ಜಾತಿಗಣತಿ ವರದಿ ವಿರೋಧಿಸುತ್ತಿರುವ ಜಾತಿವಾದಿ ಲಿಂಗಾಯತರು

Date:

ಇದೇ ರೀತಿ ಹಿಂದುಳಿದ ವರ್ಗಗಳ ಶೈಕ್ಷಣಿಕ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ 1953ರಲ್ಲಿ ಕಾಕಾ ಕಾಲೇಲ್ಕರ್ ಸಮಿತಿ, 1960ರಲ್ಲಿ ನಾಗನಗೌಡ ಆಯೋಗ, 1984ರಲ್ಲಿ ಪಿ. ವೆಂಕಟಸ್ವಾಮಿ ಆಯೋಗ ಮತ್ತು 1993ರಲ್ಲಿ ಚಿನ್ನಪ್ಪ ರೆಡ್ಡಿ ಆಯೋಗಗಳು ಜಾತಿ ಗಣತಿ ಮಾಡಿ ವರದಿ ನೀಡಿದರೂ ಪ್ರಬಲ ಜಾತಿವಾದಿಗಳಾದ ಬ್ರಾಹ್ಮಣರು, ಲಿಂಗಾಯತರು ಮತ್ತು ಒಕ್ಕಲಿಗರು ಇದನ್ನು ವಿರೋಧಿಸಿದ್ದರು.

12ನೇ ಶತಮಾನದಲ್ಲಿ ಬಸವಣ್ಣನವರಿಂದ ಸ್ಥಾಪಿಸಲ್ಪಟ್ಟ “ಅನುಭವ ಮಂಟಪದಲ್ಲಿ ನಾಡಿನ ಜ್ವಲಂತ ಸಮಸ್ಯೆಗಳಾದ ಮನುಸಿದ್ದಾಂತದ ಹೇರಿಕೆ, ಜಾತಿ ಭೇದ, ಲಿಂಗ ಭೇದ, ಕಂದಾಚಾರ, ಅಂಧಶ್ರದ್ದೆ ಅಸಮಾನತೆ ಕುರಿತು ಸುದೀರ್ಘ ಚರ್ಚೆಯ ನಂತರ ಬಂದ ನಿರ್ಣಯಗಳೇ ಬಸವಾದಿ ಶರಣರ ವಚನಗಳು (ಶಾಸನಗಳು) ಇವುಗಳು ಜಾತಿ ಭೇದವಿಲ್ಲದ, ವರ್ಗ ಭೇದವಿಲ್ಲದ ಮತ್ತು ಲಿಂಗಭೇದವಿಲ್ಲದ ಒಂದು ಸಮ ಸಮಾಜದ ಪರ್ಯಾಯ ಪ್ರಜಾಸತ್ತಾತ್ಮಕ ಮೌಲ್ಯಗಳುಳ್ಳ ವಚನ ಧರ್ಮ ನಿರ್ಮಾಣವೇ ಎಲ್ಲ ವಚನಕಾರರ ಗುರಿಯಾಗಿತ್ತು.

ಬಸವಣ್ಣನವರು ಪ್ರಾರಂಭಿಸಿದ ಚಳುವಳಿಯು ಅಂದಿನ ಸಮಾಜದ ದುಡಿಯುವ ವರ್ಗದವರಲ್ಲಿ, ಮಹಿಳೆಯರಲ್ಲಿ, ಅಸ್ಪೃಶ್ಯರಲ್ಲಿ ಕ್ರಾಂತಿಕಾರಕ ಬದಲಾವಣೆ ಹುಟ್ಟು ಹಾಕಿತು. ಸರ್ವರಿಗೂ ಸಮಪಾಲು ಸಮಬಾಳು ನೀಡುವ ಮೂಲಕ ಶರಣರು ಕಲ್ಯಾಣ ರಾಜ್ಯವನ್ನು ಕಟ್ಟಿದರು. ಇದನ್ನು ಸಹಿಸದ ಜಾತಿವಾದಿಗಳು, ಮತಾಂಧರು, ಯಥಾಸ್ಥಿತಿವಾದಿಗಳು ಶರಣರ ಆಶಯಗಳಿಗೆ ಕೊಡಲಿ ಪೆಟ್ಟು ಕೊಟ್ಟರು. ಬಸವಾದಿ ಶರಣರ ಉದಾತ್ ವಿಚಾರಗಳು ಅಂತರಗಂಗೆಯಾಗಿ ಹರಿಯುತ್ತಾ ‌ಮೈಸೂರು ರಾಜಸತ್ತೆಯನ್ನು ಸಹ ಪ್ರೇರೇಪಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜಾಪ್ರಭುತ್ವ ಆಡಳಿತಕ್ಕಾಗಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯ ಅವರು ಬ್ರಾಹ್ಮಣ್ಯೇತರ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆಗೆ 1918ರಲ್ಲಿ ಮಿಲ್ಲರ್ ಸಮಿತಿ ರಚಿಸಿದರು. ಮಿಲ್ಲರ್ ಆಯೋಗದ ವರದಿಯ ಅನುಷ್ಠಾನವನ್ನು ಅಂದಿನ ದಿವಾನರಾಗಿದ್ದ ವಿಶ್ವೇಶ್ವರಯ್ಯನವರು ವಿರೋಧಿಸಿ ದಿವಾನ ಹುದ್ದೆಗೆ ರಾಜೀನಾಮೆ ನೀಡಿದರು.

