ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ ಯತ್ನಾಳ್‌

Date:

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ.
ಬಿ ಎಸ್​ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಿಡಿಕಾರಿದರು.

ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ವಿಜಯಪುರ ನಗರದಲ್ಲಿ ವಾಜಪೇಯಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಯತ್ನಾಳ್, “ಯಡಿಯೂರಪ್ಪ ಅವರು ಏನು ಹೇಳುತ್ತಾರೆ ಅದು ಉಲ್ಟಾ ನಡೆದಿರುತ್ತದೆ. ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು. ಬಸನಗೌಡ ಪಾಟೀಲ್​ ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್​ನಲ್ಲಿ ಎಲ್ಲಾ ಪ್ಯಾಕ್ ಮಾಡಿಕೊಂಡು ಬಂದಿದ್ದರು” ಎಂದು ಕುಟುಕಿದರು.

ರೈತರ ಬರಗಾಲ ಬಯಸುತ್ತಾರೆಂದು ಸಚಿವ ಶಿವಾನಂದ ಪಾಟೀಲ್‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಇದು ದುರ್ದೈವ, ಯಾಕಂದರೆ ಶಿವಾನಂದ ಪಾಟೀಲ್‌ ಈ ಹಿಂದೆ ರೈತರ ಆತ್ಮಹತ್ಯೆ ಬಗ್ಗೆನೂ ಮಾತನಾಡಿದ್ದರು. ಇವತ್ತು ಬರಗಾಲವನ್ನು ರೈತರು ಬಯಸುತ್ತಾರೆ ಅಂತ ಹೇಳಿದ್ದಾರೆ. ಇದನ್ನು ಯಾವ ರೀತಿ ಖಂಡನೆ ಮಾಡಬೇಕು ಗೊತ್ತಾಗುತ್ತಿಲ್ಲ. ಒಬ್ಬ ಜವಾಬ್ದಾರಿಯುತ ಮಂತ್ರಿಗಳು, ಅದರಲ್ಲಿಯೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರು ರೈತರ ಬಗ್ಗೆ ಇಷ್ಟು ಹಗುರವಾಗಿ ಮಾತನಾಡಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರನೇ ಟಿಪ್ಪು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿಕೆ ವಿಚಾರವಾಗಿ ”ನಾನು ಮೂರನೇ ಟಿಪ್ಪು ಆದರೆ ಎಂ ಬಿ ಪಾಟೀಲ್ ನಾಲ್ಕನೇ ಟಿಪ್ಪು ಸುಲ್ತಾನ್” ಎಂದು ತಿರುಗೇಟು ಕೊಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಹಿಜಾಬ್ ಆದೇಶ ವಾಪಸ್ ವಿಚಾರವಾಹಿ ಮಾತನಾಡಿ, “ಇದೇ ರೀತಿ ಡ್ರೆಸ್ ಇರಬೇಕು ಎಂದು ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಎಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಇಡೀ ದೇಶದಲ್ಲಿ ಎಲ್ಲಿಯೂ ಈ ವಿಷಯ ಇಲ್ಲ, ಕರ್ನಾಟಕದಲ್ಲಿ ಯಾಕೆ? ಇದು ಇವರೇ ತೆಗೆದಿದ್ದು, ಈ ವಿಚಾರ ಕಾಂಗ್ರೆಸ್​ಗೆ ಲೋಕಸಭೆಯಲ್ಲಿ ನಿಶ್ಚಿತವಾಗಿ ಮುಳುವಾಗುತ್ತದೆ” ಎಂದು ಹೇಳಿದರು.

“ಪ್ರಧಾನಿ‌ ಮೋದಿ ಅವರು 2024ರ ಚುನಾವಣೆ ಒಳಗೆ ಅಥವಾ ಚುನಾವಣೆ ಬಳಿಕ ಸಮಾನ ನಾಗರಿಕತೆಯನ್ನು ಜಾರಿಗೆ ತರಬಹುದು. ನಮ್ಮ ದೇಶದಲ್ಲಿ ಸಮಾನ ನಾಗರಿಕತೆ ತರಬೇಕು ಎಂದು ಸುಪ್ರೀಂ ಕೋರ್ಟ್ ಸಹ ಸಲಹೆ ಕೊಟ್ಟಿದೆ. ಎಲ್ಲರಿಗೂ ಅನುಕೂಲವಾಗುವಂತಹ ಸಮಾನ ನಾಗರಿಕತೆ ಭಾರತದಲ್ಲಿ ಕೆಲವೇ ದಿನಗಳಲ್ಲಿ ಜಾರಿಯಾಗಲಿದೆ” ಎಂದು ಭವಿಷ್ಯ ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...