ಮುಂದುವರಿದ ಕಂಗನಾ ಎಡವಟ್ಟು; “ರಘುಪತಿ ರಾಘವ ರಾಜಾರಾಮ್‌…” ರಾಷ್ಟ್ರಗೀತೆಯಾಗಿತ್ತೇ!

Date:

“ದೇಶದಲ್ಲಿ ಏಕತೆಯನ್ನು ಸಾಧಿಸಲು ಮಹಾತ್ಮ ಗಾಂಧಿ ಅವರು ‘ರಘುಪತಿ ರಾಘವ ರಾಜಾ ರಾಮ್’ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಮಾಡಿದ್ದರು. ಆದ್ದರಿಂದ ರಾಮನ ಹೆಸರಿನಿಂದ ಯೋಜನೆಯನ್ನು ಕರೆಯುವುದು ಗಾಂಧಿಯ ಕನಸನ್ನು ಈಡೇರಿಸಿದಂತಾಗುತ್ತದೆಯೇ ಹೊರತು ಅವಮಾನ ಮಾಡಿದ ಹಾಗೆ ಆಗುವುದಿಲ್ಲ”, ಎಂದು ಕಂಗನಾ ಹೇಳಿದ್ದಾರೆ.

ಕೆಲವರು ಬಾಯಿಬಿಟ್ಟರೆ ವಿವಾದವಾಗುತ್ತದೆ. ಈ ಲಿಸ್ಟ್‌ನಲ್ಲಿ ಕಂಗನಾ ರಣಾವತ್‌ ಹೆಸರು ಬಹುಷಃ ಮೊದಲ ಸ್ಥಾನದಲ್ಲಿ ಇರಬಹುದೇನೋ. ಕಂಗನಾ ರಾಣಾವತ್ ಇದ್ದಲ್ಲಿ ವಿವಾದ ಇದ್ದೇ ಇರುತ್ತದೆ. ಈ ಹಿಂದೆ ದಿಲ್ಲಿಯ ರೈತ ಚಳವಳಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಗೆ ಮುಜುಗರಕ್ಕೆ ಕಾರಣವಾಗಿದ್ದ ಚಿತ್ರನಟಿ ಈಗ ಹಿಮಾಚಲದ ಮಂಡಿ ಕ್ಷೇತ್ರದ ಸಂಸದೆ. ಸಂಸದೆಯಾದ ನಂತರವೂ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗುತ್ತಿದೆ. ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA)ಗೆ ಹೊಸ ಹೆಸರು ನೀಡಿರುವ ನಿರ್ಧಾರ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಮರುನಾಮಕರಣವನ್ನು ಸಮರ್ಥಿಸುವ ವೇಳೆ ಕಂಗನಾ ಸುಳ್ಳೊಂದನ್ನು ಹೇಳಿಬಿಟ್ಟಿದ್ದಾರೆ. “ಮಹಾತ್ಮ ಗಾಂಧಿಯವರು ‘ರಘುಪತಿ ರಾಘವ ರಾಜಾರಾಮ್’ ಭಕ್ತಿಗೀತೆಯನ್ನು ಭಾರತದ ರಾಷ್ಟ್ರಗೀತೆಯನ್ನಾಗಿ ಮಾಡಿದ್ದರು”, ಎಂದು ಹೇಳಿ ಮತ್ತೊಂದು ಎಡವಟ್ಟು ಮಾಡಿದ್ದಾರೆ.

