ನ್ಯಾಯ ಸಮಾವೇಶಕ್ಕೆ ಬರಲಿರುವ ಸುಭಾಷಿಣಿ ಅಲಿ ಯಾರು ಗೊತ್ತೇ?

Date:

ಸುಭಾಷಿಣಿ ಕರ್ನಾಟಕಕ್ಕೆ ಹೊಸಬರಲ್ಲ. ಹಾಸನ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಬಂಧನ, ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ನಡೆದ ‘ಹಾಸನ ಚಲೋ’ ಚಳವಳಿಯಲ್ಲಿಯೂ ಭಾಗವಹಿಸಿದ್ದರು. ಗುಜರಾತಿನ ಬಿಲ್ಕಿಸ್ ಬಾನೊ ಅತ್ಯಾಚಾರದ ಅಪರಾಧಿಗಳನ್ನು ಜೈಲುವಾಸದಿಂದ ಬಿಡುಗಡೆ ಮಾಡಿದ್ದರ ವಿರುದ್ಧ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ ಮೂವರು ಪ್ರಸಿದ್ಧ ಮಹಿಳಾ ನಾಯಕರಲ್ಲಿ ಒಬ್ಬರಾಗಿದ್ದರು

ಸುಭಾಷಿಣಿ ಅಲಿ ಅವರು ದೇಶದ ಅತಿ ದೊಡ್ಡ ಮಹಿಳಾ ಸಂಘಟನೆ AIDWA (All India Democratic Women’s Association) ದ ಸಕ್ರಿಯ ಕಾರ್ಯಕರ್ತರಾಗಿದ್ದು ಅದರ ಅಖಿಲ ಭಾರತ ಅಧ್ಯಕ್ಷರಾಗಿದ್ದು, ದೇಶದ ಮಹಿಳೆಯರ ಸಮಸ್ಯೆಗಳ ಆಳವಾದ ಅರಿವು ಇರುವ ಮತ್ತು ಅವುಗಳ ಪರಿಹಾರಕ್ಕೆ ಸಮರಧೀರ ಹೋರಾಟಗಳನ್ನು ಸಂಘಟಿಸಿದವರು. ಅವರು CPI(M) (ಭಾರತ ಕಮ್ಯುನಿಸ್ಟ್ ಪಕ್ಷ – ಮಾರ್ಕ್ಸ್ ವಾದಿ) ನ ಹಿರಿಯ ನಾಯಕರಲ್ಲೊಬ್ಬರು. ಅವರು ದೀರ್ಘಕಾಲ ಪಕ್ಷದ ಕೇಂದ್ರ ಸಮಿತಿ ಸದಸ್ಯರು ಮತ್ತು ಎರಡನೆಯ ಮಹಿಳಾ ಪಾಲಿಟ್ ಬ್ಯುರೋ ಸದಸ್ಯರೂ ಆಗಿದ್ದರು. ಕಾನಪುರ ಕ್ಷೇತ್ರದಿಂದ 1989ರ ಚುನಾವಣೆಯಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯೂ ಆಗಿದ್ದರು.

