ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ತಡೆ ಕಾಯ್ದೆ ಸ್ವಾಗತಾರ್ಹ; ಆದರೆ…!

Date:

ಭಾರತ ವಿಶ್ವದ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವದ ಸಂವಿಧಾನ ಹೊಂದಿರುವ ರಾಷ್ಟ್ರ. ಸಂವಿಧಾನದ ಸಮ ಸಮಾಜದ ಕನಸುಗಳು ಇದರ ಪೂರ್ವ ಪೀಠಿಕೆ ಮತ್ತು ನಿರ್ದೇಶನ ತತ್ವಗಳಲ್ಲಿ ಅಡಗಿದೆ. ಇವು ಆಳುವ ಸರಕಾರಗಳು ಜಾರಿಗೊಳಿಸುವ ಕಾಯ್ದೆ ಕಾನೂನುಗಳಾಗಿ ರೂಪುಗೊಳ್ಳುವುದರ ಮೇಲೆ ಅಡಕಗೊಂಡಿರುತ್ತವೆ.

ಭಾರತದ ಧಾರ್ಮಿಕ ಅಲ್ಪಸಂಖ್ಯಾತರು ವಿಶೇಷವಾಗಿ ಮುಸ್ಲಿಮ್ ಸಮುದಾಯಗಳು ಧಾರ್ಮಿಕತೆಯ ನೆಪದಲ್ಲಿ ದೇಶಾದ್ಯಂತ ಪ್ರಮುಖವಾಗಿ ಕರ್ನಾಟಕದಲ್ಲಿ ಸಾಮಾಜಿಕ ಶೋಷಣೆ, ಬಹಿಷ್ಕಾರ, ಹಿಂಸೆ, ಸಾವು, ದೌರ್ಜನ್ಯ, ಅಂಚಿಗೆ ತಳ್ಳುವಿಕೆ, ಹಕ್ಕು ಮತ್ತು ಅವಕಾಶಗಳ ವಂಚನೆಗೆ ನಿರಂತರವಾಗಿ ಒಳಪಟ್ಟಿದ್ದಾರೆ. ಅಲ್ಲದೆ, ದ್ವೇಷ ಭಾಷಣಗಳ ರಾಜಕಾರಣದಿಂದ ನಾಗರಿಕ ಹಕ್ಕುಗಳಿಂದ ವಂಚಿಸಲ್ಪಟ್ಟಿದ್ದಾರೆ.

ಧರ್ಮ, ಭಾಷೆ, ಪ್ರದೇಶ, ಮದುವೆ,ಆಹಾರ, ಪ್ರಾರ್ಥನಾ ಪದ್ಧತಿ, ಸಂಸ್ಕೃತಿ ವಿಧಾನ, ಧಾರ್ಮಿಕ ಆಚರಣೆ, ಉಡುಗೆ ತೊಡಿಗೆ, ರಾಜಕೀಯ ಭಿನ್ನಾಭಿಪ್ರಾಯಗಳು ಇಂತಹ ಹಲವಾರು ಕಾರಣಗಳನ್ನು ಬಳಸಿಯೇ ಧಾರ್ಮಿಕ ದೌರ್ಜನ್ಯಗಳ ಹುಟ್ಟಿಗೆ ಧಾರ್ಮಿಕ ದ್ವೇಷ ಭಾಷಣಗಳು ನಿರಂತರವಾಗಿ ಎಗ್ಗಿಲ್ಲದೆ ಸಕ್ರಿಯವಾಗಿದ್ದು, ಫಲವನ್ನು ಉಣುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮ ದ್ವೇಷವೇ ಮತ ಬ್ಯಾಂಕಾಗಿ ಪರಿವರ್ತನೆಯಾಗುತ್ತಿರುವ, ಏಕ ಧರ್ಮದ ಸಾಂಸ್ಕೃತಿಕ ರಾಜಕಾರಣವೇ ಪ್ರಭುತ್ವದ ಪಾಲಕ ಸ್ಥಾನದಲ್ಲಿರುವ ಈ ಸಂಧಿಗ್ದಕಾಲಘಟ್ಟದ ನಮ್ಮ ರಾಜ್ಯದಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ (ಪ್ರತಿಬಂಧಕ) ಮಸೂದೆ – 2025’ ಅನ್ನು ಜಾರಿಗೊಳಿಸುವ ಕಾಂಗ್ರೆಸ್ ಸರ್ಕಾರದ ಪ್ರಯತ್ನ ಮಹತ್ವ ಹಾಗೂ ಸ್ವಾಗತಾರ್ಹದ ಹೆಜ್ಜೆ.

