ವಿಜಯಪುರ | ಪವಿತ್ರ ರಂಜಾನ್‌: ಬೆಲೆ ಏರಿಕೆ ಬಿಸಿ ಮಧ್ಯೆಯೂ ಕಳೆಗಟ್ಟಿದ ಮಾರುಕಟ್ಟೆಗಳು

Date:

ಪವಿತ್ರ ರಂಜಾನ್ ಮಾಸದ ಕಠಿಣ ಉಪವಾಸ (ರೋಜಾ) ಮುಕ್ತಾಯದ ಹಂತಕ್ಕೆ ತಲುಪಿದ್ದು, ಮುಸ್ಲಿಂ ಬಾಂಧವರು ‘ಈದ್-ಉಲ್-ಪಿತರ್‌’ ಸಂಭ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿಜಯಪುರದ ಮಾರುಕಟ್ಟೆಗಳಲ್ಲಿ ಹಬ್ಬದ ಕಳೆ ಮನೆಮಾಡಿದ್ದರೂ, ಈ ಬಾರಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯ ಬಿಸಿಯ ನಡುವೆಯೂ ಗ್ರಾಹಕರು ಹೊಸ ಬಟ್ಟೆ, ಆಭರಣ ಹಾಗೂ ಸಿಹಿ ಪದಾರ್ಥಗಳ ಖರೀದಿಯಲ್ಲಿ ತೊಡಗಿದ್ದು, ಮಾರುಕಟ್ಟೆಗಳು ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸುತ್ತಿವೆ.

ಹಬ್ಬದ ಪ್ರಯುಕ್ತ ವಿಜಯಪುರ ನಗರದ ವಿವಿಧ ಶಾಪ್ಗಳಲ್ಲಿ ಚಪ್ಪಲಿ, ಬಟ್ಟೆ ಮೇಲಿನ ಶೇ.30 ರಿಂದ 40 ರಷ್ಟು ರಿಯಾಯಿತಿ ಗ್ರಾಹಕರನ್ನು ಸೆಳೆಯುತ್ತಿದೆ. ಒಂದು ಜೊತೆ ಬಟ್ಟೆ ತೆಗೆದುಕೊಳ್ಳುವಲ್ಲಿ ಗ್ರಾಹಕರು ಮೂರ್ನಾಲ್ಕು ಜೊತೆ ತೆಗೆದುಕೊಳ್ಳುತ್ತಿದ್ದಾರೆ. ಮಹಿಳೆಯರು ಕೂಡಾ ಬಟ್ಟೆ ಜತೆಗೆ ಚಪ್ಪಲಿ, ಆಭರಣ ಕೊಳ್ಳುವಲ್ಲಿ ಉತ್ಸುಕರಾಗಿದ್ದಾರೆ.

WhatsApp Image 2026 03 18 at 1.59.44 PM 1

ವಿಜಯಪುರ ನಗರದ ಕೆ ಸಿ ಮಾರುಕಟ್ಟೆಯಿಂದ ಟಿಪ್ಪು ಸುಲ್ತಾನ್ ಸರ್ಕಲ್, ಗಾಂಧಿ ವೃತ್ತದವರೆಗೂ ರಸ್ತೆಗಳು, ಮಸೀದಿಗಳು ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸುತ್ತಿವೆ. ಗಾಂಧಿ ಚೌಕ, ಕೆಸಿ ಮಾರ್ಕೆಟ್ ಗಳಲ್ಲಿ ರಂಜಾನ್ ಶಾಪಿಂಗ್‌ಗಾಗಿಯೇ ಕೆಲ ಹೊಸ ಅಂಗಡಿಗಳು ತಲೆಯೆತ್ತಿವೆ. ಮಹಿಳೆಯರು ಬಟ್ಟೆ, ಸೌಂದರ್ಯ ವರ್ಧಕ, ಮೆಹಂದಿ ಸೇರಿದಂತೆ ವಿಧ ವಿಧವಾದ ಆಭರಣಗಳನ್ನು ಖರೀದಿಸುವಲ್ಲಿ ನಿರತರಾಗಿದ್ದಾರೆ. ಪುರುಷರು ಹಬ್ಬಕ್ಕಾಗಿ ಹೊಸ ಬಟ್ಟೆ, ಟೋಪಿ, ಕರವಸ್ತ್ರ, ಸುಗಂಧ ದ್ರವ್ಯ ಖರೀದಿಸುವಲ್ಲಿ ನಿರತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಧ್ಯೆ ಮಾರುಕಟ್ಟೆಯಲ್ಲಿ ದಿನಸಿ ವಸ್ತುಗಳು ವಿಶೇಷವಾಗಿ ಸುರಕುಂಬ (ಶೀರ್‌ ಖುರ್ಮಾ) ಮಾಡಲು ಬೇಕಾಗುವ ಗೋಡಂಬಿ ಬಾದಾಮಿ ಸೇರಿದಂತೆ ಡ್ರೈ ಫ್ರೂಟ್ಸ್ ಹಾಗೂ ವಿವಿಧ ಮಸಾಲೆ ಪದಾರ್ಥಗಳು ಭರ್ಜರಿಯಾಗಿ ಮಾರಾಟವಾಗುತ್ತಿದ್ದರೂ, ಬೆಲೆ ಏರಿಕೆಯಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಕೊಂಚ ವ್ಯಾಪಾರ ಕುಂಠಿತವಾಗಿದೆ ಎನ್ನುತ್ತಾರೆ ಕೆಲ ವ್ಯಾಪಾರಿಗಳು.

