ನಾನು ಜನರಿಗೆ ಪರಿಚಯವಾಗಲು ಯಡಿಯೂರಪ್ಪ ಕೊಟ್ಟ ಅವಕಾಶ ಕಾರಣ: ಕುಮಾರಸ್ವಾಮಿ

Date:

ಕುಮಾರಸ್ವಾಮಿ ಜನರಿಗೆ ಪರಿಚಯವಾಗಲು 2006ರಲ್ಲಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದ ಯಡಿಯೂರಪ್ಪನವರೇ ಕಾರಣ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್‍ಡಿಎ ಸಂಸದರ ಸನ್ಮಾನ, ರಾಜ್ಯದ ಕೇಂದ್ರ ಸಚಿವರ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿ, ಎರಡೂ ಪಕ್ಷಗಳ ಕಾರ್ಯಕರ್ತರ ಶ್ರಮ, ನಾಡಿನ ಜನತೆಯ ಆಶೀರ್ವಾದಕ್ಕೆ ಧನ್ಯವಾದ ತಿಳಿಸಿದರು.

“ನಾಡಿನ ಜನತೆ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಶಾಶ್ವತ ಇರಬೇಕು ಎಂದು ಬಯಸಿದ್ದರು. ಹೊಂದಾಣಿಕೆ ಮುಂದುವರಿಯಬೇಕೆಂಬುದು ನನ್ನ ಸ್ವಂತ ಇಚ್ಛೆ ಕೂಡ ಆಗಿತ್ತು. ಅಂದು ಯಡಿಯೂರಪ್ಪ ಅವರಿಗೆ ಅಧಿಕಾರ ಕೊಡಲು ಆಗದ್ದು ನನ್ನಿಂದಾದ ತಪ್ಪು ಅಲ್ಲ. ಕೆಲವರು ಕುತಂತ್ರ ಮಾಡಿದ ಕಾರಣಕ್ಕೆ ಆ ರೀತಿ ಆಯಿತು. ಆಗ ನಮ್ಮಿಂದ ಆದ ತಪ್ಪಿನಿಂದ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಉಳಿದುಕೊಂಡಿದೆ. ಅಂದು ನಡೆದ ಘಟನೆಗಳು ಕೆಟ್ಟ ಘಟನೆಗಳು, ಕೆಟ್ಟ ಕನಸುಗಳು. ಬೇರೆ ಬೇರೆ ಸಮಸ್ಯೆಗಳು ಬಂದಿದ್ದರೂ ನಮ್ಮಲ್ಲಿ ಹೊಂದಾಣಿಕೆಯಲ್ಲಿ ಏನೂ ಸಮಸ್ಯೆ ಇರಲಿಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಡಿಎಸ್- ಬಿಜೆಪಿ ಮೈತ್ರಿ ಅತ್ಯಂತ ಸಹಜವಾದುದು. ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಹೊಂದಾಣಿಕೆಯನ್ನು ಮುಕ್ತ ಮನಸ್ಸಿನಿಂದ ಒಪ್ಪಿ ಆಶೀರ್ವಾದ ಮಾಡಿದ್ದಾರೆ. ವಿಶ್ವದಲ್ಲೇ ಮೋದಿಯವರ ಬಗ್ಗೆ ಅತ್ಯಂತ ಗೌರವ- ವಿಶ್ವಾಸದ ಭಾವನೆ ಇದೆ” ಎಂದರು.

“ಸಚಿವ ಸೋಮಣ್ಣ ಅವರ ಇಲಾಖೆಯಲ್ಲಿ ರಾಜ್ಯಕ್ಕೆ ದೊಡ್ಡ ಮಟ್ಟದ ಅಭಿವೃದ್ಧಿ ತರಲು ಅವಕಾಶವಿದೆ. ಯಾವುದೇ ಸಣ್ಣಪುಟ್ಟ ಘರ್ಷಣೆಗಳು ಸ್ಥಳೀಯವಾಗಿ ಇದ್ದರೂ ಅಸೂಯೆ ಮನೋಭಾವ ಇಲ್ಲದೇ ಎರಡೂ ಪಕ್ಷಗಳ ಕಾರ್ಯಕರ್ತರು ಕೆಲಸ ಮಾಡಬೇಕು. ಬಿಬಿಎಂಪಿ, ಮೈಸೂರು ಮಹಾನಗರ ಪಾಲಿಕೆ, ಜಿಪಂ., ತಾ.ಪಂ ಚುನಾವಣೆಗಳು ನಮ್ಮ ಮುಂದೆ ಇವೆ. ಕಾಂಗ್ರೆಸ್ ವಿರುದ್ಧ ನಾವು ಜೊತೆಗೂಡಿ ಹೋರಾಟ ಮುಂದುವರಿಸಬೇಕು” ಎಂದು ಕರೆ ನೀಡಿದರು.

“ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಅಂತಾ ಕರ್ನಾಟಕದ ಸಿದ್ಧರು ಸಂದೇಶ ಕೊಟ್ಟಿದ್ದಾರೆ. ಹಿಂದೆ ಯಡಿಯೂರಪ್ಪ ಮತ್ತು ನಾನು ಮಾಡಿದ ರೀತಿಯ ಸರ್ಕಾರ ಮತ್ತೆ ರಾಜ್ಯದಲ್ಲಿ ತರಬೇಕು. ನಮ್ಮಲ್ಲಿ ಒಡಕು ತರುವ ಪ್ರಯತ್ನ ಆಗಬಹುದು. ಭಿನ್ನಾಭಿಪ್ರಾಯ, ಸಂಶಯ ಮೂಡಿಸಲು ಮಾಡುವ ಪ್ರಯತ್ನಕ್ಕೆ ಕಿವಿಗೊಡಬಾರದು” ಎಂದು ಅವರು ಕಾರ್ಯಕರ್ತರು, ನಾಯಕರಿಗೆ ಕಿವಿಮಾತು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...