ಪ್ರತಿಪ್ಠಿತ ಕಾಲೇಜುಗಳಲ್ಲಿ ಖಾಲಿ ಇವೆ ಎಂಜಿನಿಯರಿಂಗ್ ಸೀಟುಗಳು; 4ನೇ ಸುತ್ತಿನ ಕೌನ್ಸೆಲಿಂಗ್‌ಗೆ ಒತ್ತಾಯ

Date:

ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಾದ ಎಂ.ಎಸ್‌ ರಾಮಯ್ಯ, ಆರ್‌ವಿಸಿಇ, ಬಿಎಂಎಸ್‌, ಎಂಎಸ್‌ಆರ್‌ಐಟಿ, ಬಿಐಟಿ ಹಾಗೂ ದಯಾನಂದ ಸೇರಿದಂತೆ ವಿವಿಧ ಕಾಲೇಜುಗಳ ಪ್ರವೇಶಕ್ಕೆ 3ನೇ ಸುತ್ತಿನ ಕೌನ್ಸೆಲಿಂಗ್‌ ಮುಗಿದೆ. ಆದಾಗ್ಯೂ, ಈ ಕಾಲೇಜುಗಳಲ್ಲಿ ಇನ್ನೂ ಹಲವು ಸೀಟುಗಳು ಖಾಲಿ ಇವೆ ಎಂಬುದನ್ನು Comedk.org ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಹೀಗಾಗಿ, ಮತ್ತೊಂದು ಸುತ್ತಿನಲ್ಲಿ ಕೌನ್ಸೆಲಿಂಗ್‌ ನಡೆಸಿ, ಆಸಕ್ತ ಅಭ್ಯರ್ಥಿಗಳಿಗೆ ಸರ್ಕಾರಿ ಕೋಟಾದಲ್ಲಿಯೇ ಪ್ರವೇಶ ನೀಡಬೇಕು. ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.

ಇತ್ತೀಚೆಗೆ, Comedk.orgನಲ್ಲಿ 3ನೇ ಸುತ್ತಿನ ಕೌನ್ಸೆಲಿಂಗ್‌ ಮುಗಿದ ಬಳಿಕ, ಖಾಲಿ ಇರುವ ಸೀಟುಗಳ ಪಟ್ಟಿಯನ್ನು ಲಗತ್ತಿಸಲಾಗಿದೆ. ಹಲವು ಪ್ರತಿಷ್ಠಿತ ಕಾಲೇಜುಗಳಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ ಸೇರಿದಂತೆ ಹೆಚ್ಚು ಬೇಡಿಕೆಯಿರುವ ಕೋರ್ಸ್‌ಗಳಲ್ಲಿ ಹಲವು ಸೀಟುಗಳು ಇನ್ನೂ ಖಾಲಿ ಇವೆ. ಈ ಪೈಕಿ, RVCE (31), BMS (136), BIT (52), MSR (133) ಮತ್ತು ದಯಾನಂದ ಸಾಗರ್ ಕಾಲೇಜಿನಲ್ಲಿ 47 ಸೀಟುಗಳು ಸೇರಿದಂತೆ ಹಲವು ಪ್ರತಿಷ್ಠಿತ ಕಾಲೇಜುಗಳಲ್ಲಿ 600ಕ್ಕೂ ಹೆಚ್ಚು ಸೀಟುಗಳು ಖಾಲಿ ಉಳಿದಿವೆ. ಈ ಸೀಟುಗಳನ್ನು ಈಗ ಮ್ಯಾನೇಜ್‌ಮೆಂಟ್ ಕೋಟಾ ಸೀಟುಗಳಾಗಿ ಪರಿವರ್ತಿಸಲು ಕಾಲೇಜುಗಳು ಮುಂದಾಗಿವೆ. ಇದನ್ನು ತಡೆಯಬೇಕು. ಆ ಖಾಲಿ ಸೀಟುಗಳಿಗೆ 4ನೇ ಸುತ್ತಿನ ಕೌನ್ಸೆಲಿಂಗ್ ನಡೆಸಿ ಸರ್ಕಾರಿ ಕೋಟಾದಲ್ಲಿಯೇ ದಾಖಲಾತಿ ನೀಡುವಂತೆ ಸರ್ಕಾರ ನಿರ್ದೇಶನ ನೀಡಬೇಕು ಎಂಬ ಒತ್ತಾಯವಿದೆ.

ಅಂದಹಾಗೆ, ಪ್ರತಿ ವರ್ಷ ದಾಖಲಾತಿ ಸಮಯದಲ್ಲಿ ಎರಡು ಅಥವಾ ಅದಕ್ಕೂ ಹೆಚ್ಚು ಕೋರ್ಸುಗಳಿಗೆ ಆಥವಾ ಒಂದೇ ಕೋರ್ಸ್‌ಗೆ ವಿವಿಧ ಕಾಲೇಜುಗಳಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಾರೆ. ಆ ಪೈಕಿ, ಕೆಲವೊಮ್ಮೆ ಒಬ್ಬರೇ ಅಭ್ಯರ್ಥಿಗೆ ಎರಡು ಕಾಲೇಜು ಅಥವಾ ಕೋರ್ಸುಗಳಲ್ಲಿ ಸೀಟು ಸಿಗುತ್ತದೆ. ಆಗ, ತಮ್ಮ ಆಧ್ಯತೆಯ ಕೋರ್ಸ್‌ಗೆ ತಾವು ಬಯಸಿದ ಕಾಲೇಜಿನಲ್ಲಿ ಅಭ್ಯರ್ಥಿಗಳು ದಾಖಲಾಗುತ್ತಾರೆ. ಮತ್ತೊಂದು ಕೋರ್ಸ್‌ ಅಥವಾ ಕಾಲೇಜಿನ ಸೀಟು ಹಾಗೆಯೇ ಉಳಿದುಹೋಗುತ್ತದೆ. 3ನೇ ಸುತ್ತಿನವರೆಗೂ ಹೀಗೆಯೇ ನಡೆಯುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಹಸಿರಾಗುತ್ತಿದೆ ಅಂಟಾರ್ಟಿಕ; ಸಕಲ ಜೀವ ಸಂಕುಲಕ್ಕೆ ಅಪಾಯದ ಸಂಕೇತ!

