ಏಕದಿನ ವಿಶ್ವಕಪ್ 2023 | ಆಸ್ಟ್ರೇಲಿಯಾಗೆ ಮೊದಲ ಗೆಲುವು; ಮೂರನೇ ಸೋಲು ಕಂಡ ಶ್ರೀಲಂಕಾ

Date:

ಐಸಿಸಿ ಏಕದಿನ ವಿಶ್ವಕಪ್ 2023ರ 14ನೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ತಂಡ ಸಂಘಟನಾತ್ಮಕ ಬೌಲಿಂಗ್‌  ದಾಳಿ ಹಾಗೂ ಉಪಯುಕ್ತ ಬ್ಯಾಟಿಂಗ್‌ ಪ್ರದರ್ಶಿಸಿ ಟೂರ್ನಿಯಲ್ಲಿ ಗೆಲುವಿನ ಮೊದಲ ಖಾತೆ ತೆರೆಯಿತು.

ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 210 ರನ್‌ಗಳ ಕಡಿಮೆ ಮೊತ್ತದ ಸವಾಲನ್ನು ಬೆನ್ನಟ್ಟಿದ ಆಸೀಸ್‌ ಪಡೆ 35.2 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ ಜಯಗಳಿಸಿತು. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸಿಂಹಳಿ ಪಡೆಗೆ ಇದು ಮೂರನೇ ಸೋಲಾಗಿದೆ.

ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ (58), ಮಾರ್ನಸ್ ಲ್ಯಾಬುಸ್ಚಾಗ್ನೆ(40), ಮಿಚೆಲ್ ಮಾರ್ಷ್(52)  ಶಿಸ್ತುಬದ್ಧಿನ ಆಟ ಹಾಗೂ ಆಡಮ್ ಝಂಪಾ(47/4),ಪ್ಯಾಟ್ ಕಮ್ಮಿನ್ಸ್(32/2),ಮಿಚೆಲ್ ಸ್ಟಾರ್ಕ್(43/2) ಅವರ ಮಾರಕ ಬೌಲಿಂಗ್‌ನಿಂದ ಶ್ರೀಲಂಕಾ ತಂಡವನ್ನು ಮಣಿಸಿ ಜಯದ ರೂವಾರಿಗಳೆನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೂರ್ನಿಯಲ್ಲಿ ಮೂರನೇ ಸೋಲು ಕಂಡಿರುವ ಶ್ರೀಲಂಕಾ ಸೆಮಿಫೈನಲ್‌ ಪ್ರವೇಶಿಸಲು ಮುಂದಿನ ಎಲ್ಲ ಪಂದ್ಯಗಳನ್ನು ಗೆಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ಇದಕ್ಕೂ ಮೊದಲು ಟಾಸ್‌ ಗೆದ್ದ ಶ್ರೀಲಂಕಾ ತಂಡದ ನಾಯಕ ಕುಸಾಲ್ ಮೆಂಡಿಸ್ ಬ್ಯಾಟಿಂಗ್ ಆಯ್ದುಕೊಂಡರು. ಕಾಂಗರೂ ಪಡೆ ಬೌಲಿಂಗ್‌ ದಾಳಿಗೆ ತತ್ತರಿಸಿದ ಲಂಕನ್ನರು 43.3 ಓವರ್​ಗಳಲ್ಲಿ 209 ರನ್​ಗಳಿಗೆ ಸರ್ವಪತನ ಕಂಡರು.

ಆರಂಭಿಕರಾಗಿ ಕಣಕ್ಕಿಳಿದ ಪಾತುಂ ನಿಸ್ಸಾಂಕ (61) ಮತ್ತು ಕುಸಾಲ್ ಪೆರೇರಾ(78) ಅದ್ಭುತ ಆಟದ ಮೂಲಕ ಕಾಂಗರೂ ಬೌಲರ್​​ಗಳನ್ನು ವಿಕೆಟ್​ಗಾಗಿ ಪರದಾಡುವಂತೆ ಮಾಡಿದರು. ವಿಶ್ವಶ್ರೇಷ್ಠ ಬೌಲಿಂಗ್ ಪಡೆ ಎದುರು ಜವಾಬ್ದಾರಿಯುತ ಇನ್ನಿಂಗ್ಸ್​ ಕಟ್ಟಿದರು. ಈ ಜೋಡಿ ಮೊದಲ ವಿಕೆಟ್​ಗೆ 125 ರನ್​ಗಳನ್ನು​ ಪೇರಿಸಿತು.

ನಿಸ್ಸಾಂಕ 67 ಎಸೆತಗಳಲ್ಲಿ 8 ಬೌಂಡರಿ ಸಹಿತ 61 ರನ್ ಸಿಡಿಸಿದರು. 82 ಎಸೆತಗಳಲ್ಲಿ 12 ಬೌಂಡರಿ ಸಹಿತ 78 ರನ್ ಗಳಿಸಿ ಔಟಾದರು. ಇವರಿಬ್ಬರು ಔಟಾದ ಬಳಿಕ ಯಾರೂ ಕ್ರೀಸ್​ ಕಚ್ಚಿ ನಿಲ್ಲಲಿಲ್ಲ. ಆರಂಭಿಕರು ವಿಕೆಟ್ ಒಪ್ಪಿಸಿದ ಬೆನ್ನಲ್ಲೇ ಶ್ರೀಲಂಕಾ ತಂಡದ ಪತನ ಆರಂಭವಾಯಿತು.

ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಕುಸಾಲ್ ಮೆಂಡೀಸ್ (9) ಮತ್ತು ಸದೀರ ಸಮರ ವಿಕ್ರಮ (8) ಬೇಗನೇ ವಿಕೆಟ್ ಒಪ್ಪಿಸಿ ತಂಡದ ಕುಸಿತಕ್ಕೆ ಕಾರಣರಾದರು. ಇಬ್ಬರನ್ನೂ ಆ್ಯಡಂ ಜಂಪಾ ಪೆವಿಲಿಯನ್‌ಗೆ ಅಟ್ಟಿದರು.

ಎರಡು ವಿಕೆಟ್ ಪಡೆದು ಮಿಂಚಿದ್ದ ಜಂಪಾ, ತಮ್ಮ ಸ್ಪಿನ್ ಮೋಡಿಯನ್ನು ಮತ್ತೆ ಮುಂದುವರೆಸಿದರು. ಚಮಿಕಾ ಕರುಣಾರತ್ನೆ (2), ಮಹೀಶ ತೀಕ್ಷಣರನ್ನು (0) ಎಲ್​ಬಿ ಬಲೆಗೆ ಬೀಳಿಸಿ 4 ವಿಕೆಟ್ ಕಬಳಿಸಿದರು.

ಅಂತಿಮವಾಗಿ ಶ್ರೀಲಂಕಾ 43.3 ಓವರ್​​​ಗಳಲ್ಲಿ 209 ರನ್​ಗಳಿಗೆ ಸರ್ವಪತನ ಕಂಡಿತು. ಆಸೀಸ್ ಪರ ಜಂಪಾ 4, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್​ ತಲಾ 2, ಮ್ಯಾಕ್ಸ್​ವೆಲ್​ 1 ವಿಕೆಟ್ ಪಡೆದು ಮಿಂಚಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...