ಅವರು ಆಜಾದ್ ಹಿಂದ್ ಫೌಜ್ ನಲ್ಲಿ ಸೇವೆ ಸಲ್ಲಿಸಿದ್ದ ಕರ್ನಲ್ ಪ್ರೇಮ್ ಸೆಹಗಲ್ ಮತ್ತು ಕ್ಯಾಪ್ಟನ್ ಲಕ್ಷ್ಮಿ ಸೆಹಗಲ್ ಅವರ ಪುತ್ರಿ. ಮದ್ರಾಸ್, ಯುಎಸ್ ಮತ್ತು ಕಾನಪುರದಲ್ಲಿ ಕಾಲೇಜು ವಿದ್ಯಾಭ್ಯಾಸ ಮುಗಿಸಿದ ಸುಭಾಷಿಣಿ ಯುಎಸ್ ನಲ್ಲಿ ಓದುತ್ತಿದ್ದಾಗ 1960ರ ದಶಕದ ಕೊನೆಯ ಅವಧಿಯಲ್ಲಿ ಅಲ್ಲಿ ಭುಗಿಲೆದ್ದ ವಿಯೆಟ್ನಾಂ ಯುದ್ಧ-ವಿರೋಧಿ ಚಳವಳಿಯ ಸಮರಶೀಲ ವಿಭಾಗದಿಂದ ಪ್ರಭಾವಿತರಾಗಿ ಮಾರ್ಕ್ಸ್ ವಾದದತ್ತ ಅಕರ್ಷಿತರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯು.ಎಸ್ ನಿಂದ ಬಂದ ಕೂಡಲೇ ಅಕಾಡೆಮಿಕ್ ಅಥವಾ ಉದ್ಯೋಗದ ಹಾದಿಯನ್ನು ನಿರಾಕರಿಸಿ, ಕಮ್ಯುನಿಸ್ಟ್ ಚಳವಳಿಯ ಸಕ್ರಿಯ ಸದಸ್ಯರಾಗಲು ಬಯಸಿದರು. 1969ರಲ್ಲಿ ಸಿಪಿಐ(ಎಂ) ಸದಸ್ಯರು ಮತ್ತು ಸಕ್ರಿಯ ಕಾರ್ಯಕರ್ತರಾದರು. ಅವರು ಹಲವು ವರ್ಷಗಳ ಕಾಲ ಕಾನಪುರದಲ್ಲೇ ಟ್ರೇಡ್ ಯೂನಿಯನ್ ಕಾರ್ಯಕರ್ತರೂ ನಾಯಕರೂ ಆಗಿದ್ದರು. ಮುಂದೆ ಪಕ್ಷದ ಮತ್ತು ಮಹಿಳಾ ಚಳವಳಿಯ ಉತ್ತರ ಪ್ರದೇಶ ರಾಜ್ಯ ಮತ್ತು ಅಖಿಲ ಭಾರತ ನಾಯಕರೂ ಆಗಿ ಬೆಳೆದರು.

ಮಹಿಳಾ ಸಮಸ್ಯೆಗಳ ಹೋರಾಟದಲ್ಲಿ ಮುಂಚೂಣಿಯ ಪಾತ್ರ ವಹಿಸುತ್ತಿದ್ದ ಅವರು ಇತ್ತೀಚೆಗೆ ಗುಜರಾತಿನ ಬಿಲ್ಕಿಸ್ ಬಾನೊ ಅತ್ಯಾಚಾರದ ಹೇಯ ಪ್ರಕರಣದಲ್ಲಿ ಅಪರಾಧಿಗಳನ್ನು ಜೈಲುವಾಸದಿಂದ ಬಿಡುಗಡೆ ಮಾಡಿದ್ದರ ವಿರುದ್ಧ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ಅದನ್ನು ರದ್ದುಪಡಿಸಿದ ಮೂವರು ಪ್ರಸಿದ್ಧ ಮಹಿಳಾ ನಾಯಕರಲ್ಲಿ ಒಬ್ಬರಾಗಿದ್ದರು. ಸುಭಾಷಿಣಿ ಕರ್ನಾಟಕಕ್ಕೆ ಹೊಸಬರಲ್ಲ. ಇತ್ತೀಚೆಗಿನ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಚಳವಳಿಗಳಲ್ಲಿ ನಾಯಕತ್ವ ನೀಡಿ ಭಾಗವಹಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಂಧನ, ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ನಡೆದ ‘ಹಾಸನ ಚಲೋ’ ಚಳವಳಿಯ ನಾಯಕತ್ವ ವಹಿಸಿದ್ದರು.

ಅವರು ಉತ್ತಮ ಲೇಖಕರೂ, ಕಲಾವಿದರೂ ಆಗಿದ್ದಾರೆ. ಅವರ ಆಗಿನ ಪತಿ ಮುಜಫ್ಫರ್ ಅಲಿ ನಿರ್ದೇಶಿಸಿದ್ದ ಪ್ರಸಿದ್ಧ ಚಿತ್ರ ‘ಉಮರಾವ್ ಜಾನ್’ ಗೆ ವಸ್ತ್ರವಿನ್ಯಾಸ ಮಾಡಿದ್ದರು. ‘ಅಶೋಕ’ ಮತ್ತು ‘ಅಮು’ ಸಿನಿಮಾಗಳಲ್ಲಿ ನಟಿಸಿದ್ದರು ಕೂಡಾ. ಅವರ ಮಗ ಶಾದ್ ಅಲಿ ಸಹ ಸಿನಿಮಾ ನಿರ್ದೇಶಕರಾಗಿದ್ದಾರೆ.

WhatsApp Image 2025 11 17 at 5.19.55 PM
ವಸಂತರಾಜ್ ‌ಎನ್.ಕೆ.
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...