ದ್ವೇಷ ಭಾಷಣಗಳು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಈ ಮಸೂದೆ, ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಒಂದು ಐತಿಹಾಸಿಕ ಹೆಜ್ಜೆ. ಇಡೀ ದೇಶಕ್ಕೆ ಆದರ್ಶಪ್ರಾಯ. ಧಾರ್ಮಿಕ ನೆಪದ ಸಂವಿಧಾನ ವಿರೋಧಿ ಕೃತ್ಯಗಳ ತಡೆಗೆ ಈ ಮಸೂದೆ ಜಾರಿಗೊಳಿಸುವುದರ ಮೂಲಕ ಕರ್ನಾಟಕ ಸರ್ಕಾರ ಒಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ. ಇದೆ ಡಿಸೆಂಬರ್ 4 ರಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡು ಬೆಳಗಾವಿ ಅಧಿವೇಶನದ ವಿಧಾನ ಮಂಡಲದಲ್ಲಿ ಮಂಡಿಸಲಾದ ಈ ಕಾಯ್ದೆಯ ಜಾರಿಗಿರುವ ಅಡೆತಡೆಗಳನ್ನು ಮೀರಿ ಇದರ ಸದುದ್ದೇಶ ಸಂಪೂರ್ಣ ಈಡೇರಬಹುದೇ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಸಾಮಾಜಿಕ ದ್ವೇಷ ಹರಡುವ ಮಾತುಗಳು, ದ್ವೇಷ ಭಾಷಣಗಳು, ಇತರೆ ಧರ್ಮ ಸಮುದಾಯಗಳನ್ನು ಅವಮಾನಿಸುವ, ಉದ್ರೇಕಿಸುವ ಹೇಳಿಕೆಗಳನ್ನು ಯಾವುದೇ ಧರ್ಮ, ಸಮುದಾಯ, ಪಕ್ಷ, ಗುಂಪುಗಳ ಮುಖಂಡರು ನೀಡಿದರೂ ಅವರ ಮೇಲೆ ಈ ಕಾಯ್ದೆಯನ್ನು ನಿರ್ಭೀತಿಯಾಗಿ ಜಾರಿಗೊಳಿಸುವ ಬದ್ಧತೆ, ಧೈರ್ಯ ಸರಕಾರ, ಸಂಬಂಧ ಪಟ್ಟ ಇಲಾಖಾಧಿಕಾರಿಗಳಿಗೆ ಇದೆಯೇ? ವಿಶೇಷವಾಗಿ, ರಾಜ್ಯದಲ್ಲಿ ಈಗಾಗಲೇ ದ್ವೇಷ ಭಾಷಣಗಳ ಸರಣಿ ಪ್ರಕರಣಗಳು ದಾಖಲಾಗಿರುವ ವ್ಯಕ್ತಿಗಳ ವಿರುದ್ಧ ಈ ನೂತನ ಕಾಯ್ದೆಯ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎದೆಗಾರಿಕೆಯನ್ನು ಸರ್ಕಾರ ತೋರಬೇಕು. ಆಗ ಮಾತ್ರ ಈ ಕಾಯ್ದೆಯ ನೈಜ ಜನಪರ ಕಾಳಜಿ ಸಾಬೀತಾಗಬಹುದು.

ಈ ಕಾನೂನು ದುರ್ಬಲರ ಮೇಲೆ ಮಾತ್ರ ಜಾರಿಯಾಗಿ, ಪ್ರಬಲ ಶಕ್ತಿಶಾಲಿಗಳು ತಪ್ಪಿಸಿಕೊಳ್ಳುವಂತಾಗಬಾರದು. ನಿಜಾರ್ಥದಲ್ಲಿ ಈ ಕಾಯ್ದೆ ಪರಿಣಾಮಕಾರಿಯಾಗಬೇಕಾದರೆ, ದ್ವೇಷ ಭಾಷಣ ಮಾಡುವವರ ರಾಜಕೀಯ ಹುದ್ದೆ ನೋಡದೆ ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಜೊತೆಗೆ ಬಾಧಿತರ ಪುನರ್ವಸತಿ ಮತ್ತು ಪರಿಹಾರಕ್ಕೆ ಸ್ಪಷ್ಟ ವ್ಯವಸ್ಥೆಯನ್ನು ರೂಪಿಸುವ ಅಗತ್ಯವೂ ಇದೆ.