ಇದೇ ರೀತಿ ಹಿಂದುಳಿದ ವರ್ಗಗಳ ಶೈಕ್ಷಣಿಕ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ 1953ರಲ್ಲಿ ಕಾಕಾ ಕಾಲೇಲ್ಕರ್ ಸಮಿತಿ, 1960ರಲ್ಲಿ ನಾಗನಗೌಡ ಆಯೋಗ, 1984ರಲ್ಲಿ ಪಿ. ವೆಂಕಟಸ್ವಾಮಿ ಆಯೋಗ ಮತ್ತು 1993ರಲ್ಲಿ ಚಿನ್ನಪ್ಪ ರೆಡ್ಡಿ ಆಯೋಗಗಳು ಜಾತಿ ಗಣತಿ ಮಾಡಿ ವರದಿ ನೀಡಿದರೂ ಪ್ರಬಲ ಜಾತಿವಾದಿಗಳಾದ ಬ್ರಾಹ್ಮಣರು, ಲಿಂಗಾಯತರು ಮತ್ತು ಒಕ್ಕಲಿಗರು ಇದನ್ನು ವಿರೋಧಿಸಿದ್ದರು.

ಬಸವಣ್ಣನವರ ಅನುಯಾಯಿಗಳು ಎಂದು ಹೇಳಿಕೊಳ್ಳುವ ಲಿಂಗಾಯತರು, ಜಗತ್ತಿನಲ್ಲಿಯೇ ದುಡಿಯುವ ವರ್ಗದ ಮತ್ತು ಅಸ್ಪೃಶ್ಯರನ್ನು “ಅಪ್ಪನೂ ನಮ್ಮ ಮಾದರ ಚೆನ್ನಯ್ಯ ಬಪ್ಪನೂ ನಮ್ಮ ಡೋಹಾರ ಕಕ್ಕಯ್ಯ” ಎಂದು ಅಪ್ಪಿಕೊಂಡು, ಒಪ್ಪಿಕೊಂಡು ಪರ್ಯಾಯ ಸಮತಾ ಲಿಂಗಾಯತ ಧರ್ಮ ನೀಡಿ ಶಿಕ್ಷಣ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ವಂಚಿತರಾದ ಇವರಿಗೆ ಎಲ್ಲಾ ರೀತಿಯ ಮಾನವೀಯ ಹಕ್ಕುಗಳನ್ನು ನೀಡುವ ಮೂಲಕ ಲಿಂಗಾಯತ ಎಂಬ ಪ್ರಜಾಸತ್ತಾತ್ಮಕ ಧರ್ಮ ನೀಡಿದರು. 12ನೇ ಶತಮಾನದ ನಂತರ ಈ ಚಳವಳಿ ಮಂಕಾಗಿ ಮತ್ತೆ ಮೂರು ಶತಮಾನದ ನಂತರ ಅಂದರೆ 15ನೇ ಶತಮಾನದಲ್ಲಿ ವೀರಶೈವ ಹೊದಿಕೆಯಲ್ಲಿ ಲಿಂಗಾಯತ ಎಂಬುದು ಜಾತೀಕರಣಗೊಂಡಿತು.

