ದೇಶದ ಮೊದಲ ಲಿಫ್ಟ್ ಸೇತುವೆ ಪಂಬನ್: ಏನು ಪ್ರಯೋಜನ, ಏನಿದು ರಾಜಕಾರಣ?

Date:

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್(Stalin) ಅವರು ಪೂರ್ವ ನಿಯೋಜಿತ ಕಾರ್ಯಕ್ರಮಗಳಿದ್ದ ಕಾರಣದಿಂದಾಗಿ ಪಂಬನ್(Pamban) ಸೇತುವೆ ಉದ್ಘಾಟನೆಯಲ್ಲಿ ಭಾಗಿಯಾಗಿಲ್ಲ. ಆದರೆ ಸದಾ ರಾಜಕೀಯವನ್ನೇ ಹುಡುಕುವ ಬಿಜೆಪಿಗರು ಇದೀಗ ಪಂಬನ್ ಸೇತುವೆ ರಾಜಕೀಯಕ್ಕೆ ಇಳಿದಿದ್ದಾರೆ. ಪ್ರಧಾನಿ ಮೋದಿ(Modi) ಕೂಡಾ ಭಾಷಾ ವಿವಾದವನ್ನು ಎಳೆದು ಭಾಷಣ ಮಾಡಿದ್ದಾರೆ. 

ತಮಿಳುನಾಡಿನ ರಾಮೇಶ್ವರಂನಲ್ಲಿ ನಿರ್ಮಿಸಿರುವ ಲಂಬವಾಗಿ ತೆರೆದುಕೊಳ್ಳುವ ಪಂಬನ್ ಲಿಫ್ಟ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲೇ ರಾಮೇಶ್ವರಂ-ತಂಬರಂ (ಚೆನ್ನೈ) ರೈಲು ಸೇವೆಗೂ ಪ್ರಧಾನಿ ಚಾಲನೆ ನೀಡಿದ್ದಾರೆ. ಈ ಸೇತುವೆಯ ಬಾಳಿಕೆ ಅವಧಿ ಸುಮಾರು ನೂರು ವರ್ಷಗಳೆಂದು ಅಂದಾಜಿಸಲಾಗಿದೆ.

ಸುಮಾರು 2.2 ಕಿ.ಮೀ. ಉದ್ದದ ಈ ಸೇತುವೆ ಮಂಡಪಂ ನಗರ ಮತ್ತು ಪಂಬನ್ ದ್ವೀಪವನ್ನು ಸಂಪರ್ಕಿಸುತ್ತದೆ. ರೈಲು ಸಂಚರಿಸುವ ಸಂದರ್ಭದಲ್ಲಿ ಸೇತುವೆಯಾಗುವ ಹಾಗೂ ಹಡಗು ಸಂಚರಿಸುವ ವೇಳೆ ಲಂಬವಾಗಿ ಮೇಲಕ್ಕೇರಿ ಹಡಗಿಗೆ ದಾರಿ ಮಾಡಿಕೊಡುವ, ಅಂದರೆ ಎರಡು ರೀತಿಯಲ್ಲಿ ಕಾರ್ಯನಿರ್ವಹಿಸುವ ಸೇತುವೆ ಇದಾಗಿದೆ. ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದೆ.

ಪಂಬನ್
ರಾತ್ರಿ ವೇಳೆ ಪಂಬನ್ ಸೇತುವೆ (ಪಿಟಿಐ ಚಿತ್ರ)

ಪಂಬನ್ ಸೇತುವೆ ಇತಿಹಾಸ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡಿನ ಎರಡು ರೈಲು ನಿಲ್ದಾಣಗಳಾದ ಮಂಡಪಂ ಮತ್ತು ಪಂಬನ್ ಸುಮಾರು ಐದು ಕಿಲೋಮೀಟರ್ ಅಂತರದಲ್ಲಿವೆ. 1914ರಲ್ಲಿ ಬ್ರಿಟಿಷರು ಪಂಬನ್ ಸೇತುವೆಯನ್ನು ನಿರ್ಮಿಸಿದಂದಿನಿಂದ ಇಲ್ಲಿಗೆ ರೈಲು ಸಂಪರ್ಕವಿದೆ. ಆರಂಭದಲ್ಲಿ ಪ್ರತಿದಿನ ಒಂದೆರಡು ರೈಲುಗಳು ಸಾಗುತ್ತಿತ್ತು. ಆದರೆ ಪಂಬನ್ ಸೇತುವೆ ಹಳೆಯದಾಗಿ ರೈಲುಗಳ ಹೊರೆಯನ್ನು ಹೊರುವ ಸಾಮರ್ಥ್ಯವನ್ನು ಕಳೆದುಕೊಂಡಿತು.

