ಮಂಡ್ಯ ಸಮ್ಮೇಳನ | ಜೋಶಿಯವರು ಸಾಹಿತ್ಯ ವೇದಿಕೆಯನ್ನು ರಾಡಿ ಎಬ್ಬಿಸಲು ಹೊರಟಿದ್ದಾರೆಯೇ?

Date:

ಪತ್ರಿಕೆಯೊಂದರ ಸಂದರ್ಶನದಲ್ಲಿ ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಯವರು “26 ಮಠಾಧೀಶರು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಮನವಿ ಸಲ್ಲಿಸಿದ್ದಾರೆ” ಎಂದು ಹೇಳಿದ್ದಾರೆ. ಇವರಾಗಿಯೇ ಆಮಂತ್ರಿಸಿದ್ದಾರೋ ಅಥವಾ ಮಠಮಾನ್ಯಗಳೇ ಆಸಕ್ತಿ ವಹಿಸಿವೆಯೇ ಎಂಬುದು ಕನ್ನಡಿಗರಿಗೆ ಅರ್ಥವಾಗದ ಸಂಗತಿಯೇನಲ್ಲ.

ಈ ನಾಡಿನ ಸಂಸ್ಕೃತಿಯ ಪ್ರತೀಕವಾದ ಸಾಹಿತ್ಯ ಪರಿಷತ್‌ಗೆ ಆರಿಸಿ ಬಂದ ಸಾಹಿತ್ಯೇತರ ಸರ್ಕಾರಿ ವ್ಯಕ್ತಿಗಳು ಜಾತಿ ಬಲ, ಅಧಿಕಾರ ಬಲ, ಹಣ ಬಲ ಇತ್ಯಾದಿ ಲಾಬಿಗಳನ್ನು ನಡೆಸಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾಯಿತರಾಗಿ ಬರುವ ಪ್ರಕ್ರಿಯೆಯೇ ನಮ್ಮ‌ ಕಾಲದ ಕೆಟ್ಟ ನೀತಿಯಾಗಿದೆ. ಇಂತಹ ದುರಂತದ ಕಾಲದಲ್ಲಿ ನಾವು ಅಂತಹ ಮಹನೀಯರಿಂದ ನಿರೀಕ್ಷೆಗಳನ್ನಿಟ್ಟುಕೊಳ್ಳುವುದೇ ಹಾಸ್ಯಾಸ್ಪದ. ಇನ್ನು ಈಗಿನ ಅಧ್ಯಕ್ಷ ಆರೆಸ್ಸೆಸ್ ಕೃಪಾಪೋಷಿತ ನಾಟಕ ಕಂಪನಿಯ ಮರಿ ನಟನೆಂಬುದು ಕನ್ನಡಿಗರಿಗೆ ಗೊತ್ತಿಲ್ಲವೇ? 

ಇವರು ಕಸಾಪಕ್ಕೆ ಬಂದು ವಕ್ಕರಿಸಿದ ದಿನದಿಂದ ಒಂದಲ್ಲಾ ಒಂದು ವಿವಾದಗಳನ್ನು ಸೃಷ್ಟಿಸುತ್ತಲೇ ಬಂದಿದ್ದಾರೆ. ಹಾವೇರಿಯಲ್ಲಿ ನಡೆದ ಸಮ್ಮೇಳನವನ್ನು ನೆನಪಿಸಿಕೊಳ್ಳಿ, ಅವರ ಸೈದ್ಧಾಂತಿಕ ನಿಲುವುಗಳು ಸಾಹಿತ್ಯದ ಒಳಗೊಳ್ಳುವ ಭಾಷೆಗೆ ಒಗ್ಗುವ ಗುಣವುಳ್ಳದ್ದಲ್ಲ. ಸಾಹಿತ್ಯ ಪರಿಷತ್ತಿನ ಎಲ್ಲ ನಿಯಮ‌ ಕಾನೂನುಗಳನ್ನು ಕೇಂದ್ರೀಕರಣಗೊಳಿಸುವ ಸರ್ವಾಧಿಕಾರಿ ಪ್ರಯತ್ನಗಳನ್ನು ಸಾಬೀತುಗೊಳಿಸಿದ್ದಾಗಿದೆ. ಈ ಬಾರಿಯ ಮಂಡ್ಯದಲ್ಲಿ ನಡೆಯುವ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುಂಚೆಯೇ ಸಮ್ಮೇಳನಾಧ್ಯಕ್ಷರು ಸಾಹಿತ್ಯೇತರರಾಗಿರಬಾರದೇಕೆ? ಎಂಬ ಹೇಳಿಕೆ ನೀಡಿ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಯುಕ್ತ ಕರ್ನಾಟಕ ನಡೆಸಿದ ಅವರ ಸಂದರ್ಶನದಲ್ಲಿ 26 ಮಠಾಧೀಶರುಗಳು (ಸರ್ವಾಧ್ಯಕ್ಷತೆಗೆ)  ಮನವಿ ಸಲ್ಲಿಸಿದ್ದಾರೆಂಬ ಮಾತನ್ನು ಹೇಳಿದ್ದಾರೆ. ಇವರಾಗಿಯೇ ಆಮಂತ್ರಿಸಿದ್ದಾರೋ ಅಥವಾ ಮಠಮಾನ್ಯರುಗಳೇ ಆಸಕ್ತಿ ವಹಿಸಿದ್ದಾರೋ ಎಂಬುದು ಕನ್ನಡಿಗರಿಗೆ ಅರ್ಥವಾಗದ ಸಂಗತಿಯೇನಲ್ಲ. ಆದರೆ ಸಂದರ್ಶಕ ಕೇಳಿದ ಎಲ್ಲ ಪ್ರಶ್ನೆಗಳಿಗೂ ನೇರವಾಗಿ ಉತ್ತರಿಸದೇ ಅಡ್ಡಗೋಡೆಯ ಮೇಲೆ ದೀಪವಿಡುವ ಚತುರ ಜೋಶಿ ಈಗಾಗಲೇ ಸಮ್ಮೇಳನದ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಿರಲೂಬಹುದು. ಬಹಿರಂಗಪಡಿಸದೇ ಚರ್ಚೆ ಮಾಡಿಕೊಳ್ಳುವವರು ಮಾಡಿಕೊಳ್ಳಲಿ ಎಂಬ ನಡೆಯಿದು. ಹಿಂದೆ ದೊಡ್ಡರಂಗೇಗೌಡರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ನೇಮಿಸಿದಾಗಲೂ ಇಂತಹುದೇ ಚರ್ಚೆ ಆಗಿತ್ತು. ಈಗಲೂ ಗಂಟಲು ಹರಿದುಕೊಳ್ಳುವವರು ಹರಿದುಕೊಳ್ಳಲಿ, ತನಗೇನು ಎಂಬ ದುರಹಂಕಾರ ಅವರ ಧೋರಣೆಯಲ್ಲಿದೆ.

