ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ

Date:

ರಾಜಧಾನಿ ಬೆಂಗಳೂರಿನಲ್ಲೂ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲಿ ಭಯಾನಕ ಹತ್ಯೆಯ ಘಟನೆ ನಡೆದಿದೆ. ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿ ಆನಂತರ ಮೃತ ದೇಹವನ್ನು 30 ಭಾಗ ತುಂಡರಿಸಿ ಫ್ರಿಡ್ಜ್‌ನಲ್ಲಿ ಇರಿಸಲಾಗಿದೆ.

ಈ ಘಟನೆ ಬೆಂಗಳೂರಿನ ಹೃದಯ ಭಾಗವಾದ ವೈಯಾಲಿಕಾವಲ್​ನ ಮುನೇಶ್ವರ ಬ್ಲಾಕ್​ನ ಮನೆಯೊಂದರ ಮೊದಲ ಮಹಡಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಮಹಾಲಕ್ಷ್ಮೀ(26) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 2ರಿಂದ ಮಹಾಲಕ್ಷ್ಮೀ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಹುತೇಕ ಅವತ್ತೇ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡನಿಂದ ದೂರವಾಗಿದ್ದ ಯುವತಿ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್‌ನಲ್ಲಿ ಕೆಲಸಕ್ಕಿದ್ದಳು ಎಂದು ತಿಳಿದುಬಂದಿದೆ. ಕಳೆದ ಐದು ತಿಂಗಳ ಹಿಂದೆ ಬಾಡಿಗೆ ಮನೆಯಲ್ಲಿ ವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕೆಯ ಸಂಪರ್ಕದಲ್ಲಿದ್ದ ಯುವಕನೋರ್ವನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಆತನೇ ಕೊಲೆ ಮಾಡಿ ಈ ಕೃತ್ಯ ಎಸಗಿರುವ ಶಂಕೆ ಕೂಡ ವ್ಯಕ್ತವಾಗಿದೆ.

ಯುವತಿ 1
ಯುವತಿ ಮಹಾಲಕ್ಷ್ಮೀ

ಘಟನೆಯ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್​ ಆಯುಕ್ತ ಸತೀಶ್, “ಮಹಿಳೆಯನ್ನು ಕೊಲೆ ಮಾಡಿ ಬಳಿಕ ಮೃತದೇಹ​ವನ್ನು ಫ್ರಿಡ್ಜ್​ನಲ್ಲಿ ಇಟ್ಟಿರುವ ಘಟನೆ ನಡೆದಿದೆ. ಇದು ಸಂಭವಿಸಿ ನಾಲ್ಕೈದು ದಿನಗಳು ಆಗಿರಬಹುದು. ಕೊಲೆಯಾಗಿರುವ ಯುವತಿಯ ಗುರುತು ಪತ್ತೆಯಾಗಿದೆ. ಹೊರರಾಜ್ಯದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ತನಿಖೆ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಮೈಕ್ರೋ ಫೈನಾನ್ಸ್‌ಗಳ ಸಾಲದ ಸುಳಿಯಲ್ಲಿ ಸಿಲುಕಿದ ಮಹಿಳೆಯರು: ಸಂಕಷ್ಟದಿಂದ ಹೊರಬರಲು ಪರದಾಟ!

ಯುವತಿ ಕಳೆದ ಮೂರು ತಿಂಗಳ ಹಿಂದಷ್ಟೇ ಈ ಮನೆಗೆ ಬಂದಿದ್ದಳು. ಇಂದು ಬೆಳಗ್ಗೆ ಆಕೆಯ ತಾಯಿ-ಸಹೋದರಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ಹತ್ಯೆ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮನೆಯಿಂದ ದುರ್ನಾತ

ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅದೇ ಬಿಲ್ಡಿಂಗ್​ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...