ʼಪ್ರೆಸ್ ಕ್ಲಬ್ ಆಫ್ ಇಂಡಿಯಾʼದ ಮೊದಲ ಮಹಿಳಾ ಅಧ್ಯಕ್ಷೆ ಸಂಗೀತಾ ಬರೂಹಾ ಪಿಶಾರೋಟಿ

Date:

ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ)ದ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆಯಾಗಿ ಸಂಗೀತಾ ಬರೂಹಾ ಪಿಶಾರೋಟಿ ಅವರು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಭಾರೀ ಮತ ಗಳಿಸಿ ಗೆದ್ದ ಸಂಗೀತಾ ಅವರು ಇತಿಹಾಸ ನಿರ್ಮಿಸಿದ್ದಾರೆ. ಚುನಾವಣೆಯಲ್ಲಿ ಪಿಶಾರೋಟಿ 1,019 ಮತಗಳನ್ನು ಗಳಿಸಿದರೆ, ಅವರ ಎದುರಾಳಿಗಳಾದ ಅತುಲ್ ಮಿಶ್ರಾ 129 ಮತ್ತು ಅರುಣ್ ಶರ್ಮಾ 89 ಮತಗಳನ್ನು ಗಳಿಸಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾ ದೇಶದ ಪತ್ರಕರ್ತರ ಅತ್ಯಂತ ಹಳೆಯ ಮತ್ತು ಪ್ರಭಾವಶಾಲಿ ಸಂಘಟನೆಗಳಲ್ಲಿ ಒಂದಾಗಿದ್ದು, ಇದರ ಕಚೇರಿ ನವದೆಹಲಿಯಲ್ಲಿದೆ. 1957ರ ಡಿಸೆಂಬರ್ 20ರಂದು ಪಿಸಿಐ ಸ್ಥಾಪಿಸಲಾಗಿದ್ದು, ಹಿರಿಯ ಪತ್ರಕರ್ತ ಮತ್ತು ‘ಹಿಂದೂಸ್ತಾನ್ ಟೈಮ್ಸ್’ನ ಅಂದಿನ ಮುಖ್ಯ ಸಂಪಾದಕರಾಗಿದ್ದ ದುರ್ಗಾ ದಾಸ್ ಅವರು ಸ್ಥಾಪಿಸಿದ್ದರು.

ಇದನ್ನು ಓದಿದ್ದೀರಾ? 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಬೆಂಗಳೂರು ಪ್ರೆಸ್‌ಕ್ಲಬ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುರ್ಗಾ ದಾಸ್ ಅವರು 1930ರ ದಶಕದಲ್ಲಿ ಲಂಡನ್‌ ಪ್ರೆಸ್‌ ಕ್ಲಬ್‌ಗೆ ಭೇಟಿ ನೀಡಿದ್ದು, ಅದೇ ಮಾದರಿಯ ಸಂಘಟನೆ ಭಾರತದಲ್ಲಿಯೂ ಇರಬೇಕು ಎಂದೆನಿಸಿ ದೇಶದಲ್ಲಿ ಸ್ಥಾಪಿಸಿದ್ದರು. ಹಿರಿಯ ಪತ್ರಕರ್ತ ಡಿ. ಆರ್. ಮಂಕೇಕರ್ ಪಿಸಿಐನ ಮೊದಲ ಪ್ರಧಾನ ಕಾರ್ಯದರ್ಶಿಯಾಗಿದ್ದರು. 1957ರಲ್ಲಿ ಪಿಸಿಐ ಸ್ಥಾಪಿಸಲಾಗಿದ್ದರೂ, ಈವರೆಗೂ ಒಂದೇ ಒಂದು ಬಾರಿಯೂ ಯಾವುದೇ ಮಹಿಳೆಯರು ಅಧ್ಯಕ್ಷಗಿರಿಯನ್ನು ಪಡೆದಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಸಂಗೀತಾ ಅವರು ಪ್ರತಿಸ್ಪರ್ಧಿಗಳಿಗಿಂತ ಅತ್ಯಧಿಕ ಮತವನ್ನು ಪಡೆದು ಅಧ್ಯಕ್ಷೆಯಾಗಿದ್ದಾರೆ.

