ಯತ್ನಾಳ್ ಹುಚ್ಚು ನಾಯಿ ಇದ್ದಂತೆ: ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ

Date:

ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಸ್ವಪಕ್ಷದವರ ವಿರುದ್ಧವೇ ಹೇಳಿಕೆ ನೀಡುತ್ತಿರುವ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, “ಯತ್ನಾಳ್ ಹುಚ್ಚು ನಾಯಿ ಇದ್ದಂತೆ” ಎಂದು ನಿಂದಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಹೊನ್ನಾಳಿಯ ಮಾಜಿ ಶಾಸಕ, “ಯತ್ನಾಳ್‌ ಬಗ್ಗೆ  ಮಾತನಾಡುವುದಕ್ಕೂ ಅಸಹ್ಯ ಎನಿಸುತ್ತದೆ. ಆತನ ಬಗ್ಗೆ ಗೌರವವಿತ್ತು. ಇನ್ನು ಮುಂದೆ ಆ ಗೌರವ ಇರಲ್ಲ. ಆತ ಒಂದು ಹುಚ್ಚು ನಾಯಿ ಇದ್ದಂತೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತದೆ. ಆದರೆ ಆನೆಗೆ ಇರುವ ಗೌರವ ಕಡಿಮೆಯಾಗುತ್ತಾ?” ಎಂದು ಪ್ರಶ್ನಿಸಿದ ಅವರು, “ನಾಯಿಗೆ ಇರುವ ನೀಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‌ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನೀಯತ್ತು ಅನ್ನೋದೇ ಇಲ್ಲ” ಎಂದು ಏಕವಚನದಲ್ಲೇ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಜಯೇಂದ್ರ, ಯಡಿಯೂರಪ್ಪ ಅವರನ್ನು ಟೀಕೆ ಮಾಡಿದರೆ, ಮೋದಿ ಮತ್ತು ಕೇಂದ್ರದ ವರಿಷ್ಠರನ್ನು ಟೀಕೆ ಮಾಡಿದಂತೆ‌. ಯಡಿಯೂರಪ್ಪ ಆನೆ ಇದ್ದಂತೆ, ಅವರ ಬಗ್ಗೆ ಮಾತನಾಡುವವರು ಹುಚ್ಚು ನಾಯಿ. ಹುಚ್ಚು ನಾಯಿ ಬಗ್ಗೆ ಮಾತನಾಡುವುದು ಕೂಡ ಬೇಡ. ಆ ಹುಚ್ಚು ನಾಯಿ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೇನೆ” ಎಂದು ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಸಿ ಟಿ ರವಿ, ಅಶ್ವಥ್ ನಾರಾಯಣ್ ‘ಫೇಕ್ ನ್ಯೂಸ್ ಪೆಡ್ಲರ್’ಗಳು: ಸಿದ್ದರಾಮಯ್ಯ ಆಕ್ರೋಶ

“ಸೋಮಣ್ಣ ಸೋಲಿಗೆ ವಿಜಯೇಂದ್ರ ಕಾರಣ ಎಂದು ಹೇಳುತ್ತಾರೆ. ಸೋಮಣ್ಣ ಸೋಲಲು ವಿಜಯೇಂದ್ರ ಕಾರಣನಾ? ಶಿಕಾರಿಪುರದಲ್ಲಿ ಅವರನ್ನು ಸೋಲಿಸಲು ಕುತಂತ್ರ ಮಾಡಿದವರು ಇಂಥವರೇ. ಗೆದ್ದರೆ ಮಹಾನ್ ನಾಯಕನಾಗುತ್ತಾನೆ ಎಂದು ಸೋಲಿಸಲು ಕುತಂತ್ರ ಮಾಡಿದ್ದರು. 2018ರಲ್ಲಿ ಸರ್ಕಾರ ಮಾಡಿದಾಗ ಸಚಿವ ಸ್ಥಾನ ಕೊಡಲಿಲ್ಲ ಎಂದು ಯತ್ನಾಳ್ ಈ ರೀತಿ ಮಾಡುತ್ತಿದ್ದಾರೆ. ಯಾವ ಸೀನಿಯಾರಿಟಿ ಇದೆ? ಬೊಗಳೋದೆ ಸೀನಿಯಾರಿಟಿನಾ? ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಬೊಗಳೋಕೆ ಬಿಟ್ಟವರು ಯಾರು” ಎಂದು ಪ್ರಶ್ನಿಸಿದರು.

“ವಿಜಯೇಂದ್ರ, ಯಡಿಯೂರಪ್ಪ ಅವರ ವಿರುದ್ಧ ಯಾರು ಯತ್ನಾಳ್ ಅವರಿಗೆ ಬೊಗಳು ಅಂತ ಹೇಳಿದ್ದಾರೆ. ಇವರಿಗೆ ಯಾರು ಈ ರೀತಿ ಬೊಗಳು ಅಂತ ಹೇಳಿಕೊಟ್ಟಿದ್ದಾರೆ ಎಂಬುದನ್ನು ಕೂಡ ಬಹಿರಂಗವಾಗಿ ಹೇಳಲಿ” ಎಂದು ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಮುರುಗೇಶ್ ನಿರಾಣಿಯವರು ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ನಿನ್ನೆ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಯತ್ನಾಳ್, “ವಿಜಯೇಂದ್ರ ಕೆಲವೊಂದು ಕಡೆ ಬೀದಿನಾಯಿ, ಹಂದಿಗಳನ್ನು ಬಿಟ್ಟಿದ್ದಾರೆ. ಅಂತಹ ಬೀದಿ ನಾಯಿಗಳ ಬಗ್ಗೆ ನಾನು ಉತ್ತರ ಕೊಡಲ್ಲ. ಹಾಗೆಯೇ ಒದರುತ್ತಾ ಇರುತ್ತದೆ. ಅವುಗಳ ಬಗ್ಗೆ ಕೇಳಬೇಡಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧವೇ ನೇರ ವಾಗ್ದಾಳಿ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...