ಮಹಿಳಾ ಮೀಸಲಾತಿ ಮಸೂದೆ 2034ರವರೆಗೂ ಜಾರಿಯಾಗುವುದಿಲ್ಲ, ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ: ಖರ್ಗೆ

Date:

ಮಹಿಳಾ ಮೀಸಲಾತಿ ಮಸೂದೆಯು ‘ಜುಮ್ಲಾ’ (ಖಾಲಿ ಭರವಸೆ) ಆಗಿದ್ದು, ಜನರು ಅದಕ್ಕೆ ಮತ ಹಾಕುತ್ತಾರೆ ಎಂದು ಬಿಜೆಪಿ ಭಾವಿಸುತ್ತದೆ. ಸ್ವಲ್ಪ ಸಮಯದ ನಂತರ ಪಕ್ಷದ ಭರವಸೆಗಳನ್ನು ಮರೆತುಬಿಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ.

ಬಲೋದಬಜಾರ್-ಭಟಪರಾ ಜಿಲ್ಲೆಯ ಸುಮಾಭಟ ಗ್ರಾಮದಲ್ಲಿ ಛತ್ತೀಸ್‌ಗಢ ಸರ್ಕಾರದ ರೈತ – ಕಾರ್ಮಿಕರ ಸಮಾವೇಶ ಉದ್ದೇಶಿಸಿ ಮಾತನಾಡಿದ ಖರ್ಗೆ, ಕಾಂಗ್ರೆಸ್ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಮಾಡಿದ್ದನ್ನು ಬಿಜೆಪಿ 15 ವರ್ಷಗಳಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33 ಪ್ರತಿಶತ ಸ್ಥಾನಗಳನ್ನು ಮೀಸಲಿಡುವ ಮಸೂದೆಯನ್ನು 2034 ರವರೆಗೆ ಜಾರಿಗೆ ತರಲಾಗುವುದಿಲ್ಲ. ಇದು ಬಿಜೆಪಿಯು ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನವನ್ನು ಬದಲಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಖರ್ಗೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯನ್ನು ಬೆಂಬಲಿಸಬೇಕು ಎಂದು ಹೇಳಿದರು.

‘ಮಹಿಳಾ ಮೀಸಲಾತಿ ಮಸೂದೆ ಇತ್ತೀಚೆಗಷ್ಟೇ ಅಂಗೀಕಾರವಾಗಿದ್ದು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 73 ಮತ್ತು 74ನೇ ತಿದ್ದುಪಡಿ ತಂದು ಪಂಚಾಯತ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಖಾತ್ರಿಪಡಿಸಿದ್ದರಿಂದ ಇದು ಹೊಸದೇನಲ್ಲ’ ಎಂದರು.

ಈ ಸುದ್ದಿ ಓದಿದ್ದೀರಾ? ಪೋಸ್ಟರ್‌ ವಿವಾದದ ನಂತರ ಸಸ್ಯಾಹಾರಿಗಳಿಗೆ ಪ್ರತ್ಯೇಕ ಸ್ಥಳ ಮೀಸಲಿಟ್ಟ ಬಾಂಬೆ ಐಐಟಿ: ಮತ್ತೊಂದು ವಿವಾದ

“ರಾಜೀವ್ ಗಾಂಧಿ ಅವರು ಶೇ 33 ಮೀಸಲು ತಂದಾಗ, ಬಿಜೆಪಿ ಅದನ್ನು ವಿರೋಧಿಸಿತು. ಒಂದು ಸದನದಲ್ಲಿ ನಮಗೆ ಬಹುಮತ ಸಿಕ್ಕಿತು ಆದರೆ ಇನ್ನೊಂದು ಸದನದಲ್ಲಿ ಬಿಜೆಪಿ ಅದನ್ನು ವಿರೋಧಿಸಿ ಮಸೂದೆಯನ್ನು ಸೋಲಿಸಲಾಯಿತು” ಎಂದು ಖರ್ಗೆ ಹೇಳಿದರು.

“ಅದೇ ಬಿಜೆಪಿ ಈಗ ತನ್ನ ಎದೆಯನ್ನು ಬಡಿದುಕೊಂಡು ಮಸೂದೆಯ ಮನ್ನಣೆ ತೆಗೆದುಕೊಳ್ಳುತ್ತಿದೆ. ಅವರು ಇದನ್ನು ಯಾವಾಗ ಜಾರಿಗೆ ತರುತ್ತಾರೆ? 2024 ರಲ್ಲಿ ಅದು ಆಗುವುದಿಲ್ಲ ಮತ್ತು 2029 ರಲ್ಲಿ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಂತರ ಇದನ್ನು ಜಾರಿಗೆ ತರಲಾಗುವುದು ಎಂದು ಅವರೇ ಹೇಳುತ್ತಾರೆ. ಇದರರ್ಥ ಇದನ್ನು 2034 ರಲ್ಲಿ ಜಾರಿಗೆ ತರಲಾಗುವುದು. ಬಿಜೆಪಿಯವರು ಜನರನ್ನು ದಾರಿತಪ್ಪಿಸಲು ಬಯಸುತ್ತಿದ್ದಾರೆ” ಎಂದು ಖರ್ಗೆ ತಿಳಿಸಿದರು.

2 ಕೋಟಿ ಉದ್ಯೋಗ, 15 ಲಕ್ಷ ಹಣ ಎಲ್ಲಿ?

ಪ್ರಧಾನಿ ನರೇಂದ್ರ ಮೋದಿಯವರು ಮತಕ್ಕಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಈ ಹಿಂದೆ ವರ್ಷಕ್ಕೆ 2 ಕೋಟಿ ಉದ್ಯೋಗ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಣ, ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದರು ಆದರೆ ಇವ್ಯಾವುದು ಇನ್ನೂ ಈಡೇರಿಲ್ಲ. ಬಿಜೆಪಿ ಬಡವರನ್ನು ನಾಶಪಡಿಸಿ ಶ್ರೀಮಂತರನ್ನು ಪ್ರೋತ್ಸಾಹಿಸುತ್ತಿದೆ ಎಂದು ಆರೋಪಿಸಿದ ಅವರು, ಶೇ.5ರಷ್ಟು ಜನರ ಬಳಿ ದೇಶದ ಶೇ.62ರಷ್ಟು ಆಸ್ತಿ ಇದ್ದರೆ, ಶೇ.50ರಷ್ಟು ನಾಗರಿಕರ ಆಸ್ತಿ ಕೇವಲ ಶೇ.3ರಷ್ಟಿದೆ ಎಂದರು.

“ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕೈಗೊಂಡರು. ಇದರಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಲಕ್ಷಾಂತರ ಜನರು ಅವರನ್ನು ಬೆಂಬಲಿಸಿದರು. ಬಿಜೆಪಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಅದರ ಬದಲಿಗೆ ಇನ್ನೊಂದನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ನಾನು ದಲಿತರು, ಆದಿವಾಸಿಗಳು ಮತ್ತು ಹಿಂದುಳಿದವರಿಗೆ ರಾಹುಲ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡುತ್ತೇನೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಕಾಂಗ್ರೆಸ್ ಈ ಹೋರಾಟದಲ್ಲಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ಒತ್ತಾಯಿಸಿದ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಬಡವರನ್ನು ಬೆಂಬಲಿಸಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ಬೆಂಬಲಿಸುವುದು ಜನರ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...