ಜತೆಗೆ ಸಂಗೀತಾ ಅವರ ತಂಡವು ಎಲ್ಲ ಕಚೇರಿ ಮತ್ತು ವ್ಯವಸ್ಥಾಪಕ ಸಮಿತಿ ಹುದ್ದೆಗಳನ್ನು ಗೆದ್ದುಕೊಂಡಿದೆ. 21 ಸ್ಥಾನಗಳನ್ನೂ ಕ್ಲೀನ್‌ ಸ್ವೀಪ್ ಮಾಡಿದೆ. ಉಪಾಧ್ಯಕ್ಷರಾಗಿ ಜತಿನ್ ಗಾಂಧಿ 1,029 ಮತಗಳನ್ನು ಪಡೆದರೆ, ಪ್ರಧಾನ ಕಾರ್ಯದರ್ಶಿಯಾಗಿ ಅಫ್ಜಲ್ ಇಮಾಮ್ 948 ಮತಗಳೊಂದಿಗೆ ಆಯ್ಕೆಯಾಗಿದ್ದಾರೆ. ಅದಿತಿ ರಜಪೂತ್ ಖಜಾಂಚಿಯಾಗಿ ಮತ್ತು ಪಿ.ಆರ್.ಸುನೀಲ್ ಕುಮಾರ್ ಜಂಟಿ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಫಲಿತಾಂಶದ ಬಳಿಕ ಮಾತನಾಡಿದ ಪಿಶಾರೋಟಿ, “ಮುಕ್ತ, ನ್ಯಾಯಸಮ್ಮತ ಮತ್ತು ಜವಾಬ್ದಾರಿಯುತ ಪತ್ರಿಕೋದ್ಯಮದ ಮೌಲ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯ ಮೇಲೆ ಸದ್ಯಸರಿಗೆ ವಿಶ್ವಾಸವಿರುವುದಕ್ಕೆ ಈ ಗೆಲವು ಸಾಕ್ಷಿ” ಎಂದು ಹೇಳಿದ್ದಾರೆ. ಹಾಗಾದರೆ ಯಾರು ಈ ಇತಿಹಾಸ ಸೃಷ್ಟಿಸಿದ ಸಂಗೀತಾ ಬರೂಹಾ ಎಂದು ತಿಳಿಯೋಣ.

ಈಶಾನ್ಯ ಭಾರತದ ಸಂಗೀತಾ ಬರೂಹಾ ಪಿಶಾರೋಟಿ

ಅಸ್ಸಾಂನ ಗೋಲಾಘಾಟ್‌ನಲ್ಲಿ ಜನಿಸಿದ ಸಂಗೀತಾ ಅವರು 1995ರಲ್ಲಿ ಗುವಾಹಟಿ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. ಸದ್ಯ ನವದೆಹಲಿಯಲ್ಲಿಯೇ ನೆಲೆಸಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳಿಗೂ ಅಧಿಕ ಅನುಭವ ಹೊಂದಿರುವ ಸಂಗೀತಾ, ಈಶಾನ್ಯ ಭಾರತದಿಂದ ದೆಹಲಿಗೆ ಬಂದು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಪ್ರಮುಖ ಪತ್ರಕರ್ತರಾಗಿದ್ದಾರೆ.

