ಪ್ರಧಾನಿಗಳೇ, ನಿಮ್ಮನ್ನು’ಇಂಡಿಯಾ’ನೇ ಹೊರಹಾಕುತ್ತೆ: ಧರಣಿಯಿಂದ ಹೊರಹಾಕಿದ್ದಕ್ಕೆ ಮಹುವಾ ಆಕ್ರೋಶ

Date:

  • ಧರಣಿ ಕುಳಿತಿದ್ದ ಟಿಎಂಸಿ ಸಂಸದೆಯನ್ನು ಕೃಷಿಭವನದಿಂದ ಹೊರಹಾಕಿದ ಮಹಿಳಾ ಪೊಲೀಸರು
  • ಮೂರು ಗಂಟೆ ಕಾಯಿಸಿ ಸಂದರ್ಶನಕ್ಕೆ ನಿರಾಕರಿಸಿದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ; ಆರೋಪ

ಪಶ್ಚಿಮ ಬಂಗಾಳದ ಸಾವಿರಾರು ಕೋಟಿ ಮನ್‌ರೇಗಾದ ಹಣವನ್ನು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸುವಂತೆ ಕೋರಿ ಟಿಎಂಸಿ ನಾಯಕರ ನಿಯೋಗವು ಮಂಗಳವಾರ ಕೇಂದ್ರ ಗ್ರಾಮೀಣ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರನ್ನು ಭೇಟಿಯಾಗಲು ಅವಕಾಶ ಕೋರಿ ಸಮಯ ನಿಗದಿ ಮಾಡಿಕೊಂಡಿತ್ತು. ಆರು ಗಂಟೆಗೆ ಭೇಟಿ ಎಂದು ಸಮಯ ನಿಗದಿ ಆಗಿದ್ದರೂ, ಸಂಜೆ 7.30ರ ಸುಮಾರಿಗೆ ಇಂದು ಭೇಟಿಯಾಗಲು ಸಾಧ್ಯವಿಲ್ಲ ಎಂದಿದ್ದರು.

ಹೀಗಾಗಿ ನಿಯೋಗದಲ್ಲಿದ್ದ ಸದಸ್ಯರು ಕೃಷಿಭವನದಲ್ಲೇ ಧರಣಿ ಕುಳಿತರು. ಆಗ ದೆಹಲಿ ಪೊಲೀಸರು ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಹಲವು ಸಂಸದರನ್ನು ಕೃಷಿ ಭವನದಿಂದ ಎಳೆದು ಹೊರಹಾಕಿರುವ ಘಟನೆ ನಡೆದಿದೆ.

ಈ ಹಿನ್ನೆಲೆಯಲ್ಲಿ ಹೊರಹಾಕಿದ ಘಟನೆಯ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೊಯಿತ್ರಾ, “ಪ್ರಧಾನಮಂತ್ರಿಯವರೇ ಕೇಳಿ, ಇಂದು ನೀವು ನಮ್ಮನ್ನು ಎಳೆದು ಹೊರಹಾಕಬಹುದು, ಆದರೆ ನಿಮ್ಮನ್ನು ಇಂಡಿಯಾನೇ ಹೊರಹಾಕುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರದ ಸಚಿವರ ಸಂದರ್ಶನಕ್ಕೆ ‘ಅಪಾಯಿಂಟ್​ಮೆಂಟ್’ ಪಡೆದ ಬಳಿಕವೂ ಜಗತ್ತಿನಲ್ಲೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿನ ಸಂಸದರನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ಮೂರು ಗಂಟೆ ಕಾಯಿಸಿ ಸಂದರ್ಶನಕ್ಕೆ ನಿರಾಕರಿಸಿದ್ದಾರೆ ಎಂದು ಆಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಪ್ರಧಾನಿ ಮತ್ತು ಗೃಹ ಸಚಿವರ ಹೆಸರನ್ನು ಉಲ್ಲೇಖಿಸಿ ಶೇಮ್ ಶೇಮ್ ಎಂದು ಕೂಗಿದ್ದಾರೆ.