ಈ ಮಸೂದೆಯ ಕೆಲ ಅಂಶಗಳು ಸಂವಿಧಾನಬಾಹಿರವಾಗಿ ದುರ್ಬಳಕೆಗೆ ಅವಕಾಶವಾಗುವ ಸಾಧ್ಯತೆಗಳಿವೆ. ಧರ್ಮ, ಸಮುದಾಯಗಳ ಮೇಲೆ ನಡೆಯುವ ವಿಮರ್ಶೆ-ಟೀಕೆಗಳು ಮತ್ತು ದ್ವೇಷದ ನಡುವಿನ ವ್ಯತ್ಯಾಸಗಳನ್ನು ಗುರುತಿಸಲು ಈ ಮಸೂದೆಗೆ ಸಾಧ್ಯವಾಗದಿರಬಹುದು. ಈ ವ್ಯತ್ಯಾಸಗಳನ್ನು ಬಲಾಢ್ಯರು ತಮ್ಮ ಪರವಾದ ಅನುಕೂಲಾಸ್ತ್ರವಾಗಿ ಬಳಸುವ ಸಾಧ್ಯತೆಗಳು ಕೂಡ ಇವೆ.

ಈ ಮಸೂದೆಯನ್ನು ಜಾರಿಗೊಳಿಸುವುದನ್ನು ಖಂಡಿಸುವುದಕ್ಕೆ ಬಿಜೆಪಿ ಮತ್ತು ಹಿಂದುತ್ವವಾದಿ ಗುಂಪುಗಳ ಜೊತೆ ಜೆಡಿಎಸ್ ಕೂಡ ಸೇರಿಕೊಂಡಿದೆ. ವಿಶೇಷವೆಂದರೆ ಕರವೇ ನಾರಾಯಣ ಗೌಡರು ಸಹ ಈ ಮಸೂದೆ ವಿರುದ್ಧದ ನಿಲುವು ತಾಳಿದ್ದಾರೆ. ಇವರ ಗುಮಾನಿಗಳಿಗೆ ಸರಕಾರ ಸ್ಪಷ್ಟನೆ ನೀಡಬೇಕಿದೆ. ಸಂಘಿಗಳ ಈ ತಿರಸ್ಕಾರ ಸಹಜವೂ ಕೂಡ.

ಸಾಮಾನ್ಯವಾಗಿ ಬಿಜೆಪಿ ಮತ್ತು ಸಂಘಪರಿವಾರಕ್ಕೆ ದ್ವೇಷ ಭಾಷಣಗಳೇ ಅಧಿಕಾರ ರಾಜಕೀಯದ ಕೇಂದ್ರಬಿಂದು, ಇಲ್ಲಿ ಉತ್ಪಾದನೆಯಾಗುವ ಕೋಮುಗಲಭೆಗಳ ಮೂಲಕವೇ ರಾಜ್ಯದ ಅಧಿಕಾರ ಹಿಡಿದಿದ್ದುಕೂಡ. ಇದನ್ನು ಕಾನೂನಾತ್ಮಕವಾಗಿ ತಡೆಯುವುದೆಂದರೆ ಇವರ ಕೋಮುವಾದಿ ಬತ್ತಳಿಕೆಗಳು ಬರಿದಾಗಿ ದ್ವೇಷ ರಾಜಕಾರಣದ ಬುಡಕ್ಕೆ ಬೆಂಕಿ ಬಿದ್ದಂತೆಯೆ ಸರಿ.