1996ರಲ್ಲಿ ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (UNI) ಸುದ್ದಿಸಂಸ್ಥೆಯ ನವದೆಹಲಿ ಪ್ರಧಾನ ಕಚೇರಿಯಲ್ಲಿ ಉದ್ಯೋಗಕ್ಕೆ ಸೇರುವ ಮೂಲಕ ತಮ್ಮ ವೃತ್ತಿ ಜೀವನವನ್ನು ಸಂಗೀತಾ ಆರಂಭಿಸಿದರು. ಈ ಮೂಲಕ ಆ ಕಚೇರಿಯಲ್ಲಿ ನೇಮಕಗೊಂಡ ಈಶಾನ್ಯ ಭಾರತದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೂ ಪಾತ್ರರಾದವರು ಸಂಗೀತಾ. ‘ದಿ ಹಿಂದೂ’ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿಯೂ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ‘ದಿ ವೈರ್’ ಡಿಜಿಟಲ್ ಸುದ್ದಿ ಮಾಧ್ಯಮದ ರಾಷ್ಟ್ರೀಯ ವ್ಯವಹಾರಗಳ ಸಂಪಾದಕಿಯಾಗಿ (National Affairs Editor) ಕಾರ್ಯನಿರ್ವಹಿಸುತ್ತಿದ್ದಾರೆ.

ಈಶಾನ್ಯ ಭಾರತದ ರಾಜಕೀಯ ಮತ್ತು ಸಂಸ್ಕೃತಿಯ ಕುರಿತು ಆಳವಾದ ಅಧ್ಯಯನ ನಡೆಸಿರುವ ಸಂಗೀತಾ ಎರಡು ಪುಸ್ತಕಗಳನ್ನು ಬರೆದಿದ್ದಾರೆ. ಮೊದಲನೆಯದಾಗಿ Assam: The Accord, The Discord ಎಂಬ ಪುಸ್ತಕವನ್ನು 2019ರಲ್ಲಿ ಬರೆದಿದ್ದಾರೆ. ಈ ಪುಸ್ತಕವು ಅಸ್ಸಾಂ ಒಪ್ಪಂದ ಮತ್ತು ರಾಜ್ಯದ ರಾಜಕೀಯ ಸ್ಥಿತಿಗತಿಗಳ ಕುರಿತಾದ ಮಾಹಿತಿಗಳನ್ನು ಒಳಗೊಂಡಿದೆ. The Assamese: A Portrait of a Community ಎಂಬ ಪುಸ್ತಕವನ್ನೂ ಸಂಗೀತಾ ಬರೆದಿದ್ದು, ಇದು ಅಸ್ಸಾಮಿ ಸಮುದಾಯದ ಸಂಸ್ಕೃತಿ ಮತ್ತು ಇತಿಹಾಸವನ್ನು ಬಿಂಬಿಸುವ ಕೃತಿಯಾಗಿದೆ.

ಅಸ್ಸಾಂನ ಬ್ರಹ್ಮಪುತ್ರ ನದಿಯಲ್ಲಿರುವ ಏಷ್ಯಾದ ಅತಿದೊಡ್ಡ ನದಿ ದ್ವೀಪವಾದ ಮಜುಲಿ ಪ್ರತಿವರ್ಷ ಎದುರಿಸುತ್ತಿರುವ ಮಣ್ಣಿನ ಸವೆತ ಮತ್ತು ಅದರಿಂದ ಸ್ಥಳೀಯರ ಜೀವನೋಪಾಯಕ್ಕೆ ಉಂಟಾಗುತ್ತಿರುವ ನಷ್ಟದ ಬಗ್ಗೆ ‘ದಿ ಹಿಂದೂ’ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಸಂಗೀತಾ ಬರೆದಿದ್ದರು. 2011ರಲ್ಲಿ ಬರೆದ ಈ ಸರಣಿ ವರದಿಗಳಿಗೆ ‘ಸೆಂಟರ್ ಫಾರ್ ಡೆವಲಪ್‌ಮೆಂಟ್ ಸ್ಟಡೀಸ್’ (CSDS) ಫೆಲೋಶಿಪ್ ಪಡೆದಿದ್ದಾರೆ.