ಪ್ರಧಾನಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮೊಯಿತ್ರಾ, “ನೀವು ನಮ್ಮನ್ನು ಹೊರಗೆ ಎಳೆದು ಹಾಕಬಹುದು, ಆದರೆ ಸತ್ಯ ದೂರವಾಗುವುದಿಲ್ಲ. ಪಶ್ಚಿಮ ಬಂಗಾಳಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮನರೇಗಾ ಅನುದಾನವನ್ನು ನೀವು ಕಾನೂನುಬಾಹಿರವಾಗಿ ತಡೆಹಿಡಿದಿದ್ದೀರಿ ಎಂದರು. ಜತೆಗೆ, ನಿಮ್ಮನ್ನು 2024ರಲ್ಲಿ ‘ಇಂಡಿಯಾ’ನೇ ಹೊರಹಾಕಲಿದೆ” ಎಂದು ಕೂಗಿದರು.

ಇದೇ ವೇಳೆ ಕೇಂದ್ರ ಗ್ರಾಮೀಣ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರ ವಿರುದ್ಧವೂ ಕಿಡಿಕಾರಿರುವ ಸಂಸದೆ ಮೊಯಿತ್ರಾ, “ನಮ್ಮ ನಿಯೋಗಕ್ಕೆ ಅಪಾಯಿಂಟ್‌ಮೆಂಟ್ ನೀಡಿದ್ದೀರಿ. ಬಳಿಕ ನೀವು ಎಲ್ಲ ಹೆಸರುಗಳನ್ನು ಪರಿಶೀಲಿಸಿದ್ದೀರಿ. ನಮಗೆ ಪ್ರವೇಶಿಸಲು ಅನುಮತಿಸುವ ಮೊದಲು ಪ್ರತಿಯೊಂದನ್ನು ಪರಿಶೀಲಿಸಿ, ನಮ್ಮನ್ನು ಮೂರು ಗಂಟೆಗಳ ಕಾಲ ಕಾಯುವಂತೆ ಮಾಡಿ ಮತ್ತು ಆ ನಂತರ ಹಿಂಬಾಗಿಲಿನ ಮೂಲಕ ಓಡಿಹೋಗಿದ್ದೀರಿ” ಎಂದು ದೂರಿದ್ದಾರೆ.

ಪಶ್ಚಿಮ ಬಂಗಾಳದ ಸಾವಿರಾರು ಕೋಟಿ ಮನ್‌ರೇಗಾದ ಹಣವನ್ನು ಕೇಂದ್ರ ಸರ್ಕಾರವು ಅಕ್ರಮವಾಗಿ ತಡೆ ಹಿಡಿದಿದೆ. ಹಾಗಾಗಿ ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರವು ಆಗ್ರಹಿಸಿತ್ತು. ಇದೇ ವಿಚಾರವಾಗಿ ಮಾತುಕತೆಗೆಂದು ಕೋರಿ ಟಿಎಂಸಿ ನಾಯಕರ ನಿಯೋಗವು ಮಂಗಳವಾರ ಕೇಂದ್ರ ಗ್ರಾಮೀಣ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರನ್ನು ಭೇಟಿಯಾಗಲು ಅವಕಾಶ ಕೋರಿತ್ತು. ಆರು ಗಂಟೆಗೆ ಭೇಟಿ ಎಂದು ಸಮಯ ನಿಗದಿ ಆಗಿದ್ದರೂ, ಸಂಜೆ 7.30ರ ಸುಮಾರಿಗೆ ಇಂದು(ಮಂಗಳವಾರ) ಭೇಟಿಯಾಗಲು ಸಾಧ್ಯವಿಲ್ಲ ಎಂದಿದ್ದರು. ಇದು ಟಿಎಂಸಿ ನಿಯೋಗವನ್ನು ಕೆರಳುವಂತೆ ಮಾಡಿತ್ತು. ಹೀಗಾಗಿ ನಿಯೋಗದಲ್ಲಿದ್ದ ಸದಸ್ಯರು ಕೃಷಿಭವನದಲ್ಲೇ ಧರಣಿ ಕುಳಿತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...