ಮಣಿಪುರದಿಂದ ʼಈ ದಿನʼ ವರದಿ-8 | ಮ್ಯಾನ್ಮಾರ್‌ಗೆ ಪಲಾಯನಗೈದಿದ್ದ 200 ಮೈತೇಯಿಗಳು ಮರಳಿ ಮಣಿಪುರಕ್ಕೆ

Date:

ಮೋರೆಹ್ ಗಡಿಯಲ್ಲಿ ಈ ಬುಲೆಟ್ ಪ್ರೂಫ್ ವಾಹನಗಳು 5-ಅಸ್ಸಾಂ ರೈಫಲ್ಸ್‌ನ ಕೀ ಲೊಕೇಶನ್ ಪಾಯಿಂಟ್ (ಕೆಎಲ್‌ಪಿ) ಕ್ಯಾಂಪ್‌- ದಲಾಯಿ ಲಾಮಾ ಬೆಟಾಲಿಯನ್ ಆವರಣದಿಂದ ಮೋರೆಹ್‌ ಕಡೆ ತೆರಳಿರುವುದಕ್ಕೆ Eedina.com ಸಾಕ್ಷಿಯಾಗಿದೆ. ಸಂಪೂರ್ಣ ಕಾರ್ಯಾಚರಣೆಯು ಸುಮಾರು ಮೂರು ಗಂಟೆಗಳ ಕಾಲ ನಡೆಯಿತು ಎನ್ನಲಾಗಿದೆ.

ಮ್ಯಾನ್ಮಾರ್‌ಗೆ ಪಲಾಯನಗೈದಿದ್ದ ಸುಮಾರು 200 ಮೈತೇಯಿ ಜನರನ್ನು ಮಣಿಪುರ ಪೊಲೀಸರೊಂದಿಗೆ ಸೇರಿ ಭಾರತೀಯ ಅರೆಸೇನಾ ಪಡೆ ಶುಕ್ರವಾರ (ಆಗಸ್ಟ್ 18, 2023) ಯಶಸ್ವಿಯಾಗಿ ಮರಳಿ ಮಣಿಪುರಕ್ಕೆ ಕರೆತಂದಿದೆ. ಇವರು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ದಿನ, ಮೇ 3 ರಂದು ಮ್ಯಾನ್ಮಾರ್‌ಗೆ ಪಲಾಯನ ಮಾಡಿದ್ದರು.

ಅರೆಸೇನಾ ಪಡೆ ನಡೆಸಿದ ಈ ಅತಿ ದೊಡ್ಡ ಕಾರ್ಯಾಚರಣೆಯಲ್ಲಿ ಕಳೆದ ಕೆಲವು ವಾರಗಳಿಂದ ಸಣ್ಣ ಸಂಖ್ಯೆಯ ಮೈತೇಯಿಗಳನ್ನು ಮರಳಿ ತಮ್ಮ ರಾಜ್ಯಕ್ಕೆ ಕರೆತರಲಾಗಿದೆ.

ಗೂರ್ಖಾ ರೆಜಿಮೆಂಟಿನ ಸೈನಿಕರು, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಮಣಿಪುರ ಪೊಲೀಸರೊಂದಿಗೆ ಅಸ್ಸಾಂ ರೈಫಲ್ಸ್ 5ರ ತುಕಡಿಗಳು ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಶಸ್ತ್ರ ಪಡೆಗಳು ಭಾರತ-ಮ್ಯಾನ್ಮಾರ್ ಗಡಿಯಿಂದ ಮೈತೇಯಿಗಳನ್ನು ಬುಲೆಟ್ ಪ್ರೂಫ್ ವಾಹನಗಳಲ್ಲಿ ಅಂತರಾಷ್ಟ್ರೀಯ ಗಡಿ ಪಟ್ಟಣವಾದ ಮೋರೆಹ್ ಮೂಲಕ ಸುರಕ್ಷಿತವಾಗಿ ಮಣಿಪುರಕ್ಕೆ ಮರಳಿ ಕರೆತಂದಿವೆ.

assam rifals ೧
5-ಅಸ್ಸಾಂ ರೈಫಲ್ಸ್‌ನ ಕೀ ಲೊಕೇಶನ್ ಪಾಯಿಂಟ್ (ಕೆಎಲ್‌ಪಿ) ಕ್ಯಾಂಪ್‌- ದಲಾಯಿ ಲಾಮಾ ಬೆಟಾಲಿಯನ್ ಆವರಣ

ಕರ್ಫ್ಯೂ ಜಾರಿಯಲ್ಲಿದ್ದ ಸಮಯದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಯಿತು. ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು. ಮೊರೆಹ್‌ನಲ್ಲಿ ಮತ್ತೆ ಬೆಂಕಿ ಮತ್ತು ಗುಂಡಿನ ದಾಳಿಗಳಾದಂತೆ ಆರಂಭವಾದ ಜುಲೈ 26 ರ ಹಿಂಸಾಚಾರದ ನಂತರ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಮೋರೆಹ್ ಗಡಿಯಲ್ಲಿ ಈ ಬುಲೆಟ್ ಪ್ರೂಫ್ ವಾಹನಗಳು 5-ಅಸ್ಸಾಂ ರೈಫಲ್ಸ್‌ನ ಕೀ ಲೊಕೇಶನ್ ಪಾಯಿಂಟ್ (ಕೆಎಲ್‌ಪಿ) ಕ್ಯಾಂಪ್‌- ದಲಾಯಿ ಲಾಮಾ ಬೆಟಾಲಿಯನ್ ಆವರಣದಿಂದ ಮೊರೆಹ್‌ ಕಡೆ ತೆರಳಿರುವುದಕ್ಕೆ Eedina.com ಸಾಕ್ಷಿಯಾಗಿದೆ. ಸಂಪೂರ್ಣ ಕಾರ್ಯಾಚರಣೆಯು ಸುಮಾರು ಮೂರು ಗಂಟೆಗಳ ಕಾಲ ನಡೆಯಿತು ಎನ್ನಲಾಗಿದೆ.

