ಸ್ವಾತಂತ್ರ್ಯ ಚಳುವಳಿಯ ಅದಮ್ಯ ಚೇತನ ಮುರಗೋಡ ಮಾದೇವಪ್ಪ

Date:

ಸ್ವಾತಂತ್ರ್ಯ ಹೋರಾಟಗಾರ ಮುರಗೋಡ ಮಾದೇವಪ್ಪ ಅವರು ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ೧೯೧೫ ನವೆಂಬರ್ ೨ ರಂದು ತಂದೆ ಶಿವಪ್ಪ ತಾಯಿ ಕಾಳಮ್ಮನವರ ಉದರದಲ್ಲಿ ಜನಿಸಿದವರೇ ಮಾದೇವಪ್ಪನವರು. ತಂದೆಯ ಮೂಲಕ ಆಧ್ಯಾತ್ಮದಲ್ಲಿ ಆಸಕ್ತಿಯನ್ನು ಅಳವಡಿಸಿಕೊಂಡು, ಗುರು ಗಿರಿಮಲ್ಲೇಶ್ವರರಿಂದ ಉಪದೇಶ ಪಡೆದರು.

ಶಿಕ್ಷಣದ ಜೊತೆ-ಜೊತೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಆಸಕ್ತಿ ಹೊಂದಿದ ಮಾದೇವಪ್ಪನವರು ಹಲವಾರು ಯೋಜನೆಗಳನ್ನು ಹಾಕಿದವರು. ಆಧ್ಯಾತ್ಮದ ತಳಹದಿಯ ಮೇಲೆ ರಾಜಕಾರಣವನ್ನು ಮಾಡಬೇಕೆನ್ನುವ ವಿಚಾರ ಹೊಂದಿದವರಾಗಿದ್ದರು. ಇನ್ನು ಸ್ವಾತಂತ್ರ್ಯ ಹೋರಾಟದ ಸಂದರ್ಭಕ್ಕೆ ಹುಬ್ಬಳ್ಳಿಯ ಶ್ರೀ ಗಿರೀಶ ಆಶ್ರಮ ಹಾಗೂ ಇಂಚಗೇರಿ ಮಠದ ಮೂಲಕವಾಗಿ ಪುರುಷ, ಮಹಿಳಾ ಸೇನೆಯನ್ನು ಸಿದ್ಧಮಾಡಿಕೊಂಡು ಇಂಗ್ಲೀಷರಿಗೆ ಸಿಂಹಸ್ವಪ್ನವಾಗಿ ನಿಂತವರು.

ಆಧ್ಯಾತ್ಮ ವಲಯದಲ್ಲಿ ಗುರುಗಳಾದ ಸದ್ಗುರು ಗಿರಿಮಲ್ಲೇಶ್ವರ ಮಹಾರಾಜರಿಂದ ‘ದೇವರು’ ಎನಿಸಿಕೊಂಡ ಗುರುವರ್ಯರು. ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಶ್ರೀಮಠದ ಭಕ್ತರಿಂದ ಹಣ ಕೂಡಿಸಿ ಅದರಿಂದ ಸ್ವಾತಂತ್ರ್ಯ ಚಳುವಳಿಗೆ ಬೇಕಾದ ಪರಿಕರಗಳನ್ನು ಒಗ್ಗೂಡಿಸಿರುವುದನ್ನು ಮರೆಯುವಂತಿಲ್ಲ. ಅಂತಹ ಸ್ವಾತಂತ್ರ್ಯ ಸೇನಾನಿಯ ಕುರಿತು ಇಂದಿಗೂ ಎಲ್ಲಿಯೂ ಕೂಡ ಸರ್ಕಾರ ಪಠ್ಯಗಳನ್ನು ವಿದ್ಯಾರ್ಥಿಗಳಿಗಾಗಲೀ, ಸಾಹಿತ್ಯದಲ್ಲಾಗಲೀ ಗುರುತಿಸದೇ ಇರುವುದು ಬೇಸರದ ಸಂಗತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಾಂತಿಕಾರಿ ಧ್ಯೇಯಗಳಿಂದ ರಾಷ್ಟೀಯ ಆಯಾಮವನ್ನು ಪಡೆದುಕೊಂಡು, ಕಟು ಸಂಪ್ರದಾಯ, ಕಂದಾಚಾರಗಳನ್ನು ಖಂಡಿಸುತ್ತಾ ಬರುತ್ತಾರೆ ಮಾದೇವಪ್ಪನವರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಶೋಷಿತರ ಪರವಾಗಿ ಹಾಗೂ ಅನ್ಯಾಯಗಳ ವಿರುದ್ಧ ಹೋರಾಟ ನಡೆಸಿದರು. ಅವರ ಹೇಳಿದ ವಾಣಿ ಇಂದಿಗೂ ಪ್ರಸ್ತುತ ಅದೇನೆಂದರೆ, “ಯಾರು ಜನತಾ ಜನಾರ್ಧನನ ಸೇವೆ ಮಾಡುವಲ್ಲಿ ಧುಮುಕುವರೋ ಅವರು ಅಮೃತ ಪಾನ ಮಾಡಿ ಅಮರರಾಗುವರು.” ಎಂಬ ವಾಣಿಯು ಅವರು ಮಾಡಿರುವ ಸೇವಾ ಮನೋಭಾವನೆಯನ್ನು ಗುರುತಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಕುವೆಂಪು ಭಾಷಣ | ಕನ್ನಡ ನಾಡಿನ ರಾಜಧಾನಿಯಲ್ಲಿ ಕನ್ನಡವೇ ಸಾರ್ವಭೌಮ ಭಾ‍ಷೆ

ಈ ನಿಟ್ಟಿನಲ್ಲಿ ನವೆಂಬರ್ ೨ ರಂದು ಅವರ ಜಯಂತಿಯ ಪ್ರಯುಕ್ತ ಇಂಚಗೇರಿ ಆಧ್ಯಾತ್ಮ ಸಂಪ್ರದಾಯದ ಎಲ್ಲ ಆಶ್ರಮಗಳಲ್ಲಿ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. ಆ ನಿಟ್ಟಿನಲ್ಲಿ ನಾಡಿನ ಸಮಸ್ತ ಜನತೆಗೆ ಮಾದೇವಪ್ಪನವರ ವಿಚಾರಗಳನ್ನು ಮುಟ್ಟಿಸುವುದು ಪ್ರಸ್ತುತ ಲೇಖನದ ಆಶಯ.

ಬರಹ : ಡಾ. ರಾಮಚಂದ್ರ ಪಡೆಸೂರ. ಕೆ.ಎಲ್.ಇ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಗದಗ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...