WhatsApp Image 2026 03 18 at 1.59.44 PM 2

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪ್ರತಿ ಕೆಜಿಗೆ ಸುಮಾರು ರೂ.400ರಷ್ಟು ದರ ಏರಿಕೆಯಾಗಿದೆ. 120 ಇದ್ದ ಕೊಬ್ಬರಿ ಬೆಲೆ 350 ಆಗಿದೆ. ಕಳೆದ ವರ್ಷ ಸುರಕುಂಬ ಮಸಾಲೆ ಪ್ರತಿಯೊಂದು 50 ಗ್ರಾಂನಂತೆ ಕೇವಲ 600 ರಿಂದ 700ಗಳಲ್ಲಿ ಸಿಗುತ್ತಿತ್ತು. ಆದರೆ, ಅದು ಈ ಬಾರಿ 1200 ರಿಂದ 1300 ಆಗಿದೆ. ಹೀಗಾಗಿ ಗ್ರಾಹಕರು ಕೊಂಡುಕೊಳ್ಳುವ ಪ್ರಮಾಣ ಇಳಿಮುಖವಾಗಿದೆ ಎನ್ನುತ್ತಾರೆ ವ್ಯಾಪಾರಿ ಪ್ರವೀಣ ಕುಮಾರ.

ರಂಜಾನ್ ಹಬ್ಬ ನಮಗೆ ಅತ್ಯಂತ ಪವಿತ್ರ ಹಬ್ಬ. ನಾವು ಅತ್ಯಂತ ಸಡಗರದಿಂದ ಆಚರಿಸುತ್ತೇವೆ. ಈ ಹಬ್ಬದಲ್ಲಿ ಹೊಸಬಟ್ಟೆ ಖರೀದಿಸುತ್ತೇವೆ. ಆದರೆ ಈ ವರ್ಷ ಯುದ್ಧದ ಪರಿಣಾಮ ಖರೀದಿಸುವುದು ಬಹಳ ಕಷ್ಟವಾಗಿದೆ. ಆದರೂ ಇದ್ದದ್ದರಲ್ಲಿ ಖರೀದಿಸುತ್ತಿದ್ದೇವೆ ಎನ್ನುತ್ತಾರೆ ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಅಧ್ಯಕ್ಷ ಫಯಾಜ್ ಕಲಾದಗಿ.

WhatsApp Image 2026 03 18 at 1.59.44 PM

ಯುದ್ಧದಿಂದ ವ್ಯಾಪಾರ ಕುಸಿದಿರುವುದು ಸತ್ಯ. ಹೋದ ವರ್ಷ ಬೆಲೆ ಕಡಿಮೆ ಇತ್ತು. ವ್ಯಾಪಾರ ಛಲೋ ಇತ್ತು. ಆದರೆ ಈ ವರ್ಷ ವ್ಯಾಪಾರ ಮಾಡಲು ಬಹಳ ತೊಂದರೆ ಆಗಿದೆ ಎನ್ನುತ್ತಾರೆ ಅಶೋಕ ಕನ್ನೂರು.

ಇದನ್ನೂ ಓದಿ: ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

WhatsApp Image 2026 03 18 at 1.59.45 PM 1

ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಯುದ್ಧದ ಭೀತಿಯು ಸ್ಥಳೀಯ ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದರೂ, ಹಬ್ಬದ ಭಕ್ತಿ ಮತ್ತು ಸಡಗರಕ್ಕೆ ಯಾವುದೂ ಅಡ್ಡಿಯಾಗಿಲ್ಲ. ʼಖರ್ಚು ಹೆಚ್ಚಾದರೂ ಪವಿತ್ರ ಹಬ್ಬದ ಆಚರಣೆಯಲ್ಲಿ ಕುಂದು ಬರಬಾರದುʼ ಎಂಬ ಮನೋಭಾವದೊಂದಿಗೆ ಮುಸ್ಲಿಂ ಬಾಂಧವರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆಯ ಕಹಿಯ ನಡುವೆಯೂ ಈದ್ ಹಬ್ಬದ ಸಿಹಿಯನ್ನು ಸವಿಯಲು ವಿಜಯಪುರ ಜನತೆ ಸಜ್ಜಾಗಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ವಿಜಯಪುರ | ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...