Hate Speech 1170x658

ರಾಜ್ಯದಲ್ಲಿ ಈಗಾಗಲೇ ಇಂತಹ ದ್ವೇಷ ಭಾಷಣ ಮಾಂತ್ರಿಕರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದರೂ ಈ ಸಮಾಜ ಘಾತಕ ವ್ಯಕ್ತಿಗಳಿಗೆ ಹಿಂದುತ್ವದ (ಹಿಂದುಧರ್ಮ ಅಲ್ಲ) ಪಾಲಕರು ಎಂಬ ನೆಪದಲ್ಲಿ ಅಧಿಕಾರಸ್ಥರಿಂದ ಪಕ್ಷಾತೀತವಾಗಿ ಸಹಕಾರ, ರಕ್ಷಣೆ ಸಿಗುತ್ತಿದೆ. ಇದುವರೆಗಿನ ದ್ವೇಷ ಭಾಷಣ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದಿರಲು ಈಗಾಗಲೇ ಜಾರಿಯಾಗಿರುವ ಕಾನೂನುಗಳ ಪೇಲವ ಪ್ರದರ್ಶನವೆ ಕಾರಣ. ಹೀಗಾಗಿ ಅದಕ್ಕೊಂದು ಪ್ರತ್ಯೇಕ ಕಾನೂನು ತರುವ ರಾಜ್ಯ ಸರ್ಕಾರದ ಉದ್ದೇಶ ಸಮರ್ಥನೀಯ.

ಇದುವರೆಗಿನ ಕಾನೂನುಗಳಲ್ಲಿದ್ದ ‘ಲೂಪ್‌ ಹೋಲ್ಸ್’ ಗಳನ್ನು ಕಿತ್ತು ಇವುಗಳಿಗೆ ಮತ್ತಷ್ಟು ಸದೃಢಗೊಳಿಸಿ ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗ (ಬರೀ ಮುಸ್ಲಿಮರಲ್ಲದೆ ಕರ್ನಾಟಕದ ನಿವಾಸಿ ಎಲ್ಲ ಧರ್ಮ ಸಮುದಾಯ) ಆಧಾರದ ಮೇಲೆ ದ್ವೇಷದ ಮಾತುಗಳನ್ನು ಆಡುವುದು ಅಥವಾ ದ್ವೇಷ ಕೃತ್ಯಕ್ಕೆ ಪ್ರಚೋದನೆ ನೀಡುವುದು, ಕೋಮುಗಲಭೆಗಳನ್ನು ಸೃಷ್ಟಿಸುವುದು ಗಂಭೀರ ಶಿಕ್ಷೆಯಡಿ ತರಲಾಗಿದೆ. ಅಂತಹ ವ್ಯಕ್ತಿಗೆ ಮೊದಲನೇ ಬಾರಿಯ ಅಪರಾಧಕ್ಕೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಐವತ್ತು ಸಾವಿರ ರೂಪಾಯಿ ದಂಡ. ಈ ಕೃತ್ಯ ಮರುಕಳಿಸಿದರೆ ಹತ್ತು ವರ್ಷಗಳವರೆಗೆ ಶಿಕ್ಷೆ ಇದೆ. ದ್ವೇಷ ಭಾಷಣ ಮೈಕಾಸುರರಿಗೆ ಇದು ನಡುಕದ ಕಾನೂನು. ಈ ದ್ವೇಷಕಾರರು ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬುದ್ಧಿಸ್ಟ್, ಪಾರ್ಸಿ, ಲಿಂಗಾಯತ ಇತರೆ ಯಾರಾದರೂ ಸರಿ, ಎಲ್ಲರಿಗೂ ಅನ್ವಯ.

