ದುಡಿವ ಮಹಿಳೆಯರಿಗೆ ಯಾವ ಪ್ರತಿಫಲವೂ ಸಿಗುತ್ತಿಲ್ಲ: ಪುರುಷೋತ್ತಮ ಬಿಳಿಮಲೆ

Date:

“ಭಾರತದ 7% ಜನರ ಕೈಯಲ್ಲಿ 47% ಭೂಮಿ ಇದೆ. ಉತ್ತರ ಪ್ರದೇಶ, ಬಿಹಾರ್, ಮಧ್ಯಪ್ರದೇಶ ಸೇರಿದಂತೆ ಬಹಳ ದೊಡ್ಡ ರಾಜ್ಯಗಳಲ್ಲಿ ಇನ್ನೂ ಕೂಡ ಭೂ ಮಸೂದೆ ಜಾರಿಗೆ ಬಂದಿಲ್ಲ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುಮಾರು 68% ಭೂ ಮಸೂದೆ ಜಾರಿಗೆ ಬಂದಿದೆ. ಆದರೆ, ಉಳಿದವರಿಗೆ ಏನಾಗಿದೆ ಎಂಬುದು ಪ್ರಶ್ನೆ. ಅರ್ಜಿ ಹಾಕಿದವರು ಮತ್ತು ಎಷ್ಟು ಜನಕ್ಕೆ ಭೂಮಿ ಸಿಕ್ಕಿದೆ ಎಂಬ ಬಗ್ಗೆ ಲೆಕ್ಕ ಇದೆ. ಆದರೆ, ಅರ್ಜಿ ಹಾಕುವುದಕ್ಕೆ ಬಿಡದೆ, ಊರು ಬಿಟ್ಟು ಓಡಿಸಿದರ ಬಗ್ಗೆ ಮಾಹಿತಿ ಇಲ್ಲ. ಹಾಗಾಗಿ, ಪ್ರಜಾ ಪ್ರಭುತ್ವದ ಮಾದರಿಯಲ್ಲಿ ಭೂಮಿಯ ಪುನರ್‌ ವಿತರಣೆ ಬಗ್ಗೆ ಮತ್ತೆ ಗಂಭೀರವಾದ ಹೋರಾಟ ಮಾಡಬೇಕಿದೆ” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು.

ಬೆಂಗಳೂರಿನ ಗಾಂಧಿಭವನದಲ್ಲಿ ಶೋಷಿತ ಸಮುದಾಯಗಳ ಮಂಥನಾ ಸಮಾವೇಶವನ್ನು ಪೀಠಿಕೆ ಓದುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದ ಅವರು, “2024ನೇ ಇಸವಿಯಲ್ಲಿ ಇರುವ ನಾವು ಭಾರತೀಯರು. ಇಲ್ಲಿರುವ ಶೋಷಿತರು ಅನುಭವಿಸುತ್ತಿರುವ ಬಿಕ್ಕಟ್ಟುಗಳು ಈಗ ಹಿಂದಿನಂತಿಲ್ಲ. ಹೊಸ ರೂಪವನ್ನ ಪಡೆದುಕೊಳ್ಳುತ್ತಿವೆ. ಹೊಸರೂಪವನ್ನ ಪಡೆದುಕೊಳ್ಳುತ್ತಿರುವ ಶೋಷಣೆಯ ಸ್ವರೂಪಗಳ ಬಗ್ಗೆ ಹೆಚ್ಚು ಹೆಚ್ಚು ಎಚ್ಚರದಿಂದ ಅಭ್ಯಾಸ ಮಾಡಿ, ವೈರಿಗಳ ಹುನ್ನಾರವನ್ನ ಬಯಲು ಮಾಡುತ್ತ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ. ಆದರೆ, ಹೊಸ ಶೋಷಣೆಗಳನ್ನು ಹೇಗೆ ಅರ್ಥಮಾಡಿಕೊಳ್ಳಬೇಕು ಎಂಬುದು ನಮ್ಮ ಮುಂದೆ ಇರುವ ಬಹುದೊಡ್ಡ ಸವಾಲು. ಹಾಗಾಗಿ, ಇಂತಹ ಚಿಂತನ-ಮಂಥನ ಸಮಾವೇಶಗಳು ಇನ್ನೂ ಹೆಚ್ಚು ನಡೆಯಬೇಕಿದೆ” ಎಂದರು.

