Exclusive: ಯುವತಿಯ ಅಪಹರಣ- ಪ್ರತ್ಯಕ್ಷ ಸಾಕ್ಷಿಯಿಂದ ಎಸ್‌ಐಟಿಗೆ ದೂರು; ಅಲ್ಲಿದ್ದ ಆ ವ್ಯಕ್ತಿ ಯಾರು ಗೊತ್ತೇ?

Date:

ಸೌಜನ್ಯ ಕುಟುಂಬದವರು ಹೇಳುತ್ತಿರುವ ಮೂವರು ಆರೋಪಿತರಲ್ಲಿ ಒಬ್ಬನ ಮಾತು ಕೇಳುತ್ತಿದ್ದಂತೆ ಹನ್ನೊಂದು ವರ್ಷಗಳ ಹಿಂದೆ ಪ್ರಕೃತಿ ಚಿಕಿತ್ಸಾಲಯದ ಗೇಟಿನ ಬಳಿ ಸಿಕ್ಕಿ ಎಚ್ಚರಿಸಿದ್ದ ವ್ಯಕ್ತಿಯ ನೆನಪು ಬಂದಿದೆ. ತಡವರಿಸಿ ಮಾತನಾಡುವ ಆ ವ್ಯಕ್ತಿ ಧರ್ಮಸ್ಥಳದ ಆಟೋ ಡ್ರೈವರ್‌. ಆತ ಎಚ್ಚರಿಸಿದ ಕೆಲ ನಿಮಿಷಗಳಲ್ಲಿ ಅಲ್ಲಿ ನಡೆದು ಹೋಗುತ್ತಿದ್ದ ಯುವತಿಯನ್ನು ಬಲವಂತವಾಗಿ ಕಾರಿಗೆ ಎತ್ತಿ ಹಾಕಿದ್ದು, ಆಗ ಆಕೆಯ ಬ್ಯಾಗ್‌, ಕೊಡೆ ಬಿದ್ದ ದೃಶ್ಯ ಕಣ್ಣ ಮುಂದೆ ಬಂದಿದೆ…

