ಗಾಂಧಿ ಕನ್ನಡಕವನ್ನು ಬಳಸಿ ಗಾಂಧಿ ತತ್ವವನ್ನು ಗಾಳಿಗೆ ತೂರಿದವರು

Date:

ಗಾಂಧೀಜಿ ಸತ್ಯ, ಶಾಂತಿ, ಅಹಿಂಸೆ, ಸೌಹಾರ್ದತೆ ಎಂಬ ಶ್ರೇಷ್ಠ ತತ್ವಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟು ‘ಮಹಾತ್ಮ’ ಎಂದು ಎನಿಸಿಕೊಂಡವರು. ಆದರೆ ಇಂದು ನಮ್ಮ ದೇಶವನ್ನಾಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಅವರ ಕನ್ನಡಕವನ್ನು ‘ಸ್ವಚ್ಛ ಭಾರತ’ ಆಂದೋಲನಕ್ಕೆ ಬಳಸಿಕೊಂಡು ಅವರ ತತ್ವಗಳನ್ನು ಗಾಳಿಗೆ ತೂರಿ ಅಳಿಸಿ ಹಾಕಲು ಹೊರಟಿದ್ದಾರಾ ಎಂಬುದು ನಮ್ಮ ದೇಶದಲ್ಲಿ ನಡೆದ ಹಲವು ಘಟನೆಗಳಲ್ಲಿ ವ್ಯಕ್ತವಾಗುತ್ತಿದೆ.

2014 ಅಕ್ಟೋಬರ್‌ನಲ್ಲಿ ಆರಂಭಿಸಿದ ಸ್ವಚ್ಛ ಭಾರತ ಅಭಿಯಾನಕ್ಕೆ ಗಾಂಧೀಜಿ ಕನ್ನಡಕವನ್ನು ಲೋಗೊ ಆಗಿ ಬಳಸಿಕೊಂಡು ಅಭಿಯಾನ ಆರಂಭಿಸಿದ ಮೋದಿಯವರ ದೃಷ್ಟಿಯಲ್ಲಿ, 1982ರಲ್ಲಿ ಬಿಡುಗಡೆಯಾದ ರಿಚರ್ಡ್ ಅಟೆನ್ಬರೋ ನಿರ್ದೇಶನದ ಗಾಂಧೀಜಿ ಸಿನಿಮಾ ಬರುವ ಮೊದಲು ಗಾಂಧೀಜಿ ಜಗತ್ತಿನಲ್ಲಿ ಯಾರಿಗೂ ಗೊತ್ತಿರಲಿಲ್ಲ ಎಂಬ ಮಾತುಗಳು ಮೋದಿಯವರಿಗೆ ಗಾಂಧಿ ತತ್ವಗಳ ಬಗೆಗಿನ ವಿರುದ್ಧ ಧೋರಣೆ ಅರ್ಥವಾಗುತ್ತದೆ.

ಅಹಿಂಸೆಯು ಗಾಂಧೀಜಿಯವರ ಹೋರಾಟದ ಮೂಲ ಮಂತ್ರವಾಗಿತ್ತು. ಆದರೆ ಮೋದಿಯವರು ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ನಿಲ್ಲಿಸುವ ಪ್ರಯತ್ನವನ್ನು ಈವರೆಗೆ ಮಾಡಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮೋದಿ 18

ಗಾಂಧೀಜಿಯವರ ದೃಷ್ಟಿಯಲ್ಲಿ ಮಹಿಳೆ ಅಹಿಂಸೆಯ ಅವತಾರ, ಮಹಿಳೆಯನ್ನು ದುರ್ಬಲ ಲೈಂಗಿಕತೆ ಎಂದು ಕರೆಯುವುದು ಮಾನಹಾನಿ ಹಾಗೂ ಹೆಣ್ಣನ್ನು ಉದಾತ್ತ ಲಿಂಗ ಎಂದು ಕರೆದರು. ಆದರೆ ಮಣಿಪುರದ ನಡುರಸ್ತೆಯಲ್ಲಿ ಯುವತಿಯರ ಬಟ್ಟೆ ಬಿಚ್ಚಿ ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಬಗ್ಗೆ ಮೋದಿ ತುಟಿ ಬಿಚ್ಚಿ ಮಾತನಾಡಲಿಲ್ಲ. ಮಹಿಳಾ ಕುಸ್ತಿಪಟುಗಳ ಮೇಲೆ ಅವರದ್ದೇ ಪಕ್ಷದ ನಾಯಕ, ಬ್ರಿಜ್‌ಭೂಷನ್ ಶರಣ್‌ ಸಿಂಗ್‌ನಿಂದ ದೌರ್ಜನ್ಯವಾದಾಗ ಮೋದಿ ನಿರ್ಲಕ್ಷ್ಯ ಮಾಡಿದರು.