ಹಳೆ ಸೇತುವೆ
ನಿರ್ಮಾಣ ಹಂತದಲ್ಲಿದ್ದ ಸೇತುವೆ (ಪಿಟಿಐ ಚಿತ್ರ)

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಮಂಡಪಂ ಭಾರತದ ಮುಖ್ಯ ಭೂಭಾಗದ ಕೊನೆಯ ರೈಲು ನಿಲ್ದಾಣವಾಗಿದ್ದರೆ, ಪಂಬನ್ ದ್ವೀಪದಲ್ಲಿರುವ ಒಂದು ಸಣ್ಣ ನಿಲ್ದಾಣ ಪಂಬನ್. ಇದು ರಾಮೇಶ್ವರಂ ರೈಲು ನಿಲ್ದಾಣಕ್ಕೆ ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. 100 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿದ್ದ ಹಳೆಯ ಪಂಬಲ್ ಸೇತುವೆಯ ನಿರಂತರ ದುರಸ್ತಿ ಮತ್ತು ನಿರ್ವಹಣೆ ನಡೆಸಲಾಗುತ್ತಿತ್ತು. 2019ರಲ್ಲಿ, ಸಮಾನಾಂತರ ಸೇತುವೆಯನ್ನು ನಿರ್ಮಿಸಲು ನಿರ್ಧರಿಸಲಾಯಿತು. ಆದರೆ ಹೊಸ ಸೇತುವೆಯನ್ನು ನಿರ್ಮಿಸುವ ಮೊದಲು, ಹಳೆಯದನ್ನು ರೈಲು ಸಾಗಾಟಕ್ಕೆ ಯೋಗ್ಯವಲ್ಲ ಎಂದು ಘೋಷಿಸಲಾಯಿತು. 2022ರ ಡಿಸೆಂಬರ್‌ನಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಎಲ್ಲಾ ರೈಲುಗಳ ಕೊನೆ ನಿಲ್ದಾಣ ಮಂಡಪಂ ನಿಲ್ದಾಣವಾಯಿತು. ಇದೀಗ ಹೊಸ ಪಂಬನ್ ಸೇತುವೆ ನಿರ್ಮಿಸಲಾಗಿದೆ.

ಮೋದಿ 20
ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ (ಪಿಟಿಐ ಚಿತ್ರ)

ಪಂಬನ್ ಲಿಫ್ಟ್ ಸೇತುವೆ ವಿಶೇಷತೆ, ಜನರಿಗೆ ಏನು ಪ್ರಯೋಜನ?

ಪಂಬನ್ ದೇಶದ ಮೊದಲ ‘ವರ್ಟಿಕಲ್ ಲಿಫ್ಟ್’ ಸೇತುವೆಯಾಗಿದೆ. ರೈಲು ಸಂಚರಿಸುವಾಗ ಸೇತುವೆಯಾಗಿ, ಹಡಗು ಸಂಚರಿಸುವಾಗ ಲಂಬವಾಗಿ ಮೇಲಕ್ಕೇರಿ ದಾರಿ ಮಾಡಿಕೊಡುವಂತಹ ಎರಡು ರೀತಿಯಲ್ಲಿ ಕಾರ್ಯನಿರ್ವಹಿಸುವ ಸೇತುವೆ ಇದಾಗಿದೆ. ಪಂಬನ್ ದ್ವೀಪ ಮತ್ತು ಮಂಡಪಂ ನಗರವನ್ನು ಸಂಪರ್ಕಿಸುವ ಸೇತುವೆ ಇದಾಗಿದೆ. ರೈಲ್ ವಿಕಾಸ್ ನಿಗಮ ಲಿಮಿಟೆಡ್ (ಆರ್‌ವಿಎನ್‌ಎಲ್) ಈ ಸೇತುವೆ ನಿರ್ಮಾಣ ಮಾಡಿದೆ.

ಈ ಸೇತುವೆಯ ಬಾಳಿಕೆ 100 ವರ್ಷ ಎಂದು ಅಂದಾಜಿಸಲಾಗಿದೆ. ಸುಮಾರು 72.5 ಮೀ. ಉದ್ದದ ವರ್ಟಿಕಲ್ ಲಿಫ್ಟ್ ಸ್ಪ್ಯಾನ್ ಒಳಗೊಂಡಿದ್ದು ಲಿಫ್ಟ್ ಸ್ಪ್ಯಾನ್ ಅನ್ನು 17 ಮೀಟರ್ ಎತ್ತರದವರೆಗೆ ತೆರೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. ಕೆಳಭಾಗದಲ್ಲಿ ಮೀನುಗಾರಿಕೆಯ ಬೃಹತ್ ದೋಣಿಗಳು, ಸರಕು ಸಾಗಣೆ ಹಡಗುಗಳು, ಕರಾವಳಿ ಕಾವಲು ಪಡೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಗುಜರಾತ್ | ಉದ್ಘಾಟನೆಗೂ ಮುನ್ನವೇ ಮುರಿದು ಬಿತ್ತು ಸೇತುವೆ

ರೈಲು 11
ಸೇತುವೆಯಲ್ಲಿ ರೈಲು ಸಂಚಾರ (ಪಿಟಿಐ ಚಿತ್ರ)