ಅಧಿವೇಶನ ನಡೆಯುತ್ತಿರುವಾಗ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿಯವರ ರಾಮಭಕ್ತಿಯನ್ನು ಉಲ್ಲೇಖಿಸಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿದರು. “ಇದಕ್ಕೆ ‘ರಾಮ್ ಜಿ’ ಹೆಸರಿಟ್ಟರೆ ಗಾಂಧೀಜಿಗೆ ಹೇಗೆ ಅವಮಾನ ಮಾಡಿದಂತಾಗುತ್ತದೆ?” ಎಂದು ಪ್ರಶ್ನಿಸಿದ ಅವರು, “ದೇಶದಲ್ಲಿ ಏಕತೆಯನ್ನು ಹೆಚ್ಚಿಸಲು ಮಹಾತ್ಮ ಗಾಂಧಿ ‘ರಘುಪತಿ ರಾಘವ್ ರಾಜಾ ರಾಮ್’ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಮಾಡಿದ್ದರು. ಆದ್ದರಿಂದ ರಾಮನ ಹೆಸರಿನಿಂದ ಯೋಜನೆಯನ್ನು ಕರೆಯುವುದು ಗಾಂಧಿಯ ಕನಸನ್ನು ಈಡೇರಿಸಿದಂತಾಗುತ್ತದೆಯೇ ಹೊರತು ಅವಮಾನ ಮಾಡಿದ ಹಾಗೆ ಆಗುವುದಿಲ್ಲ”, ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ MGNREGA ಯೋಜನೆಯನ್ನು ‘ವಿಕ್ಷಿತ್ ಭಾರತ್–ಉದ್ಯೋಗ ಮತ್ತು ಜೀವನೋಪಾಯ ಗ್ಯಾರಂಟಿ ಮಿಷನ್’ ಎಂದು ಮರುನಾಮಕರಣ ಮಾಡಿದ್ದು, ಇದನ್ನು VB-G RAM G ಎಂದು ಸಂಕ್ಷಿಪ್ತವಾಗಿ ಕರೆಯಲಾಗುತ್ತಿದೆ. ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕಿರುವುದಕ್ಕೆ, ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ‘‘ರಾಷ್ಟ್ರಪಿತಗೆ ಮಾಡಿದ ಅವಮಾನ’ ಎಂದು ಆರೋಪಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಗನಾ ರಾಣಾವತ್ ಅವರು ಚಿತ್ರರಂಗದಿಂದ ರಾಜಕೀಯಕ್ಕೆ ಧುಮುಕಿದವರು. 2021 ರಲ್ಲಿ ಬಿಜೆಪಿಯ ಟಿಕೆಟ್‌ನಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ ಅವರ ರಾಜಕೀಯ ಜೀವನವು ಚಿತ್ರರಂಗದಂತೆಯೇ ಡ್ರಾಮಾಟಿಕ್. ರೈತರ ಚಳವಳಿ, ಬಾಲಿವುಡ್ ನಟರ ವಿಮರ್ಶೆ, ರಾಜಕೀಯ ನಾಯಕರ ಮೇಲಿನ ಆರೋಪಗಳು ಇವೆಲ್ಲವೂ ಅವರ ಹೇಳಿಕೆಗಳಲ್ಲಿ ಕಂಡುಬರುತ್ತವೆ. ಕಂಗನಾ ರಣಾವತ್‌  ಮಾಡಿಕೊಂಡಿರುವ ಕಾಂಟ್ರವರ್ಸಿಗಳು ಒಂದೆರಡಲ್ಲ. ಈ ಹಿಂದೆ ಬಾಂಗ್ಲಾದೇಶದ ಹಿಂಸಾಚಾರವನ್ನು ಪಂಜಾಬ್‌ನ ರೈತರ ಆಂದೋಲನಕ್ಕೆ ಜೋಡಿಸುವ ಮೂಲಕ ಕಂಗನಾ ಇಕ್ಕಟ್ಟಿನಲ್ಲಿ ಸಿಲುಕಿಸಿದ್ದರು. ಕೇಂದ್ರ ಸರ್ಕಾರದ ಹೊಗಳಿಕೆಯಲ್ಲಿ ಮುಳುಗಿದ್ದ ಕಂಗನಾ, ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ದೇಶದ ಅನ್ನದಾತರನ್ನು ಕೆರಳಿಸಿದ್ದರು. ಪಂಜಾಬ್‌ನಲ್ಲಿ ರೈತರ ಹೆಸರಿನಲ್ಲಿ ಗೂಂಡಾಗಳು ಹಿಂಸಾಚಾರವನ್ನು ಹರಡುತ್ತಿದ್ದಾರೆ ಎಂದು ಕಂಗನಾ ರನಾವತ್ ಸಂದರ್ಶನದಲ್ಲಿ ಹೇಳಿದ್ದರು. ಅಲ್ಲಿ ಅತ್ಯಾಚಾರ ಮತ್ತು ಕೊಲೆಗಳು ನಡೆಯುತ್ತಿದ್ದವು. ನಮ್ಮ ನಾಯಕತ್ವ ಬಲವಾಗಿಲ್ಲದಿದ್ದರೆ, ರೈತರ ಆಂದೋಲನದ ಸಮಯದಲ್ಲಿ ಪಂಜಾಬ್ ಅನ್ನು ಬಾಂಗ್ಲಾದೇಶವನ್ನಾಗಿ ಮಾಡಲಾಗುತ್ತಿತ್ತು. ಕೃಷಿ ಮಸೂದೆಯನ್ನು ಹಿಂಪಡೆಯಲಾಯಿತು ಇಲ್ಲದಿದ್ದರೆ ಈ ಗೂಂಡಾಗಳಿಗೆ ಬಹಳ ದೊಡ್ಡ ಯೋಜನೆ ಇತ್ತು. ಅವರು ದೇಶದಲ್ಲಿ ಏನು ಬೇಕಾದರೂ ಮಾಡಬಹುದಿತ್ತು ಅಂತ ಹೇಳಿ ರೈತರ ಆಕ್ರೋಶಕ್ಕೆ ಕಾರಣರಾಗಿದ್ದರು. 

