ನಾಚಿಕೆ ಇಲ್ಲದ ಮೋದಿ ಸರ್ಕಾರಕ್ಕೆ ಕುಸ್ತಿಪಟು ಸಾಕ್ಷಿ ಮಲಿಕ್ ಕಣ್ಣೀರೇ ಸಾಕ್ಷಿ: ರಣದೀಪ್ ಸಿಂಗ್ ಸುರ್ಜೇವಾಲ

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಫೆಡರೇಷನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ, ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್, ತಾವು ಕುಸ್ತಿ ಕ್ರೀಡೆಯನ್ನು ತ್ಯಜಿಸುವುದಾಗಿ ಘೋಷಿಸಿ, ಕಣ್ಣೀರು ಹಾಕಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೇವಾಲ, “ಸಾಕ್ಷಿ ಮಲಿಕ್ ನಿವೃತ್ತಿ ದೇಶದ ಕ್ರೀಡಾ ಇತಿಹಾಸದಲ್ಲಿನ ಕರಾಳ ಅಧ್ಯಾಯ. ಆಕೆಯ ಕಣ್ಣೀರು ಮೋದಿ ಸರ್ಕಾರದ ನಾಚಿಕೆಗೇಡಿತನಕ್ಕೆ ಸಾಕ್ಷಿ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಲಿಂಪಿಕ್ ಪದಕ ಗೆದ್ದ ಮೊದಲ ಮಹಿಳಾ ಕುಸ್ತಿಪಟು ಎಂಬ ಸಾಕ್ಷಿ ಮಲಿಕ್. ಆಕೆಯ ಈ ರೀತಿಯಲ್ಲಿ ಕಣ್ಣೀರು ಹಾಕಿ, ನಿವೃತ್ತಿ ಹೊಂದುವಂತೆ ಮಾಡಿರುವುದು ಭಾರತದ ಕ್ರೀಡಾ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿದೆ. ರೈತನ ಮಗಳ ಕಣ್ಣಿಂದ ಹೊರಬರುವ ಪ್ರತಿ ಕಣ್ಣೀರು ಮೋದಿ ಸರ್ಕಾರದ ನಾಚಿಕೆಗೇಡಿಗೆ ಸಾಕ್ಷಿಯಾಗಿದೆ. ಹೆಣ್ಣುಮಕ್ಕಳನ್ನು ಅಳುವಂತೆ ಮಾಡಿ, ಹಿಂಸಿಸಿ, ಮನೆಯಲ್ಲಿ ಕೂರಿಸಿಕೊಳ್ಳುವುದೇ ಬಿಜೆಪಿಯ ಘೋಷಣೆ” ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಒಲಿಂಪಿಕ್‌ನಲ್ಲಿ ಮೊದಲ ಪದಕ ಗೆದ್ದಿರುವ ಹರಿಯಾಣದ ಸಾಮಾನ್ಯ ರೈತ ಕುಟುಂಬದ ಮಗಳು ಮೋದಿ ಸರ್ಕಾರದ ಈ ನಡೆಯಿಂದ ಇಂದು ಮನೆಗೆ ಮರಳುವ ಸ್ಥಿತಿ ಬಂದಿರುವುದು ದೇಶದ ದೌರ್ಭಾಗ್ಯ. ಕುಸ್ತಿಪಟು ಹೆಣ್ಣು ಮಕ್ಕಳು ನ್ಯಾಯಕ್ಕಾಗಿ ಜಂತರ್ ಮಂತರ್‌ನಲ್ಲಿ ಕುಳಿತುಕೊಂಡರು. ಆದರೆ ಬಿಜೆಪಿ ಸರ್ಕಾರ ಅವರನ್ನು ದೆಹಲಿ ಪೊಲೀಸರ ಬೂಟುಗಳ ಮೂಲಕ ದೌರ್ಜನ್ಯವೆಸಗಿತು. ನ್ಯಾಯಕ್ಕಾಗಿ ಮಹಿಳಾ ಕುಸ್ತಿಪಟುಗಳು ಸ್ವತಃ ಪ್ರಧಾನಿ ಮೋದಿ, ಗೃಹ ಸಚಿವರು ಮತ್ತು ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದರು. ಸುಪ್ರೀಂ ಕೋರ್ಟ್‌ನ ಆದೇಶದ ನಂತರ, ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಈವರೆಗೆ ಬಂಧಿಸಲಾಗಿಲ್ಲ” ಎಂದು ದೂರಿದರು.

“ಮೋದಿ ಸರ್ಕಾರಕ್ಕೆ ದೇಶದ ಹೆಣ್ಣು ಮಕ್ಕಳು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಮೋದಿ ಸರ್ಕಾರ ಏಕೆ ಮೌನವಾಗಿದೆ? ಕುಸ್ತಿಪಟು ಹೆಣ್ಣು ಮಕ್ಕಳಿಗೆ ಆಗುತ್ತಿರುವ ಅವಮಾನದ ಬಗ್ಗೆ ದೇಶದ ಸಂಸತ್ತು ಮೌನವಾಗಿರುವುದೇಕೆ? ದೇಶದ ರಾಷ್ಟ್ರಪತಿ ಮಹಿಳೆಯೇ ಆಗಿದ್ದಾರೆ. ಈ ಬಗ್ಗೆ ಒಂದೇ ಒಂದು ಹೇಳಿಕೆ ನೀಡುತ್ತಿಲ್ಲ. ಪ್ರಧಾನಿ, ಲೋಕಸಭೆ, ರಾಜ್ಯಸಭೆ ಅಧ್ಯಕ್ಷರು, ಖ್ಯಾತ ಕ್ರೀಡಾ ಪಟುಗಳು ಏಕೆ ಮೌನವಾಗಿದ್ದಾರೆ? ಈ ಪ್ರಾಬಲ್ಯ, ಭಯ, ಬೆದರಿಕೆ ಮತ್ತು ಅನ್ಯಾಯಗಳು ಹೊಸ ಭಾರತದಲ್ಲಿ ಸಾಮಾನ್ಯ ಎಂದು ಜನರು ಊಹಿಸಬಹುದು” ಎಂದು ರಾಜ್ಯಸಭಾ ಸಂಸದ ಸುರ್ಜೇವಾಲ ತಿಳಿಸಿದ್ದಾರೆ.

”ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸರ್ಕಾರದಿಂದ ನ್ಯಾಯ ಸಿಗದ ಕಾರಣ ಕುಸ್ತಿಯನ್ನು ತೊರೆದ ಸಾಕ್ಷಿ ಮಲಿಕ್‌ ಅವರ ವೇದನೆಯನ್ನು ಓರ್ವ ಕ್ರೀಡಾಪಟುವಾಗಿ ನಾನು ಕೂಡ ಅರ್ಥ ಮಾಡಿಕೊಳ್ಳಬಲ್ಲೆ. ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳಿಗೆ ಹೀಗಾದರೆ ಸಾಮಾನ್ಯ ಜನರಿಗೆ ಏನಾಗಬಹುದು. ಸಾಕ್ಷಿ ಮಲಿಕ್ ಘಟನೆ ದೇಶದ ಕ್ರೀಡೆ ಹಾಗೂ ಕ್ರೀಡಾಪಟುಗಳ ಭವಿಷ್ಯಕ್ಕೆ ಒಂದು ಕಪ್ಪು ಚುಕ್ಕೆ” ಎಂದು ಕಾಂಗ್ರೆಸ್ ನಾಯಕ ಹಾಗೂ ಬಾಕ್ಸರ್ ಆಗಿರುವ ವಿಜೇಂದರ್ ಸಿಂಗ್ ಬೇಸರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...