ಈ ನಿರಾಶ್ರಿತರನ್ನು ಸದ್ಯ ತೆಂಗನೌಪಾಲ್ ಜಿಲ್ಲೆಯ ಮೋರೆಹ್ ಪಟ್ಟಣದ ಗಡಿಯಲ್ಲಿರುವ ಕೆಎಲ್‌ಪಿ ಶಿಬಿರದ ಆವರಣದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ರಕ್ಷಣಾ ಶಿಬಿರದಲ್ಲಿ ಇರಿಸಲಾಗಿದೆ. ಮುಂದೆ ಇವರನ್ನು ರಾಜ್ಯ ರಾಜಧಾನಿಗೆ ಸ್ಥಳಾಂತರಿಸಲಾಗುತ್ತದೆ.

assam rifles
ಮೈತೇಯಿಗಳನ್ನು ಕರೆತರಲು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮಣಿಪುರದ ತೆಂಗನೌಪಾಲ್ ಜಿಲ್ಲೆಯ ಮೋರೆಹ್‌ ಪಟ್ಟಣದ ಗಡಿಯಲ್ಲಿರುವ ಕೆಎಲ್‌ಪಿ ಕ್ಯಾಂಪ್‌ನಿಂದ ಭಾರತ-ಮ್ಯಾನ್ಮಾರ್ ಗಡಿಗೆ ಹೊರಡಲು ತಯಾರಾಗುತ್ತಿದ್ದ ದೃಶ್ಯ- ಈದಿನ.ಕಾಮ್‌

ಮಣಿಪುರದಾದ್ಯಂತ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 250 ಕ್ಕೂ ಹೆಚ್ಚು ಜನರು ಮ್ಯಾನ್ಮಾರ್‌ಗೆ ಪಲಾಯನ ಮಾಡಿದ್ದರು.

ಇವರು ಮ್ಯಾನ್ಮಾರ್‌ನ ಬೌದ್ಧ ವಿಹಾರವೊಂದರಲ್ಲಿ ಆಶ್ರಯ ಪಡೆದಿದ್ದರು. ಮ್ಯಾನ್ಮಾರ್‌ನ ಅಸ್ಥಿರ ಪರಿಸ್ಥಿತಿಯ ಕಾರಣದಿಂದ ಹತಾಶೆಗೊಂಡು ಮಣಿಪುರಿ ಸರ್ಕಾರವನ್ನು ಸಂಪರ್ಕಿಸಿ ತಮ್ಮನ್ನು ರಕ್ಷಿಸುವಂತೆ ಕೇಳಿಕೊಂಡಿದ್ದರು.

ಮ್ಯಾನ್ಮಾರ್ ಸೇನೆ ಮತ್ತು ಜುಂಟಾ ವಿರೋಧಿ ಬಂಡುಕೋರರ ನಡುವಿನ ಹೊಡೆದಾಟ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲವಾದ್ದರಿಂದ ಮ್ಯಾನ್ಮಾರ್ ಕೂಡ ಹೊತ್ತಿ ಉರಿಯುತ್ತಿದೆ.

ಮಣಿಪುರ ಹಿಂಸಾಚಾರ ಆರಂಭವಾಗುವ ಮೊದಲು ಮೋರೆಹ್‌ನಲ್ಲಿ ಸುಮಾರು 4,000 ಮೈತೇಯಿಗಳು ವಾಸಿಸುತ್ತಿದ್ದರು. ಹಿಂಸಾಚಾರ ಆರಂಭವಾದ ಸಂದರ್ಭದಲ್ಲಿ ಅಸ್ಸಾಂ ರೈಫಲ್ಸ್‌ ಇವರಲ್ಲಿ ಹೆಚ್ಚಿನವರನ್ನು ಮೋರೆಹ್‌ನಿಂದ ಸ್ಥಳಾಂತರಿಸಿತು ಮತ್ತು ಇಂಫಾಲ್ ಹಾಗೂ ಇತರ ಮೈತೇಯಿ ಸಮುದಾಯ ಪ್ರಬಲವಾಗಿರುವ ಪ್ರದೇಶಗಳಿಗೆ ಕರೆದೊಯ್ಯಿತು. ಮಿನಿ ಇಂಡಿಯಾ ಎಂದೂ ಕರೆಯಲ್ಪಡುವ ಮೋರೆಹ್, ಕುಕಿ-ಜೋ ಬುಡಕಟ್ಟು ಜನಾಂಗದವರು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶವಾಗಿದೆ.

WhatsApp Image 2025 11 17 at 3.17.14 PM
ಅಶ್ವಿನಿ ವೈ ಎಸ್‌
+ posts

ಪತ್ರಕರ್ತೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...