ಅಷ್ಟೇ ಅಲ್ಲ ರೈತರ ಹೋರಾಟದ ವೇಳೆ ಕಂಗನಾ ರಣಾವತ್ ರೈತರನ್ನು ಖಲಿಸ್ತಾನಿಗಳು ಎಂದೂ ಕರೆದಿದ್ದರು. ಹೋರಾಟ ನಡೆಸುತ್ತಿದ್ದ ರೈತರನ್ನು ಖಲಿಸ್ತಾನಿ ಉಗ್ರರು ಎಂದು ಕರೆದಿದ್ದರು.  ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯನ್ನು ಹೊಗಳುತ್ತಾ, 1947 ರಲ್ಲಿ ಭಾರತಕ್ಕೆ ಸಿಕ್ಕಿದ ಸ್ವಾತಂತ್ರ್ಯ ‘ಭಿಕ್ಷೆ’ ಎಂದು ಹೇಳಿ ವಿವಾದಕ್ಕೆ ಒಳಗಾಗಿದ್ದರು.  2014 ರಲ್ಲಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಅವರು 2021 ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿ ಜನರಿಂದ ಛೀಮಾರಿ ಹಾಕಿಸಿಕೊಂಡಿದ್ದರು.  

2020 ರಲ್ಲಿ ಬಾಲಿವುಡ್ ಮಾಫಿಯಾಗಿಂತ ಮುಂಬೈ ಪೊಲೀಸರು ತನಗೆ ಹೆಚ್ಚು ಕಿರುಕುಳ ನೀಡಿದ್ದಾರೆ ಎಂದು ನಟಿ ಹೇಳಿದ್ದರು. ಅವರು ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದರು. ಈ ನಗರದಲ್ಲಿ ತನಗೆ ಅಸುರಕ್ಷಿತ ಭಾವನೆ ಮೂಡುತ್ತಿದೆ ಎಂದಿದ್ದರು.

ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಬಿಜೆಪಿ ವಿರೋಧಿ ಗುಂಪುಗಳನ್ನು ಕಂಗನಾ ರನಾವತ್ ‘ತುಕ್ಡೆ ತುಕ್ಡೆ  ಗ್ಯಾಂಗ್’ ಎಂದು ಕರೆದು ಅವರು ದೇಶದ್ರೋಹಿಗಳು ಎಂದು ಹೇಳಿದ್ದರು.