ಗಾಳಿಯ ವೇಗವನ್ನು ಅವಲಂಬಿಸಿ ಸೇತುವೆಯ ಮೇಲೆ ಹಾದುಹೋಗುವ ರೈಲುಗಳ ವೇಗವು ಹಗಲಿನಲ್ಲಿ ಬದಲಾಗಬಹುದು. ಆದರೆ ಸರಾಸರಿ, ರಾಮೇಶ್ವರಂ ಮತ್ತು ಮಂಡಪಂ ನಿಲ್ದಾಣಗಳ ನಡುವಿನ ಪ್ರಯಾಣವನ್ನು 15-20 ನಿಮಿಷಗಳಲ್ಲಿ ಪೂರ್ಣಗೊಳಿಸಬಹುದು. ಲಂಡನ್‌ನ ಟವರ್ ಸೇತುವೆಯ ಸ್ಪೂರ್ತಿಯಿಂದ ಈ ಪಂಬನ್ ಸೇತುವೆಯನ್ನು 5,800 ಮೆಟ್ರಿಕ್ ಟನ್ ಸ್ಟೈನ್‌ಲೆಸ್ ಸ್ಟೀಲ್ ಮತ್ತು ಸಿಮೆಂಟ್ ಚೀಲ ಬಳಸಿ ನಿರ್ಮಿಸಲಾಗಿದೆ.

ಹಡಗು ಸಂಚಾರ
ಸೇತುವೆ ಅಡಿಯಲ್ಲಿ ಹಡಗು ಸಂಚಾರ (ಪಿಟಿಐ ಚಿತ್ರ)

ಆರಂಭದಲ್ಲಿ, ಸೇತುವೆಯ ಅಂದಾಜು ವೆಚ್ಚ 280 ಕೋಟಿ ರೂ.ಗಳಾಗಿತ್ತು. ಬಳಿಕ 580 ಕೋಟಿ ರೂ.ಗಳಿಗೆ ಏರಿಸಲಾಗಿತ್ತು. ಅಂತಿಮವಾಗಿ 704 ಕೋಟಿ ರೂ.ಗಳಲ್ಲಿ ಸೇತುವೆ ನಿರ್ಮಾಣವಾಗಿದೆ. ಈಗಾಗಲೇ ಭಾರತೀಯ ರೈಲ್ವೆಯು ಪಂಬನ್ ಸೇತುವೆ ಮೂಲಕ ಸುಮಾರು 28 ರೈಲು ಸೇವೆಗಳನ್ನು ಘೋಷಿಸಿದೆ. ಅಯೋಧ್ಯೆ, ಚೆನ್ನೈ, ಬನಾರಸ್, ಮದುರೈ ಮೊದಲಾದ ಕಡೆ ಈ ರೈಲು ಸೇವೆ ಇರಲಿದೆ.

ಸೇತುವೆ ದೀಪ
ದೀಪದಿಂದ ಅಲಕೃಂತವಾದ ಸೇತುವೆ (ಪಿಟಿಐ ಚಿತ್ರ)

ಸ್ಟಾಲಿನ್ ಗೈರು ವಿವಾದ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಪೂರ್ವ ನಿಯೋಜಿತ ಕಾರ್ಯಕ್ರಮಗಳಿದ್ದ ಕಾರಣದಿಂದಾಗಿ ಪಂಬನ್ ಸೇತುವೆ ಉದ್ಘಾಟನೆಯಲ್ಲಿ ಭಾಗಿಯಾಗಿಲ್ಲ. ಈ ವಿಷಯವನ್ನು ಪ್ರಧಾನಮಂತ್ರಿ ಕಚೇರಿಗೂ ತಿಳಿಸಿರುವುದಾಗಿ ಹೇಳಿದ್ದಾರೆ. ಆದರೆ ಸದಾ ರಾಜಕೀಯವನ್ನೇ ಹುಡುಕುವ ಬಿಜೆಪಿಗರು ಇದೀಗ ಪಂಬನ್ ಸೇತುವೆ ರಾಜಕೀಯಕ್ಕೆ ಇಳಿದಿದ್ದಾರೆ. ಪ್ರಧಾನಿ ಕೂಡಾ ಭಾಷಾ ವಿವಾದವನ್ನು ಎಳೆದು ಭಾಷಣ ಮಾಡಿದ್ದಾರೆ. ಇವೆಲ್ಲವುದರ ನಡುವೆ ಮುಂದಿನ ಚುನಾವಣೆ ದೃಷ್ಟಿಯಿಂದ ಬಿಜೆಪಿ ಈಗ ಮತ ರಾಜಕೀಯ ನಡೆಸುತ್ತಿದೆ. ಅದಕ್ಕಾಗಿ ಈ ಸೇತುವೆ ಉದ್ಘಾಟನೆಗೆ ಪ್ರಧಾನಿ ಬಂದಿದ್ದಾರೆ ಎಂದು ತಮಿಳುನಾಡು ಸರ್ಕಾರದ ಆರೋಪವಾಗಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...