ಇದನ್ನು ಓದಿದ್ದೀರಾ? ವಿರೋಧದ ನಡುವೆ ದ್ವೇಷ ಭಾಷಣ ವಿಧೇಯಕ ಅಂಗೀಕಾರ; ವಿಪಕ್ಷಗಳ ಆಕ್ರೋಶ

ಹೊಸ ಮಸೂದೆಯ ಪ್ರಕಾರ ದ್ವೇಷ ಭಾಷಣದ ಪ್ರಕರಣಗಳು ಜೆಎಂಎಫ್‌ಸಿ ನ್ಯಾಯಾಲಯಗಳಲ್ಲಿ
ವಿಚಾರಣೆ ನಡೆಯಲಿವೆ. ಎಸ್‌ಪಿಯವರಿಗೆ ತನಿಖೆಯ ಜವಾಬ್ದಾರಿ ಇರಲಿದೆ. ಯಾವುದೇ ಸಮುದಾಯ ಅಥವಾ ಧರ್ಮವನ್ನು ಗುರಿಯಾಗಿಸಿದ ದ್ವೇಷಭಾಷಣ, ಸಾರ್ವಜನಿಕ ಹೇಳಿಕೆ, ಬರೆಹ, ದೃಶ್ಯ-ಶ್ರವಣ ಹಾಗೂ ಎಲೆಕ್ಟ್ರಾನಿಕ್ಸ್ ಮಾಧ್ಯಮ ಮುಖಾಂತರ ಧರ್ಮ, ಜಾತಿ, ಜನಾಂಗ, ವರ್ಣ, ಭಾಷೆ, ಲಿಂಗ, ಜನ್ಮಸ್ಥಳ ಹಾಗೂ ವಸತಿಯ ಸ್ಥಳಗಳ ಕುರಿತು ವ್ಯಕ್ತಿಗಳ ನಡುವೆ ಅಥವಾ ಗುಂಪುಗಳ ನಡುವೆ ಹಾನಿ, ವಿರಸ, ಹಿಂಸೆಗಳನ್ನು ಪ್ರಚೋದಿಸುವ, ದ್ವೇಷವನ್ನು ಹುಟ್ಟು ಹಾಕುವ ಕೃತ್ಯಗಳಿಗೆ ಈ ಕಾಯಿದೆ ತಡೆ ನೀಡಲಿದೆ ಎಂಬುದು ಇದರ ವಿಶೇಷ.

ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ, ಸರ್ವ ಜನಾಂಗದ ಶಾಂತಿಯ ತೋಟವನ್ನು ಮುರಿಯುವ, ಕರುನಾಡನ್ನು ಧರ್ಮದ ನೆಪದಲ್ಲಿ ವಿಚ್ಛಿದ್ರಗೊಳಿಸುವ ಉದ್ದೇಶವುಳ್ಳವರಿಗೆ ಈ ಕಾಯಿದೆಯನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಪ್ರಯತ್ನ ಕರ್ನಾಟಕದಲ್ಲೇ ಹೀಗಿದ್ದರೆ, ಇನ್ನು ಇಂತಹ ಪ್ರಯೋಗಗಳು ಗುಜರಾತ್, ಉತ್ತರ ಪ್ರದೇಶ, ದೆಹಲಿ, ಬಿಹಾರದಂತಹ ರಾಜ್ಯಗಳಲ್ಲಿ ನಡೆದರೆ.!

ಇದುವರೆಗಿನ ಐಪಿಸಿ ಸೆಕ್ಷನ್‌ಗಳಲ್ಲಿ ಇದ್ದ ಸಡಿಲ ಕೊಂಡಿಗಳನ್ನು ಕಿತ್ತು ಹಾಕಿ ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗ ಅಥವಾ ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ದ್ವೇಷದ ಮಾತುಗಳನ್ನು ಆಡುವುದು ಅಥವಾ ದ್ವೇಷ ಕೃತ್ಯಕ್ಕೆ ಪ್ರಚೋದನೆ ನೀಡುವುದನ್ನು ಗಂಭೀರ ಶಿಕ್ಷೆಯಡಿ ತರಲಾಗಿದೆ. ಧರ್ಮ, ಸಮುದಾಯ, ವರ್ಣ, ವರ್ಗ, ವೃತ್ತಿ, ಭಾಷೆಗಳ ನಡುವೆ ಬಿರುಕುಗಳ ಸೃಷ್ಟಿಕರ್ತರ ರಾಜಕೀಯ ಯೋಜನೆಗಳಿಗೆ ಈ ಮೂಲಕವಾದರೂ ಕಡಿವಾಣವಾಗಲಿ. ಜಾತ್ಯತೀತ, ಸರ್ವಜನ ಕಲ್ಯಾಣ, ಸೌಹಾರ್ದತೆ ಈ ನಾಡಿನಲ್ಲಿ ಶಾಶ್ವತಗೊಳ್ಳಲಿ. ಈ ಕಾಯಿದೆಯ ಸಮಗ್ರ ಜಾರಿಗೆ ಕಾಂಗ್ರೆಸ್ ಪಕ್ಷ ಹಾಗೂ ಸರಕಾರ ಮತ್ತಷ್ಟು ಪ್ರಬುದ್ಧವಾಗಿ ನಡೆದುಕೊಳ್ಳಬೇಕಿದೆ.

WhatsApp Image 2025 12 18 at 6.38.33 PM
ಖಾಸಿಂ ಸಾಬ್ ಎ, ಬೆಂಗಳೂರು
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...