ನಿಜವಾದ ಬದಲಾವಣೆ ಮಾಡುವವರು ನೀವು: ಮೊದಲ ಬಾರಿ ಮತದಾನ ಮಾಡುವವರಿಗೆ ಖರ್ಗೆ ಸಂದೇಶ

Date:

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. “ನಿಜವಾದ ಬದಲಾವಣೆ ಮಾಡುವವರು ನೀವು” ಎಂದು ಹೊಸ ಮತದಾರರಿಗೆ ಖರ್ಗೆ ತಿಳಿಸಿದ್ದಾರೆ.

ಹಾಗೆಯೇ ಬಿಜೆಪಿಯ ಯಾವುದೇ ‘ದಿಕ್ಕು ತಪ್ಪಿಸುವ ತಂತ್ರ’ಗಳಿಗೆ ಮತದಾರರು ಬೀಳಬೇಡಿ. ಇದು ಸರ್ವಾಧಿಕಾರದ ಹಿಡಿತದಿಂದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಚುನಾವಣೆಯಾಗಿದೆ ಎಂದು ಖರ್ಗೆ ಅಭಿಪ್ರಾಯಿಸಿದ್ದಾರೆ.


ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ ಅವರು, ‘ನಾವು, ಭಾರತೀಯರು’ (We, the people of India) ಎಂಬ ಭಾರತದ ಸಂವಿಧಾನದ ಈ ಆತ್ಮವು ನೀವು ಮತದಾನದ ಗುಂಡಿಯನ್ನು ಒತ್ತುವ ಮೊದಲು ನಿಮ್ಮ ಹೃದಯ ಮತ್ತು ಮನಸ್ಸಿನಲ್ಲಿ ಪ್ರತಿಧ್ವನಿಸಬೇಕು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಸಾಮಾನ್ಯ ಚುನಾವಣೆಯಲ್ಲ ಎಂಬುದನ್ನು ಮರೆಯಬೇಡಿ. ಇದು ಸರ್ವಾಧಿಕಾರದ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಚುನಾವಣೆಯಾಗಿದೆ” ಎಂದಿರುವ ಖರ್ಗೆ, “13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 89 ಕ್ಷೇತ್ರಗಳಿಂದ ನನ್ನ ಎಲ್ಲಾ ಆತ್ಮೀಯ ನಾಗರಿಕರೇ, ಯಾವುದೇ ದಿಕ್ಕು ತಪ್ಪಿಸುವ ತಂತ್ರಗಳು ಮತ್ತು ಸುಳ್ಳುಗಳಿಗೆ ಮಣಿಯಬೇಡಿ” ಎಂದು ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

“ನಿಮ್ಮ ಮತ ಎಂದಿಗೂ ಅಮೂಲ್ಯ. ಯುವ ನ್ಯಾಯ, ನಾರಿ ನ್ಯಾಯ, ರೈತ ನ್ಯಾಯ, ಶ್ರಮಿಕ ನ್ಯಾಯ, ಹಿಸ್ಸೆದಾರಿ ನ್ಯಾಯವನ್ನು (ಹಿಂದುಳಿದ ವರ್ಗಗಳಿಗೆ) ತರುವ ಮೂಲಕ 140 ಕೋಟಿ ಭಾರತೀಯರ ಜೀವನವನ್ನು ಬದಲಾಯಿಸಬಹುದು” ಎಂದು ಖರ್ಗೆ ಹೇಳಿದ್ದಾರೆ.

“ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಖಾತರಿಪಡಿಸುವ ಭವಿಷ್ಯವನ್ನು ಕಲ್ಪಿಸಿಕೊಳ್ಳಿ. ಕ್ಷಿಪ್ರ ಅಂತರ್ಗತ ಬೆಳವಣಿಗೆ ಮತ್ತು ಪರಿವರ್ತಕ ನೀತಿಗಳನ್ನು ಹೊಂದಿರುವ ಭವಿಷ್ಯ ಕಲ್ಪಿಸಿಕೊಳ್ಳಿ” ಎಂದಿದ್ದಾರೆ.

ಇನ್ನು ಹೊಸ ಮತದಾರರನ್ನು ಉದ್ದೇಶಿಸಿ ಕಾಂಗ್ರೆಸ್ ಮುಖಂಡ ಖರ್ಗೆ, “ನನ್ನ ಪ್ರೀತಿಯ ಮೊದಲ ಬಾರಿಗೆ ಮತದಾನ ಮಾಡುವ ಮತದಾರರೇ ಗೊಂದಲವನ್ನು ನಿವಾರಿಸಿ ಮತ್ತು ಗದ್ದಲವನ್ನು ದೂರಮಾಡಿ. ಏಕೆಂದರೆ ನೀವು ನಿಜವಾದ ಬದಲಾವಣೆ ಮಾಡುವವರು. ಪ್ರಜಾಪ್ರಭುತ್ವಕ್ಕಾಗಿ ನಡೆಯುವ ಈ ಆಂದೋಲನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬರನ್ನು ನಾನು ಸ್ವಾಗತಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...