2012ರಲ್ಲಿ ಧರ್ಮಸ್ಥಳದ ಮಂಜುನಾಥೇಶ್ವರ ಕಾಲೇಜಿನಿಂದ ಸಂಜೆ ನಾಲ್ಕೂವರೆಯ ಸುಮಾರಿಗೆ ಮನೆಗೆ ವಾಪಸ್ಸಾಗುತ್ತಿದ್ದಾಗ, ನೇತ್ರಾವತಿ ಸ್ನಾನಘಟ್ಟದ ಬಳಿ ಬಸ್‌ನಿಂದ ಇಳಿದು ಪ್ರಕೃತಿ ಚಿಕಿತ್ಸಾ ಕೇಂದ್ರದ ಮುಂದೆ ಕಣ್ಣಳತೆ ದೂರದಲ್ಲಿ ಮನೆ ಕಡೆಯ ರಸ್ತೆ ತಿರುವಿನಲ್ಲಿ ಹೆಜ್ಜೆ ಹಾಕುತ್ತಿದ್ದಾಗ ಸೌಜನ್ಯಳನ್ನು ಅಪಹರಿಸಿದ್ದನ್ನು ನೋಡಿದವರು ಯಾರಾದರೂ ಇದ್ದಾರಾ? ಈ ಪ್ರಶ್ನೆ ಇಷ್ಟು ವರ್ಷಗಳಿಂದ ಕಾಡುತ್ತಲೇ ಇತ್ತು. ಯಾಕೆಂದರೆ ಆಕೆ ಸ್ನಾನಘಟ್ಟದ ಬಳಿ ಇಳಿದು ಮನೆ ಕಡೆಗೆ ಹೋಗುವುದನ್ನು ಜೀಪಿನಲ್ಲಿ ತನ್ನ ಅಂಗಡಿಗೆ ಹೋಗುತ್ತಿದ್ದ ಆಕೆಯ ಮಾವ ವಿಠಲ ಗೌಡ ನೋಡಿದ್ದಾರೆ. ಅದೇ ಕಡೆ, ನಂತರ ಸೌಜನ್ಯಳನ್ನು ನೋಡಿದವರಿಲ್ಲ ಎಂದೇ ಭಾವಿಸಲಾಗಿತ್ತು. ಆದರೆ, ಆ ದಿನ ಪ್ರಕೃತಿ ಚಿಕಿತ್ಸಾಲಯದ ಗೇಟಿನ ಬಳಿ ನಿಂತಿದ್ದ ಪರವೂರಿನ ಇಬ್ಬರು ದೂರದಲ್ಲಿ ಒಂದು ಹುಡುಗಿಯನ್ನು ಕಾರಿಗೆ ಬಲವಂತವಾಗಿ ಎತ್ತಿಕೊಂಡು ಹಾಕಿರುವುದನ್ನು ನೋಡಿರುವುದಾಗಿ, ಅದಕ್ಕೂ ಕೆಲವು ನಿಮಿಷಗಳ ಮುನ್ನ ಮೂತ್ರ ವಿಸರ್ಜನೆಗೆ ರಸ್ತೆಯ ಪೊದೆಯ ಕಡೆ ಹೋದಾಗ ಅಲ್ಲೊಬ್ಬ ವ್ಯಕ್ತಿ ನಿಂತಿದ್ದು, ಆತ “ಇಲ್ಲೆಲ್ಲ ಬರಬೇಡಿ”‌ ಎಂದು ಎಚ್ಚರಿಸಿದ್ದನಂತೆ. ಅದಾದ ಮೇಲೆ ಅವರು ಬಸ್‌ ಹತ್ತಿ ಹೋಗಿದ್ದಾರೆ. ಆದರೆ ಆ ಯುವತಿ ಯಾರು ಎಂಬ ಪ್ರಶ್ನೆ ಈಗ ಕುತೂಹಲಕ್ಕೆ ಕಾರಣವಾಗಿದೆ. ಸೌಜನ್ಯ ಪ್ರಕರಣಕ್ಕೂ ಈ ಘಟನೆಗೂ ಏನಾದರೂ ಲಿಂಕ್‌ ಇದೆಯೇ ಎಂಬುದು ಬಯಲಾಗಬೇಕಿದೆ.

ಆ ಪರವೂರಿನ ವ್ಯಕ್ತಿಗಳು, ತಮ್ಮ ಪಾಡಿಗೆ ತಾವು ಊರು ಸೇರಿದ್ದಾರೆ. ಅದಾಗಿ ಹನ್ನೊಂದು ವರ್ಷಗಳ ನಂತರ ಸೌಜನ್ಯ ಪ್ರಕರಣದ ಸಿಬಿಐ ತೀರ್ಪು ಬಂದಾಗ ಆಕೆಯ ಕುಟುಂಬದವರು ಬಲವಾಗಿ ಅನುಮಾನ ವ್ಯಕ್ತಪಡಿಸಿದ ಮೂವರು ವ್ಯಕ್ತಿಗಳು ಮಾಧ್ಯಮಗಳ ಮುಂದೆ ಬಂದು ತಾವು ನಿರಪರಾಧಿಗಳು ಎಂದು ಹೇಳಿಕೊಂಡಿದ್ದರು. ಆಣೆ ಪ್ರಮಾಣ ಮಾಡುವ ನಾಟಕ ಒಂದು ಕಡೆಯಾದರೆ, ಮತ್ತೊಂದು ಕಡೆ ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸೌಜನ್ಯ ೧