ಹಾಗೆಯೇ 2017ರಲ್ಲಿ ದೆಹಲಿಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ವಸತಿ ತಾರತಮ್ಯದ ಕುರಿತು ಸಂಗೀತಾ ಬರೆದ ವಿಶೇಷ ವರದಿಯು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು. ವರದಿಯು ನಗರದಲ್ಲಿ ಮನೆ ಬಾಡಿಗೆಗೆ ಪಡೆಯುವಾಗ ಧರ್ಮದ ಆಧಾರದಲ್ಲಿ ನಡೆಯುವ ತಾರತಮ್ಯವನ್ನು ಬಹಿರಂಗಪಡಿಸಿತ್ತು. ಈ ವರದಿಗೆ ಪ್ರತಿಷ್ಠಿತ ರಾಮನಾಥ್ ಗೋಯೆಂಕಾ ಎಕ್ಸಲೆನ್ಸ್ ಇನ್ ಜರ್ನಲಿಸಂ ಪ್ರಶಸ್ತಿ ಲಭಿಸಿದೆ.

ಇದನ್ನು ಓದಿದ್ದೀರಾ? ನೆನಪು | ಸ್ಸಾರಿ ಪ್ರೊಫೆಸರ್… ಪೂರ್ವಗ್ರಹಪೀಡಿತನಾಗಿದ್ದೆ!

ಇದನ್ನು ಹೊರತುಪಡಿಸಿದ್ದಂತೆ ಇತ್ತೀಚೆಗೆ ಮಣಿಪುರ ಸಂಘರ್ಷದ ಬಗ್ಗೆ, ಚಕ್ಮಾ ಮತ್ತು ಹಾಜಾಂಗ್ ಸಮುದಾಯಗಳ ಪೌರತ್ವ ವಿವಾದದ ಕುರಿತು, ಅಸ್ಸಾಂನಲ್ಲಿ ಎನ್.ಆರ್.ಸಿ ಜಾರಿ ಮತ್ತು ಅಲ್ಲಿನ ನಾಗರಿಕತ್ವದ ಸಮಸ್ಯೆಗಳ ಕುರಿತು, ಲಡಾಖ್ ರಾಜ್ಯ ಸ್ಥಾನಮಾನಕ್ಕಾಗಿ ಹೋರಾಡುತ್ತಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಂಧನ ಮೊದಲಾದವುಗಳ ಬಗ್ಗೆ ವಿಶ್ಲೇಷಣಾತ್ಮಕ ವರದಿಗಳನ್ನು ನಿರಂತರವಾಗಿ ಬರೆದಿದ್ದಾರೆ. ಅಸ್ಸಾಂನ ರಾಜ್ಯಗೀತೆ ‘ಓ ಮುರ್ ಅಪುನರ್ ದೇಶ್’ ಬಗ್ಗೆ ಐತಿಹಾಸಿಕ ಸಂಶೋಧನಾ ವರದಿಯನ್ನೂ ಸಂಗೀತಾ ಬರೆದಿದ್ದಾರೆ.

ತಮ್ಮ ವೃತ್ತಿ ಜೀವನದ ಆರಂಭದಲ್ಲಿಯೇ ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ ಸುದ್ದಿ ಸಂಸ್ಥೆಯ ಮೊದಲ ಈಶಾನ್ಯ ಭಾರತದ ಮಹಿಳಾ ಪತ್ರಕರ್ತೆ ಎಂಬ ಹೆಗ್ಗಳಿಕೆ ಪಡೆದ ಸಂಗೀತಾ, ಈಗ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಇತಿಹಾಸ ಬರೆದಿದ್ದಾರೆ. ಸಂಗೀತಾ ನೇತೃತ್ವದಲ್ಲಿ ಪತ್ರಕರ್ತರ ಹಿತರಕ್ಷಣೆಗಾಗಿ ಪಿಸಿಐ ಕಾರ್ಯನಿರ್ವಹಿಸುತ್ತದೆ ಮತ್ತು ಪತ್ರಕರ್ತರ ಮೇಲಿನ ದಾಳಿ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾದಾಗ ಧ್ವನಿ ಎತ್ತುತ್ತದೆ ಎಂಬ ನಿರೀಕ್ಷೆ ನಮ್ಮದು.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...