2020 ರಲ್ಲಿ ಕೃಷಿಕಾಯ್ದೆಗಳ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಭಟಿಂಡಾದ ಬಹದ್ದೂರ್‌ಗಢ್ ಜಾಂಡಿಯನ್ ಗ್ರಾಮದ ಮಹಿಂದರ್ ಕೌರ್ ಅವರನ್ನು ಉಲ್ಲೇಖಿಸಿ ರನೌತ್ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಹಂಚಿಕೊಂಡಿದ್ದರು.  ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೃದ್ಧ ಮಹಿಳೆಯೊಬ್ಬರ ಛಾಯಾಚಿತ್ರವನ್ನು ಒಳಗೊಂಡ ಪೋಸ್ಟ್‌ಗೆ ರನೌತ್ ಕಾಮೆಂಟ್ ಮಾಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ಹಣ ನೀಡಲಾಗುತ್ತಿದೆ ಎಂದು ಹೇಳಿದ್ದಿರು.  ವಯಸ್ಸಾದ ರೈತ ಮಹಿಳೆ ಮಹಿಂದರ್ ಕೌರ್ ಅವರನ್ನು ದಿಲ್ಲಿಯ ಶಾಹೀನ್ ಬಾಗ್ ಸಿಎಎ ವಿರೋಧಿ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಬಿಲ್ಕಿಸ್ ಬಾನೋ ಎಂದು ತಪ್ಪಾಗಿ ಗುರುತಿಸಿ, “ಪ್ರತಿಭಟನೆಗಳಿಗೆ 100 ರೂಪಾಯಿಗೆ ಲಭ್ಯ” ಎಂದು ವ್ಯಂಗ್ಯವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಅಕ್ರೋಶ ವ್ಯಕ್ತವಾದ ಹಿನ್ನಲೆಯನ್ನ ಆ ಪೋಸ್ಟ್‌ ಅನ್ನ ಡಿಲೀಟ್‌ ಮಾಡಿದ್ದರು.  

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದು ಹೇಳಿದ್ದರು. ಟೈಮ್ಸ್ ನೌ ಸಮಿಟ್ ನಲ್ಲಿ ನಿರೂಪಕಿ ನವಿಕಾ ಕುಮಾರ್ ಅವರು ಕಂಗನಾ ರಣಾವತ್ ಅವರನ್ನು ಸಂದರ್ಶಿಸಿದಾಗ ಕಂಗನಾ ಈ ಹೇಳಿಕೆ ನೀಡಿದ್ದರು. ಈ ವೀಡಿಯೊ ವೈರಲ್ ಆಗಿದ್ದು, ಅವರ ಹೇಳಿಕೆ ಟ್ರೋಲ್‌ ಆಗಿತ್ತು. 

ಇನ್ನೂ ಇನ್ನೊಂದು ವಿಷಯ, ಬಿಜೆಪಿ ಗಾಂಧೀಜಿಯನ್ನು ಸಮಯಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಾರೆ. ಕೆಲವೊಮ್ಮೆ ಅವರನ್ನು ಆರೋಪಿಸಿ, ಕೆಲವೊಮ್ಮೆ ಬೆಂಬಲಿಸಿ, ತಮಗೆ ಬೇಕಾದ ಹಾಗೇ ಬಳಸಿಕೊಳ್ಳೋದರಲ್ಲಿ ಬಿಜೆಪಿ ನಿಸ್ಸೀಮ ಪಕ್ಷ. ಇದೀಗ ಕಂಗನಾ ರಾಣಾವತ್ ಅವರ ಹೇಳಿಕೆಯು ಮತ್ತೊಮ್ಮೆ ಸಾಬೀತುಪಡಿಸಿದೆ, ಕಂಗನಾ ಇಲ್ಲದೇ ವಿವಾದ ಇಲ್ಲ ಅಂತ. ಕಂಗನಾ ರಣಾವತ್‌ ಅವರ ನಾನ್ಸೆನ್ಸ್‌ ಹೇಳಿಕೆಗಳು ಕೇಂದ್ರ ನಾಯಕತ್ವ ಮತ್ತು ಪಕ್ಷದ ಹಿಮಾಚಲ ಪ್ರದೇಶ ಘಟಕ ಎರಡಕ್ಕೂ ತೀವ್ರ ಮುಜುಗರ ಉಂಟು ಮಾಡುತ್ತಿರುವುದಂತೂ ಸತ್ಯ.  

WhatsApp Image 2025 09 25 at 3.16.47 PM e1758793879498
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...