ಬಿಹಾರದ ಚಂಪಾರಣ್ಯ ಜಿಲ್ಲೆಯ ಹಳ್ಳಿಯೊಂದಕ್ಕೆ ಭೇಟಿ ನೀಡಿದಾಗ ಮಹಿಳೆಯೊಬ್ಬಳಿಗೆ ಕೊಳಕು ಬಟ್ಟೆ ಧರಿಸಿದ ಕಾರಣವನ್ನು ಅರಿತು ಪ್ರತಿಯೊಬ್ಬ ಬಡ ಮಹಿಳೆಗೆ ಬಟ್ಟೆಯನ್ನು ನೀಡುವಂತಾಗಬೇಕು ಎಂದು ನೂಲುವ ಕಾಯಕವನ್ನು ಗಾಂಧೀಜಿ ಕೈಗೊಂಡರು. ಆದರೆ ಮೋದಿ ಮಹಿಳೆಯರಿಗೆ ಅನ್ಯಾಯವಾದಾಗ ಅವರ 56 ಇಂಚಿನ ಎದೆಗಾರಿಕೆಯು ಅಂದು ಸದ್ದಿಲ್ಲದೆ ದುರ್ಬಲವಾಗಿತ್ತು. ‘ಬೇಟಿ ಬಚಾವೋ ಬೇಟಿ ಪಡಾವೋ’ ಘೋಷಣೆಯಾಗಿಯೇ ಉಳಿದಿದೆಯಷ್ಟೇ ಎಂಬುದು ವಾಸ್ತವ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ.

ಆಂಧ್ರ ಪ್ರದೇಶದ ಬಿಜೆಪಿ ನಾಯಕ ರಮೇಶ್ ನಾಯ್ಡು, ಗಾಂಧೀಜಿಯವರ ಪುಣ್ಯ ತಿಥಿಯಂದು ಗಾಂಧೀಜಿಯವರನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನು ದೇಶ ಭಕ್ತ ಎಂದಾಗ ಮೋದಿಯವರು ಯಾವ ಕ್ರಮ ಕೈಗೊಂಡರು. ಗಾಂಧೀಜಿಯವರ ಮೂಲ ತತ್ವಗಳಲ್ಲಿ ಸೌಹಾರ್ದತೆಯೂ ಒಂದಾಗಿತ್ತು. ಅವರು ಇತರ ಧರ್ಮಗಳನ್ನು ನಿಂದಿಸುವುದಕ್ಕೆ ಅನುಮತಿಸಲಾಗುವುದಿಲ್ಲ ಎಂದು ಹೇಳಿದ್ದರು. ಆದರೆ ಮೋದಿಯವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಖಾಸಗಿ ಸಂಪತ್ತನ್ನು ಮುಸ್ಲಿಮರಿಗೆ ಹಸ್ತಾಂತರಿಸಲಿದೆ ಎಂದು ಹೇಳಿಕೆ ನೀಡಿ ಅಧಿಕಾರಕ್ಕಾಗಿ ಜನರನ್ನು ವಿಭಜಿಸುವ ರಾಜಕೀಯ ಮಾಡಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ‘ಬಾಗಿಲಿನಿಂದ ದೂರ ಇರು’ ಎಂದು ಹೇಳಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದ ಪ್ರಯಾಣಿಕ!

ಗಾಂಧೀಜಿಯವರ ಹೆಸರಿನಲ್ಲಿ ರಾಜಕಾರಣ ಮಾಡಿ, ಜಗತ್ತಿನ ಮುಂದೆ ಗಾಂಧಿವಾದಿಯಂತೆ ಮುಖವಾಡ ಧರಿಸಿ ಮಾನ ಉಳಿಸಿಕೊಳ್ಳುವ ಮೋದಿಯವರು ಗಾಂಧೀಜಿಯವರ ತತ್ವಗಳನ್ನು ಅಕ್ಷರಷಃ ಗಾಳಿಗೆ ತೂರಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...