ಬಿಜೆಪಿ ಶಿಸ್ತು ಸಮಿತಿಯಿಂದ ಯತ್ನಾಳ್‌ಗೆ 2ನೇ ನೋಟಿಸ್

Date:

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಶಿಸ್ತುಸಮಿತಿ ಎರಡನೇ ಬಾರಿಗೆ ಶೋಕಾಸ್ ನೋಟಿಸ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ, ಆದರೆ ಸಮಜಾಯಿಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರೀಯ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ. ತಮ್ಮ ಭರವಸೆ ತಾವೇ ಮುರಿದು ಮತ್ತೆ ಪದೇ ಪದೇ ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ಕೊಡುತ್ತಿದ್ದ ಯತ್ನಾಳ್‌ಗೆ ಇಂದು ಎರಡನೇ ಶೋಕಾಸ್ ನೋಟಿಸ್ ಕೊಟ್ಟು ಮತ್ತೆ ಸ್ಪಷ್ಟನೆ ನೀಡುವಂತೆ ತಿಳಿಸಿದ್ದಾರೆ.

ಈ ಹಿಂದೆ ನೀಡಲಾಗಿದ್ದ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ದೀರಿ. ಮುಂದಿನ ದಿನಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ. ಆದರೆ ಸಮಜಾಯಿಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ. ಪಕ್ಷ ವಿರೋಧ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ಹೀಗಾಗಿ ಈ ಬಗ್ಗೆ 72 ಗಂಟೆಗಳಲ್ಲಿ ಸ್ಪಷ್ಟನೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಇದಕ್ಕೂ ಮುನ್ನ ಕಳೆದ ವರ್ಷದ ಡಿಸೆಂಬರ್ 02 ರಂದು ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಮೊದಲ ಶೋಕಾಸ್ ನೋಟಿಸ್ ನೀಡಿತ್ತು. ಆಗ ಯತ್ನಾಳ್ ಬಹಿರಂಗ ಹೇಳಿಕೆ ಕೊಡುವುದಿಲ್ಲ ಎಂದು ಭರವಸೆ ನೀಡಿ, ಶೋಕಾಸ್ ನೋಟಿಸ್‌ಗೆ ಉತ್ತರಿಸಿದ್ದರು.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಯತ್ನಾಳ್​ ಸಿಡಿದೆದ್ದಿದ್ದು, ಬಹಿರಂಗವಾಗಿಯೇ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಟೀಕೆಗಳನ್ನು ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ ಕಳೆದ ವರ್ಷ ಡಿಸೆಂಬರ್‌ನಲ್ಲಿಯೂ ಯತ್ನಾಳ್​ಗೆ ಶಿಸ್ತುಪಾಲನಾ ಸಮಿತಿ ಮೊದಲ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು. ಆದರೆ ನೋಟಿಸ್‌ಗೆ ಯತ್ನಾಳ್​ ಉತ್ತರ ನೀಡದೆ ಖುದ್ದು ಶಿಸ್ತು ಸಮಿತಿ ಮುಂದೆ ಹಾಜರಾಗಿ ವಿವರಣೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...