ರಾಜ್ಯೋತ್ಸವ ವಿಶೇಷ | ನಮ್ಮ ‘ಕನ್ನಡ’ದ ಐದು ಮುಖ್ಯ ಗುಣಗಳು

Date:

ನಾವು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ನಾವು ಮರೆಯದೇ ಅರಿಯಬೇಕಾಗಿರುವ ಐದು ಕನ್ನಡದ ಗುಣಗಳಿವು. 

‘ಕನ್ನಡತನ’ ಸಂಶೋಧನಾ ಕೃತಿ ಕನ್ನಡದ ಈ ಐದು ಮುಖ್ಯ ಗುಣಗಳನ್ನು ಗುರುತಿಸಿದೆ. ಅವುಗಳೆಂದರೆ:
1. ಪ್ರಜಾಪ್ರಭುತ್ವಕ್ಕೆ ಸಂವಾದಿ
2. ಸಮುದಾಯ ಪ್ರಜ್ಞೆ
3. ಬುದ್ಧಿಪ್ರಧಾನ
4. ಜಂಗಮರೂಪಿ
5. ದೇಶಿಯತೆ.

1. ಪ್ರಜಾಪ್ರಭುತ್ವಕ್ಕೆ ಸಂವಾದಿ
ಪ್ರಜಾಪ್ರಭುತ್ವಕ್ಕೆ ಸಂವಾದಿಯಾಗಿ ಕನ್ನಡ ಭಾಷೆ ಎಂಬುದನ್ನು ಗ್ರಹಿಸಬೇಕು. ಪ್ರಜಾಪ್ರಭುತ್ವಕ್ಕೆ ಎರವಾದ ಸಂಗತಿಗಳು ಘಟಿಸುತ್ತಿರುವಾಗ ಪ್ರಜಾಪ್ರಭುತ್ವ ನಶಿಸುತ್ತಿರುವದರ ಬಗ್ಗೆ ಚಕಾರ ಎತ್ತದೆ ಕೇವಲ ಭಾಷಾ ಕೇಂದ್ರಿತವಾಗಿ ಚಿಂತಿಸಿದರೆ ಅದು ಆತ್ಯಂತಿಕವಾಗಿ ಕನ್ನಡ ಭಾಷೆಯ ಹಿತವನ್ನೂ ಕಾಯಲಾರದು. ಕನ್ನಡಜನಗಳ ಪಾಲಿಗೆ ಪ್ರಜಾಪ್ರಭುತ್ವವನ್ನು ಯಶಸ್ವಿಯಾಗಿ ಮಾಡಬಲ್ಲ ಭಾಷೆ ಕನ್ನಡವೊಂದೇ.

2. ಸಮುದಾಯ ಪ್ರಜ್ಞೆ
ಕರಾವಳಿ ಕನ್ನಡ ಸಮುದಾಯ, ಹೈದ್ರಾಬಾದ್ ಕರ್ನಾಟಕ ಪ್ರಾಂತ್ಯ. ಈ ಯಾವುದೇ ಒಂದು ಭಾಗಕ್ಕೆ, ಸಮುದಾಯಕ್ಕೆ ಅಪಾಯ ಬಂದರೆ ಅದು ಕನ್ನಡಕ್ಕೆ ಆಗಿರುವ ಅಪಾಯ ಅಂತ ಗಮನಿಸಬೇಕು. ಕನ್ನಡದ ಕಾಡುಗಳ ಬಗ್ಗೆ, ಕನ್ನಡದ ನದಿಗಳ ಬಗ್ಗೆ, ಕನ್ನಡದ ರೈತರ ಬಗ್ಗೆ ಯೋಚನೆ ಮಾಡದಿರುವ ಹೋರಾಟ ಕನ್ನಡದ ಹೋರಾಟ ಅಲ್ಲ. ಕನ್ನಡದ ಪ್ರಶ್ನೆಗಳು, ಕನ್ನಡ ಸಮಾಜದ ಪ್ರಶ್ನೆಗಳು ಅಂದರೆ ಕನ್ನಡ ಸಮುದಾಯದ ಪ್ರಶ್ನೆಗಳು. ಕನ್ನಡವನ್ನು ಸಾವಿರಾರು ವರ್ಷ ಕಾಪಾಡಿಕೊಂಡು ಬಂದಂತಹ ಶ್ರಮವರ್ಗದ ಪ್ರಶ್ನೆಗಳೇ ಕನ್ನಡದ ಪ್ರಶ್ನೆಗಳು. ಕನ್ನಡದ ಪರವಾಗಿ ಇರುವುದು ಎಂದರೆ ವಚನಕಾರರು ಚಿಂತಿಸಿದಂತೆ ಸ್ಥಳೀಯ ಸಮುದಾಯದ ಆಶೋತ್ತರಗಳ ಪರವಾಗಿ ಇರುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಹೆಸರಾಯ್ತು ಕರ್ನಾಟಕ; ವರುಷವಾಯ್ತು ಐವತ್ತು