ದೂರುದಾರರು ಹೀಗೆ ಮನೆಯಲ್ಲಿ ಕೂತು ಟಿವಿ ನೋಡುತ್ತಿದ್ದಾಗ ಆ ಮೂವರು ಆರೋಪಿತರಲ್ಲಿ ಒಬ್ಬನ ಮಾತು ಕೇಳುತ್ತಿದ್ದಂತೆ ಹನ್ನೊಂದು ವರ್ಷಗಳ ಹಿಂದೆ ಪ್ರಕೃತಿ ಚಿಕಿತ್ಸಾಲಯದ ಗೇಟಿನ ಬಳಿ ಸಿಕ್ಕಿ ಎಚ್ಚರಿಸಿದ್ದ ವ್ಯಕ್ತಿಯ ನೆನಪು ಬಂದಿದೆ. ತಡವರಿಸಿ ಮಾತನಾಡುವ ಆ ವ್ಯಕ್ತಿ ಧರ್ಮಸ್ಥಳದ ಆಟೋ ಡ್ರೈವರ್‌. ಆ ದಿನ ಆತ ಎಚ್ಚರಿಸಿದ ಕೆಲವೇ ನಿಮಿಷಗಳಲ್ಲಿ ಅಲ್ಲಿ ನಡೆದು ಹೋಗುತ್ತಿದ್ದ ಯುವತಿಯನ್ನು ಬಲವಂತವಾಗಿ ಕಾರಿಗೆ ಎತ್ತಿ ಹಾಕಿದ್ದು, ಆಗ ಆಕೆಯ ಬ್ಯಾಗ್‌, ಕೊಡೆ ಬಿದ್ದ ದೃಶ್ಯ ಕಣ್ಣ ಮುಂದೆ ಬಂದಿದೆ. ಈ ವಿಚಾರವನ್ನು ಹೇಗಾದರೂ ಮಾಡಿ ಬಯಲು ಮಾಡಬೇಕು ಎಂಬ ಉದ್ದೇಶದಿಂದ ಸಾಕ್ಷಿಗಳು ಸೌಜನ್ಯ ಪರ ಹೋರಾಟದ ಮುಂಚೂಣಿಯಲ್ಲಿದ್ದ ಮೈಸೂರಿನ ʼಒಡನಾಡಿʼ ಸಂಸ್ಥೆಯ ಮುಖ್ಯಸ್ಥರನ್ನು ಭೇಟಿಯಾಗಿ ವಿಷಯ ತಿಳಿಸುತ್ತಾರೆ. ಸಾಕ್ಷಿಗೆ ಸಂಪೂರ್ಣ ರಕ್ಷಣೆ ನೀಡಿರುವ ಸಂಸ್ಥೆ ಸರಿಯಾದ ಸಂದರ್ಭಕ್ಕೆ ಕಾದಿತ್ತು.

ಇದೀಗ ನೂರಾರು ಅನಾಥ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಪೊಲೀಸರ ಮುಂದೆ ಬಂದಿರುವ ವ್ಯಕ್ತಿಯ ದೂರು ಆಧರಿಸಿ ಎಸ್‌ಐಟಿ ತನಿಖೆ ಶುರು ಮಾಡಿರುವುದಲ್ಲದೇ ದೂರು ನೀಡುವವರಿಗೆ ಅನುಕೂಲವಾಗುವಂತೆ ಸಹಾಯವಾಣಿ ಸ್ಥಾಪಿಸಿದೆ. ಕಳೆದ ಶುಕ್ರವಾರ ಖುದ್ದು ಸಹಾಯವಾಣಿಗೆ ದೂರು ನೀಡಿದ್ದು, ಎಸ್‌ಐಟಿ ಅಧಿಕಾರಿಗಳು ಒಡನಾಡಿ ಸ್ಟ್ಯಾನ್ಲಿ ಅವರೊಂದುಗೂ ಮಾತನಾಡಿದ್ದಾರೆ ಎಂಬ ಮಾಹಿತಿ ಈ ದಿನಕ್ಕೆ ಲಭ್ಯವಾಗಿದೆ.

