ಮಹಿಳಾ ಮೀಸಲಾತಿ | ‘ಇಂಡಿಯಾ’ ಬೆಂಬಲ; ಎರಡು ಟೀಕೆಗಳನ್ನು ಮುಂದಿಟ್ಟ ಒಕ್ಕೂಟ

Date:

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸರುವ ಮಹಿಳಾ ಮೀಸಲಾತಿ ಮಸೂದೆಯು ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವನ್ನು ಸಂದಿಗ್ಧತೆಗೆ ದೂಡಿತ್ತು. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಹಾಗೂ ಎಡಪಕ್ಷಗಳು ಮಸೂದೆಯನ್ನು ಬೆಂಬಲಿಸಿದರೆ, ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಿರೋಧ ವ್ಯಕ್ತಪಡಿಸಿದ್ದವು. ಈ ಮಸೂದೆ ಇಂಡಿಯಾ ಒಕ್ಕೂಟವನ್ನು ವಿಭಜಿಸಬಹುದು ಎಂಬ ಅಭಿಪ್ರಾಯಗಳೂ ಇದ್ದವು. ಆದರೆ, ವಿಪಕ್ಷಗಳು ಉತ್ತಮ ರೀತಿಯಲ್ಲಿ ನಮಸ್ವಯ ಸಾಧಿಸಿವೆ.

ಒಕ್ಕೂಟವು ಮಸೂದೆಯನ್ನು ಸ್ವಾಗತಿಸುವುದರ ಜೊತೆಗೆ ಎರಡು ಟೀಕೆಗಳನ್ನು ಮುಂದಿಟ್ಟಿವೆ. ಅದರಲ್ಲಿ ಒಂದು) ಒಬಿಸಿ ಕೋಟಾ ನೀಡದಿರುವುದು. ಮತ್ತೊಂದು) ಅನುಷ್ಠಾನದಲ್ಲಿನ ವಿಳಂಬ.

ಒಬಿಸಿ ಕೋಟಾ ನೀಡಲು ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಸೂದೆಯ ವಿರುದ್ಧ ಮತ ಚಲಾಯಿಸಬಾರದು ಅಥವಾ ಯಾವುದೇ ರೀತಿಯಲ್ಲಿ ಅದನ್ನು ವಿರೋಧಿಸಬಾರದು ಎಂಬ ವಿಚಾರದಲ್ಲಿ ಇಂಡಿಯಾ ಒಕ್ಕೂಟವು ಒಮ್ಮತವನ್ನು ಪ್ರದರ್ಶಿಸಿದೆ. ಹಾಗಾಗಿ, ಎಸ್‌ಪಿ ಮತ್ತು ಜೆಡಿಯು ಮಸೂದೆಯನ್ನು ವಿರೋಧಿಸುವುದಿಲ್ಲ. ಆದರೆ, ಮಹಿಳೆಯರಿಗೆ 33% ಮೀಸಲಾತಿಯೊಳಗೆ ಒಬಿಸಿ ಕೋಟಾವನ್ನೂ ನೀಡಬೇಕೆಂದು ಒತ್ತಾಯಿಸಲು ನಿರ್ಧರಿಸಿವೆ.

ಈ ಹಿಂದೆ, ಮಸೂದೆಯನ್ನು ಕಡಾಖಂಡಿತವಾಗಿ ವಿರೋಧಿಸಿದ್ದ ಪಕ್ಷಗಳಲ್ಲಿ ಒಂದಾಗಿದ್ದ ಆರ್‌ಜೆಡಿ, ಈಗ ಮಸೂದೆಯನ್ನು ಬೆಂಬಲಿಸಲು ಒಪ್ಪಿದೆ ಎಂದು ಹೇಳಲಾಗುತ್ತಿದೆ.

ಆರ್‌ಜೆಡಿ ನಿಲುವನ್ನು ಟ್ವೀಟ್‌ ಮೂಲಕ ವ್ಯಕ್ತಪಡಿಸಿರುವ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ, “ಒಬಿಸಿ ಸಮುದಾಯಗಳ ಮಹಿಳೆಯರನ್ನು ಮೀಸಲಾತಿಯಿಂದ ಹೊರಗಿಡಲಾಗುತ್ತಿದೆ. ಕ್ಷೇತ್ರ ಪುನರ್‌ ವಿಂಡಗಣೆ ನಂತರ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ. ಜನಗಣತಿಯ ನಂತರ ಕ್ಷೇತ್ರ ಪುನರ್‌ ವಿಂಗಡಣೆ ನಡೆಯಲಿದೆ. ಜಾತಿ ಗಣತಿಗೂ ಬೇಡಿಕೆಯಿದ್ದು, ಕೇಂದ್ರವು ಅದನ್ನೂ ವಿಳಂಬಗೊಳಿಸಿದೆ. ಇದು ಗದ್ದಲವಲ್ಲದೇ ಮತ್ತೇನಲ್ಲ,” ಎಂದಿದ್ದಾರೆ.