3. ಬುದ್ಧಿಪ್ರಧಾನ
‘ಭಾವಪ್ರಧಾನ’ ಆಂಶಗಳತ್ತಲೇ ಕನ್ನಡ ಅಸ್ಮಿತೆಯ ಒತ್ತು ಬಿದ್ದಿರುವುದು ಕನ್ನಡ, ಕರ್ನಾಟಕದ ಆರೋಗ್ಯಕರ ಬೆಳವಣಿಗೆಯ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರಿದೆ. ‘ಭಾವಪ್ರಧಾನ’ ಅಂಶಗಳಿಗಿಂತ ‘ಬುದ್ಧಿಪ್ರಧಾನ’ ವೈಚಾರಿಕತೆ ಭಾಷೆಯನ್ನು ಆರೋಗ್ಯಕರವಾಗಿ ಬೆಳೆಸುತ್ತದೆ.

4. ಜಂಗಮ ಸ್ವರೂಪಿ
ಕನ್ನಡ ಅಸ್ಮಿತೆ ಎನ್ನುವುದು ಜಂಗಮ ಸ್ವರೂಪಿ. ಕನ್ನಡದ ಗುರುತು ಎನ್ನುವ ಕಲ್ಪನೆ ಆಕ್ರಮಣಶೀಲವಾಗಬಹುದು. ಅದು ಅನ್ಯರನ್ನು ಬಹಳ ಅಸಹನೆಯಿಂದ ಕಾಣಬಹುದು. ‘ನಾವು ಎದುರಿಗೆ ಕಾಣುವುದು ಇದೇ ಕನ್ನಡ, ಇದೇ ಕರ್ನಾಟಕ, ಇದು ಹೀಗೆ, ಇದೇ ಕನ್ನಡ’ ಎಂದು ವಾದ ಮಾಡುವುದಕ್ಕೆ ಶುರುಮಾಡಿದರೆ ನಮ್ಮ ಗುರುತಿನ ಹುಡುಕಾಟದಲ್ಲಿ ಅದು ಇತರರ ಮೇಲೆ ಅಸಹನೆಯನ್ನು ತೋರಬಹುದು. ಆದ್ದರಿಂದ ಕನ್ನಡ ಅನ್ನುವುದು ಇನ್ನೂ ಆಗಿಲ್ಲದಂತಹ ಸ್ಥಿತಿ, ಕನ್ನಡ ನಾಡು ಅಂದ್ರೆ ನಾವು ಯಾವಾಗಲೂ ಕನಸು ಕಾಣೋ ಸ್ಥಿತಿ. ಕನ್ನಡ ಭಾಷಿಕರು ಮೆಟ್ಟುವ ನೆಲವೇ ಕರ್ನಾಟಕ, ಮೂಲತಃ ಕನ್ನಡವು ಪರಿಭಾವಿಸುವ ಒಂದು ಕ್ರಿಯೆ.

5. ದೇಶಿಯತೆ ಪರ
‘ಕನ್ನಡತನ’ ಎನ್ನುವುದು ‘ಭಾಷೆಗೆ’ ಸೀಮಿತವಾದಂತೆಲ್ಲ ಭಾಷೆಯಾಗಿಯೂ ಅದು ಹಿನ್ನಡೆಯನ್ನು ಅನುಭವಿಸುತ್ತದೆ. ಒಂದು ನಾಡಿನ ಜನರ ಸಾಮಾಜಿಕ ಆರ್ಥಿಕ ಬದುಕು ನೆಟ್ಟಗಾಗದೆ ಆ ನಾಡಿನ ಸಂಸ್ಕೃತಿಯ ಚರ್ಚೆಗೆ ಏನೂ ಅರ್ಥವಿಲ್ಲ. ಕನ್ನಡ ಅಸ್ಮಿತೆ ಎಂದರೆ ಈ ನಾಡಿನಲ್ಲಿ ಬದುಕುತ್ತಿರುವ ಎಲ್ಲ ಜನಸಮುದಾಯಗಳ ಚಿಂತನೆ ಮತ್ತು ನಡಾವಳಿಗಳ ರೀತಿ. ಕನ್ನಡದ ಪರವಾಗಿ ಇರುವುದು ಎಂದರೆ ವಚನಕಾರರು ಚಿಂತಿಸಿದಂತೆ ದೇಶೀಯತೆಯ ಪರವಾಗಿ ಇರುವುದು.

1417716 531606640266610 1974048228 o
ಡಾ. ಸರ್ಜಾಶಂಕರ್ ಹರಳಿಮಠ
+ posts

ಲೇಖಕರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...