ಒಡನಾಡಿ ಸ್ಟ್ಯಾನ್ಲಿ ಅವರು ಈದಿನದ ಜೊತೆಗೆ ಮಾತನಾಡಿ “ಸೌಜನ್ಯ ಪ್ರಕರಣದಲ್ಲಿ ನಂಬಲರ್ಹ ಮತ್ತು ಬಹಳ ಮಹತ್ವದ ಸಾಕ್ಷಿಯಾಗಿರುವ ಕಾರಣ ತನಿಖೆಯ ಹಾದಿಯಲ್ಲಿ ಬಳಸಿಕೊಳ್ಳುತ್ತೇವೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕೃತಿ ಚಿಕಿತ್ಸಾಲಯದ ಗೇಟಿನ ಬಳಿ ಸಣ್ಣ ಬಲ್ಬಿನ ರೀತಿಯ ಒಂದು ವಸ್ತು ಇತ್ತು ಎಂದು ಅವರು ಹೇಳಿದ್ದಾರೆ. ಅದು ಸಿಸಿಟಿವಿ ಕ್ಯಾಮೆರಾ ಇದ್ದಿರಬಹುದು. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಒಬ್ಬ ಯುವತಿಯನ್ನು ನಾಲ್ಕಾರು ವಾಹನಗಳಲ್ಲಿ ಅಡ್ಡಗಟ್ಟಿ ಹೊತ್ತೊಯ್ಯುವುದನ್ನು ಕಂಡಿರುವುದಲ್ಲದೆ ನಾವು ಅವರೊಡನೆ ಹತ್ತಿರದಿಂದ ಮಾತನಾಡಿರುತ್ತೇವೆ” ಎಂದು ಸಾಕ್ಷಿಗಳು ಹೇಳಿಕೊಂಡಿರುತ್ತಾರೆ. ಪ್ರತ್ಯಕ್ಷ ಸಾಕ್ಷಿಗಳಲ್ಲಿ ಒಬ್ಬರು ಮರಣಹೊಂದಿದ್ದಾರೆ.

ಇದೀಗ ಎಸ್‌ಐಟಿ ರಚನೆಯಾಗಿರುವುದು ಅಕ್ರಮವಾಗಿ ಹೂತ ಶವಗಳ ಸಂಬಂಧ ಎಂದು ಗೃಹಸಚಿವ ಡಾ ಪರಮೇಶ್ವರ್‌ ಹೇಳಿದರೂ, ಸೌಜನ್ಯ ಅತ್ಯಾಚಾರ- ಕೊಲೆ ರಹಸ್ಯ ಬಯಲು ಮಾಡುವುದು ಸರ್ಕಾರದ ಕರ್ತವ್ಯ. ಪ್ರಭಾವಿಗಳ ಒತ್ತಡಕ್ಕಿಂತ ಜನರ ಒತ್ತಡಕ್ಕೆ ಸರ್ಕಾರ ಮಣಿಯಬೇಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹಳ ಮುಖ್ಯ.

ಇದನ್ನೂ ಓದಿ ಧರ್ಮಸ್ಥಳ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶರು

07e0d3e8 3f8a 4b81 8fd5 641335b91d85
ಹೇಮಾ ವೆಂಕಟ್‌
+ posts

ʼಈ ದಿನ.ಕಾಂʼನಲ್ಲಿ ಮುಖ್ಯ ವರದಿಗಾರರು.
ಉದಯವಾಣಿ, ಪ್ರಜಾವಾಣಿಯಲ್ಲಿ ವರದಿಗಾರ್ತಿಯಾಗಿ ಅನುಭವ.
ಮೂರು ಪುಸ್ತಕಗಳು ಪ್ರಕಟಗೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಹೇಮಾ ವೆಂಕಟ್‌
ಹೇಮಾ ವೆಂಕಟ್‌
ʼಈ ದಿನ.ಕಾಂʼನಲ್ಲಿ ಮುಖ್ಯ ವರದಿಗಾರರು. ಉದಯವಾಣಿ, ಪ್ರಜಾವಾಣಿಯಲ್ಲಿ ವರದಿಗಾರ್ತಿಯಾಗಿ ಅನುಭವ. ಮೂರು ಪುಸ್ತಕಗಳು ಪ್ರಕಟಗೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...