ಮಹಿಳಾ ಮೀಸಲಾತಿಯಲ್ಲಿ ಒಬಿಸಿ ಕೋಟಾ ನೀಡಬೇಕೆಂಬುದು ಸಾಮಾಜಿಕ ನ್ಯಾಯದ ಪರವಾದ ವಿಚಾರವಾಗಿದೆ ಎಂದು ವಿಪಕ್ಷಗಳ ಒಕ್ಕೂಟ ಪ್ರತಿಪಾದಿಸಿದೆ.

ಅನುಷ್ಠಾನಕ್ಕೆ ತಡವೇಕೆ?

ಮಹಿಳಾ ಮೀಸಲಾತಿಯನ್ನು ಅನುಷ್ಠಾನಕ್ಕೆ ತರಲು ತಡವೇಕೆ ಎಂದು ಇಂಡಿಯಾ ಒಕ್ಕೂಟ ಪ್ರಶ್ನಿಸಿದೆ. ಈ ಬಗ್ಗೆ ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಗೃಹ ಮತ್ತು ಹಣಕಾಸು ಸಚಿವ ಪಿ ಚಿದಂಬರಂ ಟ್ವೀಟ್‌ ಮಾಡಿದ್ದು, “ಮುಂದಿನ ಜನಗಣತಿಯ ದಿನಾಂಕವನ್ನೂ ಗೊತ್ತುಪಡಿಸಲಾಗಿಲ್ಲ. ಅದೂ ಅನಿರ್ದಿಷ್ಟವಾಗಿದೆ. ಮುಂದಿನ ಕ್ಷೇತ್ರ ಮರುವಿಂಗಡಣೆ (ಬಾಗಶಃ ವಿವಾದಾತ್ಮಕ) ದಿನಾಂಕವೂ ಅದೇ ಪರಿಸ್ಥಿತಿಯಲ್ಲಿದೆ. ಮಹಿಳಾ ಮೀಸಲಾತಿಯು ಎರಡು ಅನಿರ್ದಿಷ್ಟ ದಿನಾಂಕಗಳ ಮೇಲೆ ಅವಲಂಬಿತವಾಗಿದೆ! ಮಹಿಳಾ ಮೀಸಲಾತಿ ಅನುಷ್ಠಾನವು ಜುಮ್ಲಾ (ಸುಳ್ಳು) ಇರಬಹುದೇ? ಮೀಸಲಾತಿಯನ್ನು ಈಗ ಸವೀಕರಿಸಲಾಗಿರುವ ಮತದಾರರ ಪಟ್ಟಿಗಳ ಆಧಾರದ ಮೇಲೆ ತಕ್ಷಣವೇ ಜಾರಿಗೆ ತರಬಹುದು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಹಿಳಾ ಮೀಸಲಾತಿ | 15 ವರ್ಷಗಳಿಂದ ಮಂಡನೆಯಾಗದ ಮಸೂದೆ; ವಿರೋಧಿಗಳು ಯಾರು?

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಎಎಪಿ ನಾಯಕ, ಎಹಲಿ ಸಚಿವ ಅತಿಶಿ, “ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಂತರ ಮಹಿಳಾ ಮೀಸಲಾತಿ ಜಾರಿಗೆ ತರುತ್ತೇವೆ ಎಂಬದು ಮಹಿಳೆಯರನ್ನು ಮೂರ್ಖರನ್ನಾಗಿಸುವ ತಂತ್ರ” ಎಂದು ಹೇಳಿದ್ದಾರೆ.

“ಈ ಮಸೂದೆಯನ್ನು 2027 ಅಥವಾ 2028ರಲ್ಲಿ ಜಾರಿಗೆ ತರಬಹುದು. ಆದರೆ, ಈಗ ಸರ್ಕಾರವು 2024ರ ಚುನಾವಣೆಯಲ್ಲಿ ಮಹಿಳೆಯರನ್ನು ಮರುಳು ಮಾಡಲು ಪ್ರಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ಮಹಿಳಾ ಮೀಸಲಾತಿ ಯುಪಿಎ ಧ್ಯೇಯ ಎಂದು ಕಾಂಗ್ರೆಸ್ ಮತ್ತು ಡಿಎಂಕೆ ಹೇಳುತ್ತಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ನಾವು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿದ್ದೇವೆ ಎಂದು ಟಿಎಂಸಿ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...