ಜೊತೆಗೆ, Comedkನಲ್ಲಿ ಸೀಟು ಸಿಕ್ಕರೂ, ಕೆಲವು ಅಭ್ಯರ್ಥಿಗಳು ಸಿಇಟಿ ಮೂಲಕ ಸೀಟು ಸಿಕ್ಕರೆ ಅದನ್ನೇ ಆಧ್ಯತೆಯಾಗಿ ತೆಗೆದುಕೊಂಡು ಸಿಇಟಿ ಮೂಲಕ ದೊರೆತ ಕೋರ್ಸ್‌, ಕಾಲೇಜುಗಳಿಗೆ ದಾಖಲಾಗುತ್ತಾರೆ. ಇದಕ್ಕೆ ಮುಖ್ಯ ಕಾರಣ – ಶುಲ್ಕ. Comedk ಮೂಲಕ ದಾಖಲಾತಿ ಪಡೆದರೆ ಕೋರ್ಸ್‌ಅನ್ನು ಪೂರ್ಣಗೊಳಿಸಲು 10ರಿಂದ 12 ಲಕ್ಷ ರೂ. ಬೇಕಾಗುತ್ತದೆ. ಸಿಇಟಿ ಮೂಲಕ ಹೋದರೆ, ಗರಿಷ್ಠ ನಾಲ್ಕು ಲಕ್ಷದಲ್ಲಿಯೇ ಮುಗಿಯುತ್ತದೆ.

ಹೀಗಾಗಿಯೆ, ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ನೂರಾರು ಸೀಟುಗಳು 3ನೇ ಸುತ್ತಿನ ಕೌನ್ಸೆಲಿಂಗ್‌ ಬಳಿಕವೂ ಉಳಿದುಹೋಗಿವೆ. ಗಮನಾರ್ಹವಾಗಿ, ಸರ್ಕಾರಿ ಕೋಟಾದಲ್ಲಿ ಕೋರ್ಸು ಮುಗಿಸಲು 10 ಲಕ್ಷ ರೂ. ವೆಚ್ಚವಾದರೆ, ಮ್ಯಾನೇಜ್‌ಮೆಂಟ್‌ ಕೋಟಾದಲ್ಲಿ ದುಪ್ಪಟ್ಟು ಹಣ ಖರ್ಚಾಗುತ್ತದೆ. ವರ್ಷಕ್ಕೆ 7-8 ಲಕ್ಷ ಹಣ ವ್ಯಯಿಸಬೇಕಾಗುತ್ತದೆ. ಈ ಖಾಲಿ ಇರುವ ಸೀಟುಗಳನ್ನು ಮ್ಯಾನೇಜ್‌ಮೆಂಟ್‌ ಕೋಟಾ ಸೀಟುಗಳಾಗಿ ಪರಿವರ್ತಿಸಿದರೆ, ಹೆಚ್ಚು ಹಣ ಭರಿಸಲಾಗದ ಅಭ್ಯರ್ಥಿಗಳು ಎಂಜಿನಿಯರಿಂಗ್‌ ಶಿಕ್ಷಣದಿಂದಲೇ ಹೊರಗುಳಿಯುತ್ತಾರೆ. ಅದೇ ಈ ಸೀಟುಗಳನ್ನು ಸರ್ಕಾರಿ ಕೋಟಾಗಳಲ್ಲಿಯೇ ನೀಡಿದರೆ, ನಾಲ್ಕನೇ ಸುತ್ತಿನ ಕೌನ್ಸೆಲಿಂಗ್ ಮಾಡಿದರೆ, ಹಲವಾರು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.

ಈ ಬಗ್ಗೆ ಈದಿನ.ಕಾಮ್‌ ಜತೆ ಮಾತನಾಡಿದ ಇಂಜಿನಿಯರಿಂಗ್ ಶಿಕ್ಷಣದಲ್ಲಿ ತೊಡಗಿರುವ ರಾಘವೇಂದ್ರ, “Comedkನಲ್ಲಿ 4ನೇ ಸುತ್ತಿನ ಅಂತಿಮ ಕೌನ್ಸೆಲಿಂಗ್ ನಡೆಸಬೇಕು. ಇದರಿಂದ, ಈಗಾಗಲೇ ಸಿಇಟಿ ಮತ್ತು Comedk ನಡೆಸಿದ ಕೌನ್ಸೆಲಿಂಗ್‌ಗಳಲ್ಲಿ ಸೀಟು ಸಿಗದೆ ನಿರಾಶೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ದೊರೆಯುತ್ತದೆ. ಅವರ ಶಿಕ್ಷಣವೂ ಮುಂದುವರೆಯುತ್ತದೆ. 4ನೇ ಸುತ್ತಿನಲ್ಲಿ ಕೌನ್ಸೆಲಿಂಗ್‌ ನಡೆಸಿದರೆ, ಕನಿಷ್ಠ 400-500 ಬಡ, ಹಿಂದುಳಿದ ಕುಟುಂಬಗಳು ತಮ್ಮ ಮಕ್ಕಳನ್ನು ಎಂಜಿನಿಯರಿಂಗ್ ಮಾಡಿಸಲು ಅನುಕೂಲವಾಗುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...