1904ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ರಚನೆಗೊಂಡು ಜಾತಿ ರಾಜಕಾರಣ ಮಾಡುತ್ತಾ ತನ್ನಲ್ಲಿಯ ಕುಂಬಾರ, ಕಮ್ಮಾರ, ಹಟಗಾರ, ಮಡಿವಾಳ, ಹಡಪದ, ಸಮಗಾರ, ಜಾಡರು, ನಾಯಿಂದ, ಮಾಲಗಾರ, ಹೀಗೆ ಹತ್ತು ಹಲವಾರು ದುಡಿಯುವ ವರ್ಗದವರನ್ನು ಅಪ್ಪಿಕೊಳ್ಳದೇ ಒಪ್ಪಿಕೊಳ್ಳದೇ ದೂರ ಇಡುವ ಮೂಲಕ ಆಧುನಿಕ ಯುಗದ ಲಿಂಗಿ ಬ್ರಾಹ್ಮಣರು ಮತ್ತು ಮನುವಾದಿಗಳಾಗಿ ವರ್ತಿಸುವ ಹಿನ್ನೆಲೆಯಲ್ಲಿ ಇವರ ಜನಸಂಖ್ಯೆ 66ಲಕ್ಷಕ್ಕೆ ಬಂದು ನಿಂತಿದೆ.

ಇದನ್ನು ಯೋಚನೆ ಮಾಡದೇ ಇಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಬೊಬ್ಬೆ ಹಾಕುವುದು ಸರಿಯಲ್ಲ, ಇಂದು ಲಿಂಗಾಯತ ಸಮಾಜ ಬಸವಾದಿ ಶರಣರ ತತ್ವದ ಹಾದಿಯಲ್ಲಿ ನಡೆದಿದ್ದೇ ಆದರೆ ಕರ್ನಾಟಕದಲ್ಲಿ ನಿಮ್ಮ ಜನಸಂಖ್ಯೆ 5 ಕೋಟಿ ಆಗಿರುತ್ತಿತ್ತು.

ಇಂಥ ಸಂದರ್ಭದಲ್ಲಿ ಲಿಂಗಾಯತ ಧರ್ಮಿಯರ ಪ್ರಾತಿನಿಧಿಕ ಸಂಸ್ಥೆಯಾದ ಜಾಗತಿಕ ಲಿಂಗಾಯತ ಮಹಾಸಭಾ ಕರ್ನಾಟಕ ಈ ಜನಗಣತಿ ವಿರೋಧ ಮಾಡದೇ ಮೌನವಾಗಿರುವುದು ಒಂದು ಹೆಮ್ಮೆಯ ಲಕ್ಷಣ. ಶತ ಶತಮಾನಗಳಿಂದ ಅಭಿವೃದ್ಧಿಯಿಂದ ವಂಚಿತರಾದ ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಜಾತಿಗಣತಿ ವಿರೋಧ ಮಾಡದೇ ಬೆಂಬಲಿಸಬೇಕು.
ಇದು ಬಸವಣ್ಣನವರು ನೀಡಿದ ಜೀವ ಪರ, ಜನಪರ ಲಿಂಗಾಯತ ಧರ್ಮೀಯರ ನಿರ್ಧಾರವಾಗಬೇಕು ಇಲ್ಲದಿದ್ದರೆ ನಾವು ಬಸವಾದಿ ಶರಣರಿಗೆ ಮಾಡಿದ ದ್ರೋಹವಾಗುತ್ತದೆ.

ಇದನ್ನೂ ಓದಿ Encounter | ಬಲಾಢ್ಯರು- ಪ್ರಭಾವಿಗಳ ಒಂದೇ ಒಂದು ಎನ್‌ಕೌಂಟರ್ ಆಗಿದ್ದರೆ ತೋರಿಸಿ…

WhatsApp Image 2025 04 17 at 9.03.01 AM
ಶ್ರೀಶೈಲ ಜಿ ಮಸೂತೆ
+ posts

ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ˌ ಬೆಂಗಳೂರು.

ಪೋಸ್ಟ್ ಹಂಚಿಕೊಳ್ಳಿ:

ಶ್ರೀಶೈಲ ಜಿ ಮಸೂತೆ
ಶ್ರೀಶೈಲ ಜಿ ಮಸೂತೆ
ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ˌ ಬೆಂಗಳೂರು.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...