವಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ, ನಗ್ನಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಯ ಮಾಹಿತಿ ಸಂಗ್ರಹಿಸಿತು. ಅಲ್ಲದೆ ನಿಯೋಗವು ಸಂತ್ರಸ್ತೆಯನ್ನೂ ಭೇಟಿ ಮಾಡಿತು.

ಅಪರಾಜಿತಾ ಸಾರಂಗಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ರಾಷ್ಟ್ರವೇ ತಲೆತಗ್ಗಿಸುವ ಘಟನೆ ಇದಾಗಿದೆ. ಸರಕಾರದ ಪ್ರಮುಖರು ಸಂತ್ರಸ್ತೆಯನ್ನು ಯಾಕೆ ಭೇಟಿ ಮಾಡಿಲ್ಲ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆ ನಡೆದು 2 ಗಂಟೆವರೆಗೂ ಪೊಲೀಸರು ಸ್ಥಳಕ್ಕೆ ಬಂದಿಲ್ಲ. ಠಾಣಾಧಿಕಾರಿಗೆ ಸ್ಥಳಕ್ಕೆ ಹೋಗಬೇಕಾದಷ್ಟು ಮಹತ್ವದ ಪ್ರಕರಣ ಎಂದು ಅನಿಸಲಿಲ್ಲವೇ? ಮಹಿಳೆ, ಅದೂ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಇದಾಗಿದ್ದರೂ ಅವರು ಕೂಡಲೇ ಸ್ಥಳಕ್ಕೆ ತೆರಳಲಿಲ್ಲವೇಕೆ? ಎಂದು ಕೇಳಿದರು.

ಈ ಸುದ್ದಿ ಓದಿದ್ದೀರಾ? ತಾಕತ್ತಿದ್ದರೆ ಬಿಜೆಪಿ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿ ಕಳಿಸಲಿ: ನಡ್ಡಾಗೆ ಸವಾಲೆಸೆದ ಸಿಎಂ

“ರಾಜ್ಯದ ಮಹಿಳೆಯರ ಸುರಕ್ಷತೆ ರಾಜ್ಯ ಸರಕಾರದ ಆದ್ಯತೆ ಆಗಬೇಕು. ಅದು ಪ್ರಥಮ ಆದ್ಯತೆ ಆಗಿರಲಿ. ಘಟನೆ ನಡೆದ ಮೇಲೆ ಕೂಡ ರಾಜ್ಯ ಸರಕಾರ ವಿಳಂಬವಾಗಿ ಸ್ಪಂದಿಸುತ್ತಿದೆ. ಇದು ಮಹಿಳೆಯರ ಘನತೆಯ ಪ್ರಶ್ನೆ” ಎಂದೂ ಅಭಿಪ್ರಾಯಪಟ್ಟರು.

ಆಶಾ ಲಾಕ್ರಾ ಅವರು ಮಾತನಾಡಿ, “ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ವಸ್ತುಸ್ಥಿತಿ ತಿಳಿಯಲು ಇಲ್ಲಿ ಬಂದಿದ್ದೇವೆ. ಮಧ್ಯರಾತ್ರಿ ಅಸಹಾಯಕ ಮಹಿಳೆಯ ಮೇಲೆ ಆಕ್ರಮಣ ನಡೆಸಲಾಗಿದೆ. ಮಹಿಳೆಯನ್ನು ಪರೇಡ್ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ತಡವಾಗಿ ಪೊಲೀಸರು ಆಗಮಿಸಿದ್ದಾರೆ. ಠಾಣೆ ಬಹಳ ದೂರದಲ್ಲಿ ಇಲ್ಲ; ಆದರೂ ಪೊಲೀಸರು ಸ್ಪಂದಿಸಿಲ್ಲವೇಕೆ? ಎಂದು ಕಿಡಿಕಾರದಿರು.

“ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ನಮಗೆ ಅನಿಸುತ್ತಿದೆ. ಠಾಣಾಧಿಕಾರಿಯ ನಿರ್ಲಕ್ಷ್ಯವು ಕಾಂಗ್ರೆಸ್ ಸರಕಾರದ ಮಾನಸಿಕತೆಯ ಪ್ರತೀಕ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 43 ಸಾವಿರ ಕ್ರಿಮಿನಲ್ ಕೇಸುಗಳು ದಾಖಲಾಗಿವೆ” ಎಂದೂ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...