“ನಮ್ಮ ದೇಶದಲ್ಲಿ 13% ಮಹಿಳೆಯರು ಮಾತ್ರ ಭೂಮಿ ಹೊಂದಿದ್ದಾರೆ. ಹಾಗಿದ್ದರೆ, ಮಹಿಳಾ ಪರ ಕಾನೂನುಗಳು ಏನಾದವು? ನಮ್ಮ ದೇಶದಲ್ಲಿ ಶೇ.73 ಮಹಿಳೆಯರು ತಮ್ಮನ್ನ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಶೇ.54 ಮಹಿಳೆಯರು ಮತ್ತು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಈ ಎರಡು ಅಂಕಿ ಅಂಶಗಳಿಂದ ದುಡಿಯುವವರಿಗೆ ದುಡಿಮೆಯ ಪ್ರತಿಫಲ ಸಿಗುವುದಿಲ್ಲ. ಸಿಗುತ್ತಿಲ್ಲ ಎಂಬುದು ಗೊತ್ತಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಪಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ವಕ್ಫ್ ವಿಚಾರ ಮುನ್ನೆಲೆಗೆ ಬಂದಿತು. ವಕ್ಫ್‌ ಬಗ್ಗೆ ಇಷ್ಟು ಧೀರ್ಘವಾಗಿ ಮಾತನಾಡುವ ನಾವು ಸುಮಾರು 57% ಶೋಷಿತರಲ್ಲಿ ಜಮೀನು ಇಲ್ಲ ಎಂಬ ಬಗ್ಗೆ ನಾವೇಕೆ ಮಾತಾಡುವುದಿಲ್ಲ. 2014ರಿಂದ ಈ ದೇಶದಲ್ಲಿ 23 ಹೆಸರುಗಳಿಂದ ಆರ್‌ಎಸ್‌ಎಸ್‌ನವರು ಕೆಲಸ ಮಾಡುತ್ತಿದ್ದಾರೆ. ಇವರು ಹೊಂದಿರುವ ಜಮೀನು ಎಷ್ಟು ಎಂಬ ಬಗ್ಗೆ ಯಾಕೆ ನಾವು ಪ್ರಶ್ನೆ ಮಾಡುವುದಿಲ್ಲ” ಎಂದು ಕೇಳಿದರು.

“ಆರ್‌ಎಸ್‌ಎಸ್‌ ಹೊಂದಿರುವ ಜಮೀನು ಬಗ್ಗೆ ನಾಗರಿಕರಾಗಿ ನಾವೆಲ್ಲರೂ ಕೇಳಲೇಬೇಕಾದ ಪ್ರಶ್ನೆ. ಈ ಹಿಂದೆ ದೇಶದಲ್ಲಿ ಜಮೀನ್ದಾರರು ಮತ್ತು ಒಕ್ಕಲಿಗರ ಮಧ್ಯೆ ಸಂಬಂಧ ಇತ್ತು. ಆದರೆ, ಈಗ ಧರ್ಮ ಮತ್ತು ಒಕ್ಕಲಿಗರ ಸಂಬಂಧ ಇದೆ. ಭಾರತದ ಅತಿ ದೊಡ್ಡ ಸಮಸ್ಯೆ ಭೂಮಿಯ ಹಂಚುವಿಕೆ. ಇದು ಹೋರಾಟದ ರೂಪದಲ್ಲಿ ಬರಬೇಕಿದೆ. ಯಾರಾದರೂ ಈ ಬಗ್ಗೆ ಮಾತೆತ್ತಿದರೆ, ಅವರನ್ನು ನಕ್ಸಲರು ಎಂದು ಅವರನ್ನು ಕೊಲ್ಲಲಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ದಕ್ಕದ ಸಚಿವ ಸ್ಥಾನ; ಶಿವಸೇನೆ ಶಾಸಕ ರಾಜೀನಾಮೆ

“1992 ನಂತರ ಬಂದ ಜಾಗತೀಕರಣ, 2008ರ ನಂತರ ಜಾರಿಗೆ ಬಂದ ಭೂಷಣ ಪಟ್ಟವರ್ಧಿ ಕಮಿಟಿ, 2022ರ ನಂತರ ಜಾರಿಗೆ ಬಂದ ಎನ್‌ಇಪಿಯಲ್ಲಿ ಸಾಮಾಜಿಕ ನ್ಯಾಯ ಎನ್ನುವುದು ಸಂಪೂರ್ಣ ಅಪ್ರಸ್ತುತವಾಗಿದೆ. ಹಾಗಾಗಿ, ನಮ್ಮ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯ ತರುವ ಬಗೆ ಹೇಗೆ? ಶೋಷಿತ ಸಮುದಾಯ ಶಿಕ್ಷಣ ಕ್ರಮದಿಂದ ಸಂಪೂರ್ಣ ದೂರವಾಗಿದೆ. ಇದಕ್ಕೆ ಪೂರಕವಾಗಿರುವುದು ಇನ್ನೊಂದು ಮೀಸಲಾತಿ ಸಮಸ್ಯೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...