ಇದನ್ನೂ ಓದಿ ಕರ್ನಾಟಕದಲ್ಲಿ ಸಾಹಿತಿಗಳಿಗೆ ಬರವಿದೆಯೇ? ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಯೇ ಅಧ್ಯಕ್ಷರಾಗಲಿ; ಚಿಂತಕರ ಒತ್ತಾಯ

ಈ ಚರ್ಚೆಯ ಪರಿಣಾಮಗಳೇನೇ ಇರಲಿ ಈ ಬಾರಿಯಾದರೂ ಮಹಿಳಾ ಪ್ರತಿನಿಧೀಕರಣಕ್ಕೆ ಆದ್ಯತೆ ನೀಡಿ. ಕನ್ನಡ ನಾಡು ನುಡಿಗಾಗಿ ದುಡಿದ ಹಿರಿಯ ಡಾ. ಮಾಲತಿ ಪಟ್ಟಣಶೆಟ್ಟಿ, ಡಾ. ವೀಣಾ ಶಾಂತೇಶ್ವರ, ಸಬಿಹಾ ಭೂಮಿಗೌಡ ಮುಂತಾದ ಅನೇಕ ಲೇಖಕಿಯರಿದ್ದಾರೆ. ದನಿಯೇ ಇರದ ತಳಸಮುದಾಯದ ಸಾಹಿತಿಗಳಿದ್ದಾರೆ. ಅಂಥವರಿಗೆ ಅವಕಾಶ ಸಿಗುವಂತಾಗಬೇಕು. ನುಡಿಜಾತ್ರೆ ರಾಜಕೀಯದ ವೇದಿಕೆಯಾಗಬಾರದು. ಮಠಾಧೀಶರುಗಳಿಗೆ, ರಾಜಕಾರಣಿಗಳಿಗೆ, ಕಾರ್ಪೊರೇಟ್ ಧಣಿಗಳಿಗೆ ಬೇರೆ ವೇದಿಕೆಗಳಿವೆ. ಸಾಹಿತ್ಯದ ವೇದಿಕೆಯನ್ನು ರಾಡಿಗೊಳಿಸುವ ಈ ಹುನ್ನಾರ ಖಂಡಿತವಾಗಿ ಬೇಡ. 

WhatsApp Image 2025 11 17 at 5.18.15 PM
ರೇಣುಕಾ ನಿಡಗುಂದಿ
+ posts

ಲೇಖಕಿ, ದೆಹಲಿ ನಿವಾಸಿ

ಪೋಸ್ಟ್ ಹಂಚಿಕೊಳ್ಳಿ:

ರೇಣುಕಾ ನಿಡಗುಂದಿ
ರೇಣುಕಾ ನಿಡಗುಂದಿ
ಲೇಖಕಿ, ದೆಹಲಿ ನಿವಾಸಿ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...